ಬೆಳಗಾವಿ: ಶಿವಬಸವ ನಗರದಲ್ಲಿ (Shivabasava Nagara) ನಡೆದ ನಾಗರಾಜ್ ಗಾಡಿವಡ್ಡರ್ ಯುವಕನ (Youth) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಹಂತಕರ ಪೈಕಿ ಇಬ್ಬರು ಆರೋಪಿಗಳನ್ನು ಮಾಳಮಾರುತಿ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿಯ (Belagavi) ರಾಮನಗರದ ಗಾಡಿವಡ್ಡರ ನಿವಾಸಿ ನಾಗರಾಜ್ ಗಾಡಿವಡ್ಡರ್ (26) ಕೊಲೆಯಾದ ಯುವಕ. ಈತನ ಹಿಂಬದಿಯಿಂದ ಬಂದು ಕಲ್ಲಿನಿಂದ ಹೊಡೆದು ಹಂತಕರು ಕೊಲೆ ಮಾಡಿದ್ದರು. ಸದ್ಯ ಕೊಲ್ಲಾಪುರದ ಎಲ್ಸಿಬಿ ಪೊಲೀಸರ ಸಹಕಾರದೊಂದಿಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕೊಲ್ಲಾಪುರ ಮೂಲದ ಪ್ರಥಮೇಶ್ ಕಸಬೇಕರ್ (20), ಆಕಾಶ್ ಪವಾರ್ (21) ಬಂಧಿತ ಆರೋಪಿಗಳು. ಇದನ್ನೂ ಓದಿ: ಹುಡುಗಿಯರ ಕಡೆ ನೋಡಲ್ಲ, ಆಂಟಿಯರು ಸಿಕ್ರೆ ಬಿಡಲ್ಲ – ಬೆಂಗ್ಳೂರಿನಲ್ಲೊಬ್ಬ ಕಾಮುಕ ಟೆಕ್ಕಿ ಅರೆಸ್ಟ್
ತಲೆ ಮರೆಸಿಕೊಂಡಿರುವ ಇನ್ನೋರ್ವ ಪ್ರಮುಖ ಆರೋಪಿಯ ಪತ್ತೆಗೆ ಕಾರ್ಯಾಚರಣೆ ಮುಂದುವರೆದಿದ್ದು, ಎ1 ಆರೋಪಿ ಪತ್ತೆಯಾದ ನಂತರವಷ್ಟೇ ನಿಖರ ಕಾರಣ ತಿಳಿದು ಬರಲಿದೆ. ಘಟನೆ ನಡೆದ 48 ಗಂಟೆಗಳಲ್ಲಿ ಪ್ರಕರಣ ಭೇದಿಸಿದ ಪೊಲೀಸರ ತಂಡಕ್ಕೆ ಬೆಳಗಾವಿ ಕಮಿಷನರ್ ಎಸ್.ಎನ್.ಸಿದ್ದರಾಮಪ್ಪ ಬಹುಮಾನ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಮಗಳ ತಂಟೆಗೆ ಬರಬೇಡಿ ಎಂದಿದ್ದಕ್ಕೆ ಚಾಕುವಿನಿಂದ ಇರಿದು ಹತ್ಯೆ
Web Stories