Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಿಮ್ ಒಪ್ಪಂದ ಮುಂದಿನ 5 ವರ್ಷದೊಳಗೆ ಶೇ. 75 ರಷ್ಟು ಅನುಷ್ಠಾನ: ಮುರುಗೇಶ್ ನಿರಾಣಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಿಮ್ ಒಪ್ಪಂದ ಮುಂದಿನ 5 ವರ್ಷದೊಳಗೆ ಶೇ. 75 ರಷ್ಟು ಅನುಷ್ಠಾನ: ಮುರುಗೇಶ್ ನಿರಾಣಿ

Bengaluru City

ಜಿಮ್ ಒಪ್ಪಂದ ಮುಂದಿನ 5 ವರ್ಷದೊಳಗೆ ಶೇ. 75 ರಷ್ಟು ಅನುಷ್ಠಾನ: ಮುರುಗೇಶ್ ನಿರಾಣಿ

Public TV
Last updated: December 6, 2022 6:34 pm
Public TV
Share
5 Min Read
murugesh nirani
SHARE

– ವೈಭವೀಕರಣ ಇಲ್ಲವೇ ತೋರ್ಪಡೆಗಾಗಿ ಒಪ್ಪಂದ ಮಾಡಿಕೊಂಡಿಲ್ಲ
– ಹಿಂದಿನ ಸರ್ಕಾರದ ನೀತಿಯಿಂದಾಗಿ ಯೋಜನೆಗಳ ಅನುಷ್ಠಾನ ವಿಳಂಬ
– ಪ್ರಮಾಣ ಪತ್ರ ಆಧಾರಿತ ತಿಳುವಳಿ ಮಾಡಿಕೊಂಡಿರುವವರ ಜೊತೆ ಒಪ್ಪಂದ
– 59 ಯೋಜನೆ, 20,627.88 ಕೋಟಿ ಬಂಡವಾಳ ಹೂಡಿಕೆ, 80,764 ಜನರಿಗೆ ಉದ್ಯೋಗ

ಬೆಂಗಳೂರು: ನವೆಂಬರ್ ತಿಂಗಳಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ (Global Investors Meet) ಮಾಡಿಕೊಂಡಿರುವ ಒಪ್ಪಂದಗಳು ಮುಂದಿನ 5 ವರ್ಷಗಳಲ್ಲಿ ಶೇ. 75ರಷ್ಟು ಅನುಷ್ಠಾನಕ್ಕೆ ಬರಲಿದ್ದು, ಯಾವುದೇ ರೀತಿಯ ಅನುಮಾನ ಬೇಡ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ (Murugesh Nirani) ಭರವಸೆ ನೀಡಿದರು.

Contents
  • – ವೈಭವೀಕರಣ ಇಲ್ಲವೇ ತೋರ್ಪಡೆಗಾಗಿ ಒಪ್ಪಂದ ಮಾಡಿಕೊಂಡಿಲ್ಲ – ಹಿಂದಿನ ಸರ್ಕಾರದ ನೀತಿಯಿಂದಾಗಿ ಯೋಜನೆಗಳ ಅನುಷ್ಠಾನ ವಿಳಂಬ – ಪ್ರಮಾಣ ಪತ್ರ ಆಧಾರಿತ ತಿಳುವಳಿ ಮಾಡಿಕೊಂಡಿರುವವರ ಜೊತೆ ಒಪ್ಪಂದ – 59 ಯೋಜನೆ, 20,627.88 ಕೋಟಿ ಬಂಡವಾಳ ಹೂಡಿಕೆ, 80,764 ಜನರಿಗೆ ಉದ್ಯೋಗ
  • Live Tv

ಮಂಗಳವಾರ ಬೆಂಗಳೂರು (Bengaluru) ಪ್ರೆಸ್ ಕ್ಲಬ್ ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ನಾವು ಕೇವಲ ವೈಭವೀಕರಣ ಮಾಡಿಕೊಳ್ಳಲು ಅಥವಾ ಬಂಡವಾಳ ಹೆಚ್ಚಿಸಿಕೊಳ್ಳಲು ಇಲ್ಲವೇ ಅಂಕಿ-ಸಂಖಿಗಳನ್ನು ತೋರಿಸಿಕೊಳ್ಳಲು ಒಪ್ಪಂದ ಮಾಡಿಕೊಂಡಿಲ್ಲ. ಯೋಜನೆಗಳನ್ನು ರಾಜ್ಯದಲ್ಲಿ ಪ್ರಾರಂಭಿಸುವವರಿಗೆ ಮಾತ್ರ ಅನುಮೋದನೆ ನೀಡಿದ್ದೇವೆ. ಇನ್ನು 5 ವರ್ಷದೊಳಗೆ ಶೇ. 75ರಷ್ಟು ಎಂಒಯು ಅನುಷ್ಠಾನಕ್ಕೆ ಬರಲಿವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

murugesh nirani 1

ನವೆಂಬರ್ ತಿಂಗಳಲ್ಲಿ ನಡೆದ ಹೂಡಿಕೆದಾರರ ಸಮಾವೇಶದಲ್ಲಿ ಸುಮಾರು 9.81 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗಿವೆ. ಉದ್ದಿಮೆಗಳಿಗೆ ಬೇಕಾದ ನೀರು, ಭೂಮಿ, ವಿದ್ಯುತ್, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಈಗಾಗಲೇ ಸಂಬಂಧಪಟ್ಟ ಇಲಾಖೆಗಳ ಜೊತೆ ಸಮನ್ವಯ ಸಮಿತಿಯನ್ನು ರಚಿಸಿದ್ದೇವೆ. ಇದು ನಮ್ಮ ನಿರೀಕ್ಷೆಗೂ ಮೀರಿ ಅನುಷ್ಠಾನವಾಗುತ್ತದೆ ಎಂದು ಸಂತಸವನ್ನು ವ್ಯಕ್ತಪಡಿಸಿದರು.

ರಾಜ್ಯದಲ್ಲಿ 2 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲು ಉದ್ಯಮಿಗಳು ಮುಂದೆ ಬಂದಿದ್ದರೂ ನಾವು ಅವರ ಜೊತೆ ಎಂಒಯು ಮಾಡಿಕೊಂಡಿಲ್ಲ. ಈಗಾಗಲೇ ಮಾಡಿಕೊಂಡಿರುವ ತಿಳುವಳಿಕೆ ಒಪ್ಪಂದ ಪತ್ರಕ್ಕೆ (ಎಂಒಯು) ಆದ್ಯತೆ ಕೊಡುತ್ತೇವೆ. ಕೇವಲ ಅಂಕಿ-ಸಂಖ್ಯೆಗಳನ್ನು ಹೆಚ್ಚಿಸಲು ಒಪ್ಪಂದ ಮಾಡಿಕೊಳ್ಳುವ ಪ್ರವೃತ್ತಿ ನಮ್ಮಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.

murugesh nirani 2

ಪ್ರಮಾಣ ಪತ್ರ ಆಧಾರಿತ ತಿಳುವಳಿ ಮಾಡಿಕೊಂಡಿರುವವರ ಜೊತೆ ಒಪ್ಪಂದ ಮಾಡಿಕೊಂಡಿದ್ದೇವೆ. ಅಂದರೆ ಯಾರು ನಮ್ಮ ರಾಜ್ಯದಲ್ಲಿ ಖಚಿತವಾಗಿ ಹೂಡಿಕೆ ಮಾಡಿ ಉದ್ಯಮಗಳನ್ನು ಆರಂಭಿಸುತ್ತಾರೋ ಅಂತಹವರಿಗೆ ಮಾತ್ರ ಆದ್ಯತೆ ಕೊಟ್ಟಿದ್ದೇವೆ. ಹಿಂದಿನ ಸರ್ಕಾರಗಳ ಕೆಲವು ತಪ್ಪುಗಳಿಂದಾಗಿ ಯೋಜನೆಗಳು ಅನುಷ್ಠಾನವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಶೇ. 90ರಷ್ಟು ಟಯರ್-2 ಮತ್ತು 3 ನಗರಗಳಲ್ಲಿ ಹೂಡಿಕೆಯಾಗಿವೆ. 2 ಮತ್ತು 3ನೇ ಹಂತದ ನಗರಗಳಲ್ಲಿ ಬಂಡವಾಳ ಹೂಡಿಕೆಗೆ ಗಮನಹರಿಸಿದ್ದೇವೆ ಎಂದರು.

ಕೈಗಾರಿಕಾ ಉದ್ದೇಶಗಳಿಗೆ ನಾವು ಯಾವುದೇ ಒಬ್ಬೇ ಒಬ್ಬ ರೈತರಿಂದಲೂ ಬಲವಂತವಾಗಿ ಜಮೀನನ್ನು ಭೂಸ್ವಾಧೀನ ಮಾಡಿಕೊಳ್ಳುತ್ತಿಲ್ಲ. ಸ್ವಯಂಪ್ರೇರಿತರಾಗಿ ಯಾರು ಜಮೀನು ಕೊಡಲು ಬರುತ್ತಾರೋ ಅಂತಹವರಿಗೆ ಮಾತ್ರ ಸ್ವಾಧೀನ ಪಡಿಸಿಕೊಳ್ಳುತ್ತಿದ್ದೇವೆ. ಕೃಷಿ ಯೋಗ್ಯ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಸ್ಪಷ್ಟಪಡಿಸಿದರು.

ಕೆಲವು ಕಡೆ ರೈತರು ಸ್ವಯಂಪ್ರೇರಿತರಾಗಿ ಬಂದು ತಮ್ಮ ಜಮೀನನ್ನು ಮಾರುಕಟ್ಟೆ ದರದಂತೆ ಖರೀದಿ ಮಾಡಬೇಕೆಂದು ಮನವಿ ಮಾಡಿದ್ದಾರೆ. ಕೆಲವು ಕಡೆ ಜಮೀನೇ ಇಲ್ಲದ ರೈತರು ಪ್ರತಿಭಟನೆ ನಡೆಸುತ್ತಾರೆ. ಇದರ ಹಿಂದೆ ರಾಜಕೀಯ ಉದ್ದೇಶವೂ ಇದೆ. ರಾಜ್ಯದಲ್ಲಿ ಇದುವರೆಗೂ ನಾವು ಕೈಗಾರಿಕೆಗಳಿಗೆ ಕೇವಲ ಶೇ. 0.61 ಭೂಮಿಯನ್ನು ಮಾತ್ರ ಬಳಸಿಕೊಂಡಿದ್ದೇವೆ ಎಂದು ಅಂಕಿ ಸಂಖ್ಯೆಗಳನ್ನು ವಿವರಿಸಿದರು.

ಉದ್ಯೋಗ ಸೃಷ್ಟಿ: ಮಂಗಳವಾರ ಕರ್ನಾಟಕ ಉದ್ಯೋಗ ಮಿತ್ರದಲ್ಲಿ ನಡೆದ 136ನೇ ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ 59 ಯೋಜನೆಗಳಿಂದ 20,627.88 ಕೋಟಿ ರೂ. ಬಂಡವಾಳ ಹೂಡಿಕೆಯಾಗಿದ್ದು, ಇದರಿಂದ 80,764 ಜನರಿಗೆ ಉದ್ಯೋಗಾವಕಾಶ ಲಭಿಸಲಿವೆ. 50 ಕೋಟಿಗೂ ರೂ. ಹೆಚ್ಚು ಬಂಡವಾಳ ಹೂಡಿಕೆಯ 7 ಪ್ರಮುಖ ಬೃಹತ್ ಮತ್ತು ಮದ್ಯಮ ಯೋಜನೆಗಳಿಗೆ ಅನುಮೋದನೆ ನೀಡಿದ್ದು, 852.06 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ 3,560 ಜನರಿಗೆ ಉದ್ಯೋಗ ಅವಕಾಶ ಲಭಿಸಲಿದೆ ಎಂದು ತಿಳಿಸಿದರು.

15 ಕೋಟಿ ರೂ. 50 ಕೋಟಿ ರೂ.ಯೊಳಗಿನ 48 ಹೊಸ ಯೋಜನೆಗಳಿಗೆ ಸಮಿತಿಯು ಅನುಮೋದನೆ ನೀಡಿದ್ದು, ಒಟ್ಟು 923.9 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ 4,444 ಜನರಿಗೆ ಉದ್ಯೋಗಗಳು ಸಿಗಲಿವೆ. ಹೆಚ್ಚುವರಿ ಬಂಡವಾಳ ಹೂಡಿಕೆಯ ನಾಲ್ಕು ಯೋಜನೆಗಳಿಂದ 852.73 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ ಅಂದಾಜು 1,460 ಜನರಿಗೆ ಉದ್ಯೋಗ ಅವಕಾಶ ಸಿಗಲಿವೆ ಎಂದು ವಿವರಿಸಿದರು.

ಎಥನಾಲ್ ಬಳಕೆಗೆ ಹೆಚ್ಚು ಒತ್ತು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಹೊರೆಯನ್ನು ತಗ್ಗಿಸಿ ಎಥನಾಲ್ ಬಳಕೆಗೆ ಹೆಚ್ಚು ಒತ್ತು ಕೊಟ್ಟಿದ್ದೇವೆ. ಇದರಿಂದ ಪರಿಸರ ಮತ್ತು ನಾಗರಿಕ ಸಮಾಜದ ಮೇಲೆ ಉಂಟಾಗುತ್ತಿದ್ದ ದುಷ್ಪರಿಣಾಮಗಳು ಕಡಿಮೆ ಆಗಲಿವೆ ಎಂದು ನಿರಾಣಿ ಅವರು ತಿಳಿಸಿದರು.

ಈಗಾಗಲೇ ಡೀಸೆಲ್ ಇಂಜಿನ್ ವಾಹನಗಳ ಅಮದನ್ನು ಬಂದ್ ಮಾಡಲಾಗಿದೆ. ವಾಹನಗಳನ್ನು ಬಯೋ ಫ್ಯೂಲ್ ಅಂದರೆ ಸ್ಥಳೀಯವಾಗಿ ದೊರೆಯುವ ಎಥನಾಳ ತೈಲದಿಂದ ವಾಹನಗಳನ್ನು ಚಾಲನೆ ಮಾಡಲು ಒತ್ತು ನೀಡಲಾಗುವುದು ಎಂದರು.

ಆಮದನ್ನು ಕಡಿಮೆ ಮಾಡಿ ರಫ್ತು ಹೆಚ್ಚಿಸಲು ಒತ್ತು ನೀಡುತ್ತಿದ್ದು ಮೇಕ್ ಇನ್ ಇಂಡಿಯಾಗೆ ಅನುವು ಮಾಡಿ ಕೊಡುವುದರಿಂದ ರಾಜ್ಯ ಇಡೀ ಪ್ರಪಂಚದಲ್ಲಿ ಬಲಿಷ್ಠವಾಗಿ ಹೊರ ಹಿಮ್ಮಲಿದೆ ಎಂದು ಹೇಳಲು ಹರ್ಷಿಸುತ್ತೇನೆ. ಸರ್. ಎಂ. ವಿಶ್ವೇಶ್ವರಯ್ಯ ಅವರ ಕನಸನ್ನು ಸಾಕಾರ ಮಾಡುವತ್ತ ನಮ್ಮ ಸರ್ಕಾರ ಸಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಹಳ್ಳಿಹಕ್ಕಿ ಮರಳಿ ಗೂಡು ಸೇರುತ್ತಾ? ನಿನ್ನೆ ಖರ್ಗೆ, ಇವತ್ತು ಸಿದ್ದು ಭೇಟಿಯ ಗುಟ್ಟೇನು?

ಎಲ್ಲರಿಗೂ ಮೀಸಲಾತಿ ಸಿಗಲಿ : ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಸಂಬಂಧ ಸರ್ಕಾರ ಸಕಾರಾತ್ಮಕವಾದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಹಿಂದುಳಿದ ವರ್ಗಗಳ ಆಯೋಗ ನೀಡುವ ವರದಿ ಮೇಲೆ ಮುಂದಿನ ಕ್ರಮವನ್ನು ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ಪಂಚಮಸಾಲಿ ಸಮುದಾಯದ ಜೊತೆಗೆ ವೀರಶೈವ, ಲಿಂಗಾಯತ ಸಮುದಾಯದಲ್ಲಿರುವ ಸಣ್ಣ ಸಣ್ಣ ಸಮುದಾಯಕ್ಕೂ ಮೀಸಲಾತಿ ಸಿಗಬೇಕೆಂಬುದು ನಮ್ಮ ಆಶಯ. ಈಗಲೂ ನಮ್ಮ ಸಮುದಾಯದಲ್ಲಿ ಕೆಲವರಿಗೆ ಸೂಕ್ತವಾದ ಸಂವಿಧಾನ ಬದ್ಧ ಸ್ಥಾನಮಾನಗಳು ಸಿಕ್ಕಿಲ್ಲ. ನನ್ನ ಪ್ರಕಾರ ಸಮಸ್ತ ವೀರಶೈವ ಸಮುದಾಯಕ್ಕೆ ಮೀಸಲಾತಿ ಅಗತ್ಯ ಎಂದು ನಿರಾಣಿ ಅಭಿಪ್ರಾಯಪಟ್ಟರು. ಹಿಂದುಳಿದ ವರ್ಗಗಳ ಆಯೋಗ ವರದಿ ಕೊಟ್ಟ ತಕ್ಷಣ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಒಂದೇ ವರ್ಷದಲ್ಲಿ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಭಾರೀ ಏರಿಕೆ!

ಕಮಿಷನ್ ಆರೋಪ ರಾಜಕೀಯ ಆರೋಪ ಕುರಿತಾಗಿ ಮಾತನಾಡಿದ ಅವರು, ಇದೊಂದು ಆಧಾರರಹಿತ ಆರೋಪ. ಇದರಲ್ಲಿ ಸತ್ಯಾಂಶ ಇಲ್ಲ ಎಂದು ಪರೋಕ್ಷವಾಗಿ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದರು. ಮಾಧ್ಯಮ ಸಂವಾದದಲ್ಲಿ ಪ್ರೆಸ್ ಕ್ಲಬ್ ಅಧ್ಯಕ್ಷರಾದ ಶ್ರೀಧರ್, ಪ್ರಧಾನ ಕರ್ಯದರ್ಶಿ ಬಿ.ಪಿ.ಮಲ್ಲಪ್ಪ , ಖಜಾಂಚಿ ಮೋಹನ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ಹಾಜರಿದ್ದರು.

Live Tv
[brid partner=56869869 player=32851 video=960834 autoplay=true]

TAGGED:bengaluruMurugesh niraniಬೆಂಗಳೂರುಮುರುಗೇಶ್ ನಿರಾಣಿಹೂಡಿಕೆದಾರರ ಸಮಾವೇಶ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

two people die after drinking spirit one in critical condition two detained in koppal
Crime

ಸ್ಪಿರಿಟ್ ಕುಡಿದು ಇಬ್ಬರು ಸಾವು, ಓರ್ವನ ಸ್ಥಿತಿ ಚಿಂತಾಜನಕ – ಇಬ್ಬರು ವಶಕ್ಕೆ

Public TV
By Public TV
2 hours ago
Sri Lanka
Cricket

T20 World Cup: ಐರ್ಲೆಂಡ್‌ ವಿರುದ್ಧ ಶ್ರೀಲಂಕಾಗೆ 20 ರನ್‌ಗಳ ಗೆಲುವು

Public TV
By Public TV
2 hours ago
Narges Mohammadi
Latest

ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತೆಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಇರಾನ್‌

Public TV
By Public TV
3 hours ago
Banavar Car Accident
Crime

ಬಾಣಾವರ | ಮೂರು ಕಾರುಗಳ‌ ನಡುವೆ ಸರಣಿ‌‌ ಅಪಘಾತ – ಇಬ್ಬರ ಸಾವು‌, ಐವರಿಗೆ ಗಾಯ

Public TV
By Public TV
4 hours ago
Nagalakshmi Choudhary
Davanagere

ʻಕೈʼ ಮುಖಂಡನ ಪುತ್ರರಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ – ಕಾನೂನು ಎಲ್ಲರಿಗೂ ಒಂದೇ, ಶಿಕ್ಷೆ ಆಗುತ್ತೆ: ನಾಗಲಕ್ಷ್ಮೀ ಚೌಧರಿ

Public TV
By Public TV
4 hours ago
bidar bike accident three died
Bidar

ಬೀದರ್| ರಸ್ತೆ ಪಕ್ಕದ ಬ್ರಿಡ್ಜ್‌ಗೆ ಬೈಕ್ ಡಿಕ್ಕಿ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?