Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದಲ್ಲಿ ಹೂಡಿಕೆ ಮಾಡಲು ತೈವಾನ್ ಕಂಪನಿಗಳಿಗೆ ನಿರಾಣಿ ಆಹ್ವಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕದಲ್ಲಿ ಹೂಡಿಕೆ ಮಾಡಲು ತೈವಾನ್ ಕಂಪನಿಗಳಿಗೆ ನಿರಾಣಿ ಆಹ್ವಾನ

Bengaluru City

ಕರ್ನಾಟಕದಲ್ಲಿ ಹೂಡಿಕೆ ಮಾಡಲು ತೈವಾನ್ ಕಂಪನಿಗಳಿಗೆ ನಿರಾಣಿ ಆಹ್ವಾನ

Public TV
Last updated: February 17, 2022 7:13 pm
Public TV
Share
3 Min Read
Murugesh Nirani 1
SHARE

ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚಿನ ಹೂಡಿಕೆ ಮಾಡಲು ತೈವಾನ್ ಕಂಪನಿಗಳನ್ನು ಆಹ್ವಾನಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಸರ್ಕಾರದಿಂದ ಎಲ್ಲಾ ಬೆಂಬಲ ಮತ್ತು ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಗುರುವಾರ ತೈವಾನ್ ದೇಶದ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರದ ರಾಯಭಾರಿ ಬಾಶುವಾನ್ ನೇತೃತ್ವದ ನಿಯೋಗವನ್ನು ಭೇಟಿ ಮಾಡಿದ ಅವರು, ಹೂಡಿಕೆಗೆ ಕರ್ನಾಟಕ ಸೂಕ್ತ ಸ್ಥಳ ಹೇಗೆ ಮತ್ತು ಅದಕ್ಕಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳೇನು ಎಂಬುದನ್ನು ಮನವರಿಕೆ ಮಾಡಿಕೊಟ್ಟರು.

ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ತೈಪೆ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರದ ಉನ್ನತ ಮಟ್ಟದ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರನ್ನು ಭೇಟಿ ಮಾಡಿ ಹೂಡಿಕೆ ಅವಕಾಶಗಳ ಕುರಿತು ಮಾತುಕತೆ ನಡೆಸಿದೆ.

Murugesh NIrani 2

ಕರ್ನಾಟಕ ಮತ್ತು ತೈವಾನ್ ನಡುವೆ ಹಲವು ಸಾಮ್ಯತೆಗಳಿದ್ದು, ಇಎಸ್‍ಡಿಎಂ, ಎಲೆಕ್ಟ್ರಿಕ್ ವೆಹಿಕಲ್ಸ್, ಆಟೋ ಮತ್ತು ಆಟೋ ಕಾಂಪೊನೆಂಟ್ಸ್, ಹೆಲ್ತ್‍ಕೇರ್, ಇಂಜಿನಿಯರಿಂಗ್ ಮತ್ತು ಮೆಷಿನ್ ಟೂಲ್ ಮುಂತಾದ ಪ್ರಮುಖ ಉದ್ಯಮಗಳಲ್ಲಿ ಮುಂಚೂಣಿ ಸಾಧಿಸಿವೆ ಎಂದರು.

ವಿಸ್ಟ್ರಾನ್ ಕಾರ್ಪೋರೇಶನ್, ಮೀಡಿಯಾಟೆಕ್, ಡೆಲ್ಟಾ ಎಲೆಕ್ಟ್ರಾನಿಕ್ಸ್ ಮತ್ತು ಡಿ-ಲಿಂಕ್ ಸೇರಿದಂತೆ ಪ್ರಮುಖ ತೈವಾನಿ ಕಂಪನಿಗಳಿಗೆ ಕರ್ನಾಟಕ ನೆಲೆಯಾಗಿದೆ. ಇತರ ತೈವಾನ್ ಕಂಪನಿಗಳೂ ನಮ್ಮ ರಾಜ್ಯದಲ್ಲಿ ಹೂಡಿಕೆ ಮಾಡಬಹುದು, ಅದಕ್ಕೆ ಅಗತ್ಯ ಸೌಲಭ್ಯ ಒದಗಿಸಲಾಗುವುದು ಎಂದು ವಿವರಿಸಿದರು.

murugesh nirani

ಕೈಗಾರಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿರುವ ನೀತಿಗಳು ಹಾಗೂ ಕೈಗೊಂಡಿರುವ ವಿವಿಧ ಉಪಕ್ರಮಗಳ ಬಗ್ಗೆ ಸಚಿವರು ಮಾಹಿತಿ ನೀಡಿದರು.

ನೂತನ ಕೈಗಾರಿಕಾ ನೀತಿ ಹಾಗೂ ಕೈಗಾರಿಕಾ ಸೌಲಭ್ಯ ತಿದ್ದುಪಡಿ ಅಧಿನಿಯಮದಲ್ಲಿನ ತಿದ್ದುಪಡಿಗಳಿಂದ ನಮ್ಮ ರಾಜ್ಯ ಉದ್ಯಮ ಸ್ನೇಹಿ ರಾಜ್ಯಗಳ ಪಟ್ಟಿಯಲ್ಲಿ ಅತ್ಯಂತ ಪ್ರಮುಖ ಸ್ಥಾನ ಪಡೆದುಕೊಂಡಿದೆ. ಭೂ ಸುಧಾರಣೆ ಕಾಯಿದೆ ತಿದ್ದುಪಡಿ, ಅಫಿಡವಿಟ್ ಬೇಸ್ಡ್ ಕ್ಲಿಯರೆನ್ಸ್ (ಎಬಿಸಿ) ಯೋಜನೆ ಇತ್ಯಾದಿ ಕ್ರಮಗಳಿಂದ ರಾಜ್ಯದಲ್ಲಿ ಉದ್ಯಮಸ್ನೇಹಿ ವಾತಾವರಣ ಸೃಷ್ಟಿಯಾಗಿದ್ದು, ಹೂಡಿಕೆಯ ಪ್ರಸ್ತಾಪಗಳು ವೃದ್ಧಿಸಿವೆ ಎಂದು ಹೇಳಿದರು.

INDUSTRY INDIA

ತೈವಾನ್ ಹೂಡಿಕೆದಾರರಿಗೆ ಕೈಗಾರಿಕೆ ಇಲಾಖೆಯಿಂದ ಎಲ್ಲಾ ಸಹಕಾರ ನೀಡಲಾಗುವುದು. ಸರ್ಕಾರದ ಹಲವು ಸುಧಾರಣಾ ಕ್ರಮಗಳಿಂದಾಗಿ ಕರ್ನಾಟಕವು ದೇಶದ ಆಕರ್ಷಕ ಹೂಡಿಕೆ ತಾಣವಾಗಿ ಹೊರಹೊಮ್ಮಿದೆ. ಹಣಕಾಸು ವರ್ಷದ ಏಪ್ರಿಲ್-ಸೆಪ್ಟೆಂಬರ್ ಅವಧಿಯಲ್ಲಿ ಶೇ. 45ರಷ್ಟು ವಿದೇಶಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಿ ಇಡೀ ದೇಶದಲ್ಲಿಯೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಕೈಗಾರಿಕಾಭಿವೃದ್ದಿ ಆಯುಕ್ತರಾದ ಗುಂಜನ್ ಕೃಷ್ಣ ತಿಳಿಸಿದರು. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆಗೆ ಗ್ರೀನ್ ಸಿಗ್ನಲ್: ಡಾ.ಕೆ ಸುಧಾಕರ್

ತೈವಾನ್ ಮೂಲದ ಉದ್ಯಮಗಳಿಗೆ ಅನುಕೂಲ ಕಲ್ಪಿಸಿರುವ ಕರ್ನಾಟಕ ಸರ್ಕಾರಕ್ಕೆ ಬಾಶುವಾನ್ ಕೃತಜ್ಞತೆ ವ್ಯಕ್ತಪಡಿಸಿದರು. ತೈವಾನ್ ದೇಶದ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರದ ದಕ್ಷಿಣ – ಚೆನ್ನೈನ ಮಹಾನಿರ್ದೇಶಕ ಬೆನ್ ವಾಂಗ್ ಹಾಗೂ ಕೇಂದ್ರದ ಸಿಬ್ಬಂದಿ, ಇನ್ವೆಸ್ಟ್ ಇಂಡಿಯಾ ಫೊರಂನ ಪ್ರಾದೇಶಿಕ ಮುಖ್ಯಸ್ಥೆ ಸಾಯಿ ಸುಧಾ, ತೈವಾನ್ ಡೆಸ್ಕ್ ಲೀಡ್ ಅಜು ಆಂಟೋನಿ, ಕೈಗಾರಿಕಾಭಿವೃದ್ಧಿ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಓ ಡಾ.ಎನ್ ಶಿವಶಂಕರ್, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಉಪಸ್ಥಿತರಿದ್ದರು. ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆಗೆ ಆಗ್ರಹ – ವಿಧಾನಸಭೆಯಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ!

murugesh nirani

ಸಿಡಿಸಿ ಮಾಸ್ಟರ್ ಪ್ಲ್ಯಾನ್: ಬೆಂಗಳೂರಿನಲ್ಲಿ ಕೈಗಾರಿಕಾ ಪಾರ್ಕ್ ಅಭಿವೃದ್ಧಿಪಡಿಸಲು ಮುಂದಾಗಿರುವ ತೈವಾನ್ ಮೂಲದ ಸೆಂಚುರಿ ಡೆವಲಪ್‍ಮೆಂಟ್ ಕಾರ್ಪೋರೇಷನ್ (ಸಿಡಿಸಿ), ಈ ಸಂಬಂಧ ಮಾಸ್ಟರ್ ಪ್ಲ್ಯಾನ್ ಅಂತಿಮಗೊಳಿಸಿದೆ. ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್ ಬಳಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ 70 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದು, ಅಲ್ಲಿ ತೈವಾನ್‍ನ 100 ಕಂಪನಿಗಳಿಗೆ ಸ್ಥಳಾವಕಾಶ ಕಲ್ಪಿಸಲಿದೆ. ಟಿಇಎಂಐಸಿಓ ಮೋಟಾರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಈಗಾಗಲೇ ಪಾರ್ಕ್‍ನಲ್ಲಿ ಕಾರ್ಖಾನೆ ನಿರ್ಮಾಣ ಕಾರ್ಯ ಪ್ರಾರಂಭಿಸಿದೆ.

TAGGED:bengaluruindustryMurugesh niraniState Governmenttaiwan companyಕೈಗಾರಿಕೆ ಇಲಾಖೆತೈವಾನ್ ಕಂಪನಿಬೆಂಗಳೂರುಮುರುಗೇಶ್ ನಿರಾಣಿರಾಜ್ಯ ಸರ್ಕಾರ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

hassan women
Hassan

ಹಾಸನ ಮಹಿಳೆ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌ – ಕುಣಿಗಲ್‌ನಲ್ಲಿ ಜೀವಂತವಾಗಿ ಪತ್ತೆ

Public TV
By Public TV
6 hours ago
MP Ramesh Jigajinagi
Districts

ಇಷ್ಟೊಂದು ಹೊಲಸು ಸರ್ಕಾರವನ್ನು ನಾನು ನೋಡಿಯೇ ಇಲ್ಲ – ರಮೇಶ ಜಿಗಜಿಣಗಿ

Public TV
By Public TV
6 hours ago
south africa 1
Cricket

ಮಾರ್ಕ್ರಾಮ್‌ ಸ್ಫೋಟಕ ಬ್ಯಾಟಿಂಗ್‌, ಜಾನ್ಸೆನ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ತತ್ತರ – ಆಫ್ರಿಕಾಗೆ 7 ವಿಕೆಟ್‌ಗಳ ಜಯ

Public TV
By Public TV
6 hours ago
DK Shivakumar 2
Davanagere

ನೂರು ಜನ್ರು ಗೋ-ಬ್ಯಾಕ್ ಅಂದ್ರೆ, ಅದಕ್ಕಿಂತ ಜಾಸ್ತಿ ಕಮ್ ಬ್ಯಾಕ್ ಅನ್ನೋರು ಇರ‍್ತಾರೆ: ಡಿಕೆಶಿ

Public TV
By Public TV
6 hours ago
India vs Pakistan shake hands row
Cricket

ಮ್ಯಾಚ್‌ನಲ್ಲಿ ಪಾಕ್‌ ಆಟಗಾರರ ಜೊತೆ ಹ್ಯಾಂಡ್‌ಶೇಕ್‌ ಮಾಡ್ತೀರಾ?- ಪ್ರಶ್ನೆಗೆ ಸೂರ್ಯಕುಮಾರ್‌ ಹೇಳಿದ್ದೇನು?

Public TV
By Public TV
7 hours ago
Noida Suicide
Crime

Valentine’s Day Tragedy – ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?