Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲಬುರಗಿ ವಿಮಾನ ನಿಲ್ದಾಣ ಬಳಿ 1,000 ಎಕರೆ ಜಮೀನು ಭೂಸ್ವಾಧೀನ: ಸಚಿವ ನಿರಾಣಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಲಬುರಗಿ ವಿಮಾನ ನಿಲ್ದಾಣ ಬಳಿ 1,000 ಎಕರೆ ಜಮೀನು ಭೂಸ್ವಾಧೀನ: ಸಚಿವ ನಿರಾಣಿ

Districts

ಕಲಬುರಗಿ ವಿಮಾನ ನಿಲ್ದಾಣ ಬಳಿ 1,000 ಎಕರೆ ಜಮೀನು ಭೂಸ್ವಾಧೀನ: ಸಚಿವ ನಿರಾಣಿ

Public TV
Last updated: August 15, 2022 1:58 pm
Public TV
Share
3 Min Read
murugesh nirani 2
SHARE

ಕಲಬುರಗಿ: ಜಿಲ್ಲೆಯಲ್ಲಿ ಕೈಗಾರಿಕೆಗಳು ಒಂದೇ ಕಡೆ ಇರುವಂತೆ ಕೈಗಾರಿಕೆ ಹಬ್ ಮಾಡಲು ಕಲಬುರಗಿ ವಿಮಾನ ನಿಲ್ದಾಣ ಬಳಿ 1,000 ಎಕರೆ ಭೂಮಿ ಭೂಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಮುರುಗೇಶ ನಿರಾಣಿ ಹೇಳಿದರು.

ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವದ ನಿಮಿತ್ತ ರಾಷ್ಟ್ರಧ್ವಜಾರೋಹಣ ಮಾಡಿ, ಪರೇಡ್ ಕಮಾಂಡರ್‌ ಡಿ.ಎ.ಆರ್ ಮೀಸಲು ಪಡೆಯ ಆರ್.ಪಿ.ಐ ಹಣಮಂತ ನಾಯಕ ಮತ್ತು ಸಹಾಯಕ ಪರೇಡ್ ಕಮಾಂಡರ್‌ ಆರ್.ಎಸ್.ಐ. ದುರ್ಗಾಸಿಂಹ ನೇತೃತ್ವದ ವಿವಿಧ 11 ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

murugesh nirani 1

ರಾಜ್ಯದಲ್ಲಿ ಉದ್ಯೋಗ ಸೃಜನೆಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದ್ದು, ಇದಕ್ಕಾಗಿ ಉದ್ಯಮ ಸ್ನೇಹಿ ಕೈಗಾರಿಕಾ ನೀತಿ ಜಾರಿಗೊಳಿಸಲಾಗಿದೆ. ನೇರ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಕಳೆದ ವರ್ಷದ ಮೊದಲನೇ ತ್ರೈಮಾಸಿಕದಲ್ಲಿ ದೇಶದಲ್ಲಿನ ಒಟ್ಟು ಪಾಲಿನಲ್ಲಿ ಶೇ.42 ರಷ್ಟು ಕರ್ನಾಟಕಕ್ಕೆ ಲಭಿಸಿದೆ ಎಂದರು.

ದಾವೋಸ್ ಆರ್ಥಿಕ ಶೃಂಗ ಫಲಪ್ರದವಾಗಿದ್ದು, ಮುಂದಿನ 3-4 ತಿಂಗಳಿನಲ್ಲಿ 1 ಲಕ್ಷ ಕೋಟಿ ರೂ. ರಾಜ್ಯದಲ್ಲಿ ಹೂಡಿಕೆಯಾಗಲಿದೆ. ಇದಲ್ಲದೆ ಬರುವ ನವೆಂಬರ್ 2 ರಿಂದ 4ರ ವರೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಿಶ್ವ ಬಂಡವಾಳದಾರರ ಸಮಾವೇಶ ಆಯೋಜಿಸಿದ್ದು, 5 ಲಕ್ಷ ಕೋಟಿ ಹೂಡಿಕೆ ನಿರೀಕ್ಷೆ ಹೊಂದಿದ್ದೇವೆ. ಇದಕ್ಕಾಗಿ ಜಪಾನ್, ದಕ್ಷಿಣ ಕೋರಿಯಾ ದೇಶದಲ್ಲಿ ಈಗಾಗಲೇ ರೋಡ್ ಶೋ ಮಾಡಿ ಬಂಡವಾಳ ಹೂಡಿಕೆಗೆ ರಾಜ್ಯದಲ್ಲಿನ ಕೈಗಾರಿಕೆ ಸ್ನೇಹಿ ವಾತಾವರಣದ ಬಗ್ಗೆ ಪ್ರತಿಷ್ಠಿತ ಕಂಪನಿಗಳಿಗೆ ಮನವರಿಕೆ ಮಾಡಿ ಆಹ್ವಾನ ನೀಡಿದ್ದೇವೆ ಎಂದು ಸಚಿವ ಡಾ.ಮುರುಗೇಶ ನಿರಾಣಿ ತಿಳಿಸಿದರು.

murugesh nirani 1 1

ಸ್ವಾತಂತ್ರ್ಯದ ಅಮೃತ ಮಹೋತ್ಸವ ಈ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತ್ಯಾಗ, ಬಲಿದಾನ ನೀಡಿದ ಮಹಾನ್ ಪುರುಷರನ್ನು ತಮ್ಮ ಭಾಷಣದಲ್ಲಿ ಸ್ಮರಿಸಿದ ಸಚಿವರು ದೇಶಭಕ್ತಿ ಹೆಚ್ಚಿಸಲು ಕರೆ ನೀಡಿದ ಹರ್ ಘರ್ ತಿರಂಗಾ ಅಭಿಯಾನದಡಿ ಕಳೆದ ಮೂರು ದಿನಗಳಿಂದ ಜಿಲ್ಲೆಯ ಪ್ರತಿ ಮನೆ-ಮನೆಗಳ ಮೇಲೆ, ಸರ್ಕಾರಿ ಕಚೇರಿ, ಶಾಲಾ-ಕಾಲೇಜು, ಪಂಚಾಯತಿ, ಅಂಗನವಾಡಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ಜಿಲ್ಲೆಯ ಜನತೆ ಅತೀ ಉತ್ಸಾಹದಿಂದ ಈ ಅಭಿಯಾನದಲ್ಲಿ ಭಾಗಿಯಾಗಿ ಯಶಸ್ವಿಗೊಳಿಸಿದ್ದಾರೆ. ಇದಕ್ಕಾಗಿ ಅಭಿನಂದನೆ ಸಲ್ಲಿಸುವೆ ಎಂದರು. ಇದನ್ನೂ ಓದಿ: ರಾಷ್ಟ್ರದ ಉನ್ನತಿಯಲ್ಲಿ ಪ್ರಧಾನಿ ಮೋದಿಯವರ ಕೊಡುಗೆ ಅನನ್ಯ: ಬಾಲಚಂದ್ರ ಜಾರಕಿಹೊಳಿ

ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಡಿ.ಬಿ.ಗೆ ದಾಖಲೆ ಪ್ರಮಾಣದಲ್ಲಿ 3,000 ಕೋಟಿ ರೂ. ಅನುದಾನ ನೀಡಲಾಗಿದೆ. ಇಡೀ ದೇಶ ಸ್ವಾತಂತ್ರ್ಯ ಪಡೆದರು. ಕಲ್ಯಾಣ ಕರ್ನಾಟಕ ಮಾತ್ರ ಒಂದು ವರ್ಷ ಒಂದು ತಿಂಗಳ ತಡವಾಗಿ ಸ್ವಾತಂತ್ರ್ಯದ ರುಚಿ ಕಂಡಿದೆ. ಹೀಗಾಗಿ ಇದೇ ಸೆಪ್ಟೆಂಬರ್ 17 ರಂದು ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ವಿಜೃಂಭಣೆಯಿಂದ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ನಡೆಸಲು ಉದ್ದೇಶಿಸಿದೆ ಎಂದರು.

murugesh nirani 3

ಜಿಲ್ಲೆಯಲ್ಲಿ ಇತ್ತೀಚಿನ ಅತಿವೃಷ್ಠಿಯಿಂದ 1860ಕ್ಕೂ ಹೆಚ್ಚಿನ ಮನೆಗಳಿಗೆ ನೀರು ನುಗ್ಗಿದ್ದು, ಈ ಪೈಕಿ 1400ಕ್ಕೂ ಹೆಚ್ಚಿನ ಫಲಾನುಭವಿಗಳಿಗೆ 10 ಸಾವಿರ ರೂ. ತಕ್ಷಣ ಪರಿಹಾರ ನೀಡಲಾಗಿದೆ. ಮಳೆಯಿಂದ ಜೀವ ಕಳೆದುಕೊಂಡ 6 ಮೃತರ ಅವಲಂಭಿತರಿಗೆ ತಲಾ 5 ಲಕ್ಷ ರೂ. ಪರಿಹಾರ ವಿತರಿಸಿದೆ. ಜಿಲ್ಲೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶ ಬೆಳೆ ಹಾನಿ ಅಂದಾಜಿಸಿದ್ದು, ಜಂಟಿ ಸಮೀಕ್ಷೆ ಮಾಡಲಾಗುತ್ತಿದೆ. ನೆರೆ ಹಾವಳಿ ಪರಿಹಾರಕ್ಕೆ ಡಿ.ಸಿ. ಖಾತೆಯಲ್ಲಿ 41 ಕೋಟಿ ರೂ. ಹಣ ಇದೆ. ಹೀಗಾಗಿ ನೆರೆ ಹಾವಳಿ ಪರಿಹಾರಕ್ಕೆ ಅನುದಾನದ ಕೊರತೆಯಿಲ್ಲ ಎಂದು ಭರವಸೆ ನೀಡಿದರು.

ಸ್ಪಂದನ ಕಲಬುರಗಿಗೆ ಮೆಚ್ಚುಗೆ: ಸಾರ್ವಜನಿಕರ ಕುಂದುಕೊರತೆಗಳನ್ನು ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಮಕ್ಷಮ ಆಲಿಸುವ, ವಿವಿಧ ಸೌಲಭ್ಯಗಳನ್ನು ವಿತರಿಸುವ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಒದಗಿಸುವ ಸ್ಪಂದನ ಕಲಬುರಗಿ ಎಂಬ ವಿನೂತನ ಕಾರ್ಯಕ್ರಮ ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಜಿಲ್ಲೆಯಲ್ಲಿ ಪ್ರಾರಂಭಿಸಿದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು ಇದನ್ನು ಜಿಲ್ಲಾ ಪಂಚಾಯತಿ ಕ್ಷೇತ್ರಕ್ಕೂ ವಿಸ್ತರಣೆಗೆ ಸಲಹೆ ನೀಡಿದರು. ಇದನ್ನೂ ಓದಿ: ಸ್ವಾತಂತ್ರ‍್ಯ ದಿನದಂದೇ ರೈತರ ಪ್ರತಿಭಟನೆ – ದರದರನೆ ಎಳೆದೊಯ್ದ ಪೊಲೀಸರು

Live Tv

[brid partner=56869869 player=32851 video=960834 autoplay=true]

TAGGED:Murugesh niraniಕಲಬುರಗಿಮುರುಗೇಶ ನಿರಾಣಿಸ್ವಾತಂತ್ರ್ಯೋತ್ಸವ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Vijay Thalapathy Tamil Nadu Karur Stampede
Latest

ಕರೂರು ಕಾಲ್ತುಳಿತ – ಮಾ.10ಕ್ಕೆ ವಿಚಾರಣೆಗೆ ಹಾಜರಾಗುವಂತೆ ವಿಜಯ್‌ಗೆ ಸಿಬಿಐ ಸಮನ್ಸ್

Public TV
By Public TV
5 minutes ago
T20 World Cup Final Varun Chakravarthy Mocks Pakistan With Another Tea Cup Photo
Cricket

ಟೀ ಕುಡಿಯುವ ಫೋಟೋ ಅಪ್ಲೋಡ್‌ ಮಾಡಿ ಪಾಕಿಸ್ತಾನವನ್ನು ಟ್ರೋಲ್‌ ಮಾಡಿದ ಚಕ್ರವರ್ತಿ

Public TV
By Public TV
36 minutes ago
Chikkaballapura Death
Chikkaballapur

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವು

Public TV
By Public TV
47 minutes ago
Mandya Suicide
Crime

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ – ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ್ದ ಮಗು ಪಾರು

Public TV
By Public TV
1 hour ago
Jan Aushadhi Kendra 2
Bengaluru City

ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಮೆಡಿಸನ್‌ ಟೆಸ್ಟ್‌ಗೆ ಆರೋಗ್ಯ ಸಚಿವ ಸೂಚನೆ

Public TV
By Public TV
1 hour ago
Red Chilli
Districts

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೂ ತಟ್ಟಿದ ಇರಾನ್-ಇಸ್ರೇಲ್ ವಾರ್ ಎಫೆಕ್ಟ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?