Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chitradurga

ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾಶ್ರೀಗೆ ಬಿಡುಗಡೆ ಭಾಗ್ಯ – ಬೆಂಬಲಿಗರಿಂದ ಸಂಭ್ರಮಾಚರಣೆ

Public TV
Last updated: October 7, 2024 6:39 pm
Public TV
Share
4 Min Read
Muruga shree
SHARE

ಚಿತ್ರದುರ್ಗ: ಪೋಕ್ಸೊ ಕೇಸ್‌ನಲ್ಲಿ (POCSO Case) ನ್ಯಾಯಾಂಗ ಬಂಧನದಲ್ಲಿದ್ದ ಚಿತ್ರದುರ್ಗದ ಮುರುಘಾಶ್ರೀ (Muruga Shree) ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ಹಿನ್ನೆಲೆ ಜೈಲು ಆವರಣದಲ್ಲಿ ಮುರುಘಾಶ್ರೀ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ.

ಜೈಲಿನಿಂದ ಬಿಡುಗಡೆಯಾದ ಮುರುಘಾಶ್ರೀ ಸ್ವಾಗತಿಸಲು ಮುರುಘಾ ಮಠದ ಉಸ್ತುವಾರಿಯಾಗಿದ್ದ ಬಸವ ಪ್ರಭು ಶ್ರೀ ಮತ್ತು ಉತ್ತರಾಧಿಕಾರಿ ಬಸವಾದಿತ್ಯ ಜೈಲಿಗೆ ಧಾವಿಸಿದ್ದರು. ಬಿಡುಗಡೆಯಾದ ಮುರುಘಾಶ್ರೀ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಅಲ್ಲದೇ ಅವರ ಬೆಂಬಲಿಗರು ಹೂವಿನಹಾರ ಹಾಕುವ ಮೂಲಕ ಜಯಘೋಷ ಕೂಗಿದರು. ಜೊತೆಗೆ ಸಿಹಿ ಹಂಚಿ ಸಂಭ್ರಮಿಸಿದರು. ಬಳಿಕ ಪೊಲೀಸ್ ಬಿಗಿ ಭದ್ರತೆಯಲ್ಲಿ ನಗುನಗುತ್ತಾ ಮುರುಘಾಶ್ರೀ ನಗುನಗುತ್ತಾ ತೆರಳಿದರು. ಮುರುಘಾ ಮಠದ ಮುಂದೆ ಸಾಗುತ್ತಾ ರಸ್ತೆ ಬದಿ ನಿಂತಿದ್ದ ಜನರತ್ತ ಮುರುಘಾಶ್ರೀ ಕೈ ಬೀಸಿದರು.ಇದನ್ನೂ ಓದಿ: ನಾನು ಆರೋಗ್ಯವಾಗಿದ್ದೇನೆ, ಆತಂಕ ಬೇಡ – ಅನಾರೋಗ್ಯದ ಬಗ್ಗೆ ರತನ್ ಟಾಟಾ ಸ್ಪಷ್ಟನೆ

ಈ ವೇಳೆ ಮಾದ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಮುರುಘಾಶ್ರೀ, ಕಾನೂನು ಹೋರಾಟದಲ್ಲಿ ಸತ್ಯಕ್ಕೆ ಜಯ ಸಿಗುವ ನಿರೀಕ್ಷೆಯಿದೆ. ಶರಣಸಂಸ್ಕ್ರತಿ ಉತ್ಸವದ ಸಂಭ್ರಮಾಚರಣೆ ವೇಳೆ ಬಿಡುಗಡೆಯಾಗಿರುವ ಕುರಿತು ನಾವು ಯೋಚಿಸಿ ಹೆಜ್ಜೆಇಡುತ್ತೇವೆ. ಈಗ ಮಾತನಾಡಲು ಸಕಾಲವಲ್ಲ. ಮೌನವಹಿಸುವ ಕಾಲ ಎಂದಷ್ಟೇ ಹೇಳುತ್ತೇವೆ ಎಂದರು.

ಏನಿದು ಪ್ರಕರಣ:
ಚಿತ್ರದುರ್ಗದ (Chitradurga) ಮುರುಘಾಶ್ರೀ ವಿರುದ್ಧ 2022ರ ಆ.26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದ್ದು, ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಂದ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ಕೇಸ್ ದಾಖಲಾಗಿತ್ತು.ಇದನ್ನೂ ಓದಿ: ಬಸ್‌ಗೆ ಬೈಕ್ ಅಡ್ಡಬಂದಿದ್ದಕ್ಕೆ ಡ್ರೈವರ್, ನಿರ್ವಾಹಕನ ಜೊತೆ ಬೈಕ್ ಸವಾರನ ಹೊಡೆದಾಟ

ಅದೇ ವರ್ಷ ಆ.27ರಂದು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಯಾಗಿದ್ದು, 2022ರ ಸೆ.01 ರಂದು ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ ಬಂಧನಕ್ಕೊಳಗಾಗಿದ್ದರು. ಬಳಿಕ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮುರುಘಾಶ್ರೀ ವಿರುದ್ಧ 2022ರ ಅ.13 ರಂದು ಮಠದ ಅಡುಗೆ ಸಹಾಯಕಿಯಿಂದ ಮತ್ತೊಂದು ದೂರು ದಾಖಲಾಗಿತ್ತು. ಆ ಕೇಸಲ್ಲಿ ತನ್ನಿಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆಯೂ ಲೈಂಗಿಕ ಕಿರುಕುಳ ನೀಡಿರುವುದಾಗಿಯೂ ಎಂದು ಕೂಡ ಉಲ್ಲೇಖಿಸಿದ್ದರು

ಈ ವೇಳೆ ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ, ಎ6 ಮುರುಘಾಶ್ರೀ ಸಹಾಯಕ ಮಹಾಲಿಂಗ, ಎ7 ಅಡುಗೆಭಟ್ಟ ಕರಿಬಸಪ್ಪ ವಿರುದ್ದ ಕೇಸ್ ದಾಖಲಾಗಿದ್ದು, ಸಂಪೂರ್ಣ ತನಿಖೆ ನಡೆಸಿದ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಹಾಗೂ ಚಿತ್ರದುರ್ಗ ಡಿವೈಎಸ್ಪಿ ಅನಿಲ್ ಕುಮಾರ್ ನೇತೃತ್ವದ ತಂಡವು 2022ರ ಅ.27 ರಂದು 694 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಅದರಲ್ಲಿ 347 ಪುಟಗಳ ಎ ಮತ್ತು ಬಿ ಎಂದು ಎರಡು ಸೆಟ್ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಇನ್ನೂ 2023ರ ಜ.10ಕ್ಕೆ ದಾಖಲಾದ 2ನೇ ಪೋಕ್ಸೊ ಪ್ರಕರಣದಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು 761 ಪುಟಗಳ ಚಾರ್ಜ್‌ಶೀಟ್‌ನ್ನು ಸಲ್ಲಿಸಿದ್ದರು. ಇಷ್ಟೆಲ್ಲ ಸಾಕ್ಷ್ಯಾಧಾರ ಹಾಗೂ ಚಾರ್ಜ್‌ಶೀಟ್‌ ಮೇಲೆ ಚಿತ್ರದುರ್ಗ ನ್ಯಾಯಾಲಯ ವಿಚಾರಣೆ ನಡೆಸಿತ್ತು. ವಿಚಾರಣೆ ನಡಯುವಾಗಲೇ 2023ರ ನ.8 ರಂದು ಹೈಕೋರ್ಟ್ ನಿಂದ ಮುರುಘಾಶ್ರೀಗೆ ಷರತ್ತುಬದ್ಧ ಜಾಮೀನು ಮಂಜೂರಾಗಿತ್ತು. ನ.16ರಿಂದು ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆಯಾಗಿದ್ದರು.ಇದನ್ನೂ ಓದಿ: ಫೇಕ್ ಷೇರು ಮಾರ್ಕೆಟ್ ವೆಬ್‌ಸೈಟ್‌ ಮಾಡಿ ಕೊಟ್ಯಂತರ ರೂ. ವಂಚನೆ – 8 ಸೈಬರ್ ವಂಚಕರು ಅರೆಸ್ಟ್‌

2ನೇ ಪೋಕ್ಸೋ ಕೇಸಿನಲ್ಲಿ ಜಾಮೀನು ಪಡೆಯದ ಹಿನ್ನೆಲೆಯಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹಿನ್ನೆಲೆ ಪುನಃ ನ.20ರಂದು ಮಧ್ಯಾಹ್ನ ಮುರುಘಾಶ್ರೀ ಮತ್ತೆ ಬಂಧನಕ್ಕೊಳಗಾದರು. ಬಳಿಕ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಆಗ ನ.20 ಸಂಜೆ ವೇಳೆಗೆ ಹೈಕೋರ್ಟ್ ಸೂಚನೆ ಮೇರೆಗೆ ಅಂದು ಬಿಡುಗಡೆ ಭಾಗ್ಯ ಸಿಕ್ಕಿತ್ತು.

ಆಗ ಸಂತ್ರಸ್ತೆಯರು ಮುರುಘಾಶ್ರೀಗಳ ಜಾಮೀನು ರದ್ದತಿ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಹಿನ್ನೆಲೆಯಲ್ಲಿ ಮುಖ್ಯ ಸಾಕ್ಷ ವಿಚಾರಣೆ ಪೂರ್ಣ ಆಗುವವರೆಗೆ ಮುರುಘಾಶ್ರೀ ಬಂಧನದಲ್ಲಿಡುವಂತೆ ಸುಪ್ರಿಂ ಕೋರ್ಟ್ ಆದೇಶ ಮಾಡಿತ್ತು. ಹೀಗಾಗಿ 2024ರ ಮೇ.27 ರಂದು ಕೋರ್ಟ್ ಎದುರು ಶರಣಾದ ಮುರುಘಾಶ್ರೀಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿತ್ತು.

ಇಂದಿಗೆ ಸಂತ್ರಸ್ತೆಯರಿಬ್ಬರು ಸೇರಿದಂತೆ 13 ಜನರ ಸಾಕ್ಷ ವಿಚಾರಣೆ ಅಂತ್ಯವಾದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಮುರುಘಾಶ್ರೀಗೆ ಇಂದು ಬಿಡುಗಡೆ ಭಾಗ್ಯ ಸಿಕ್ಕಿದೆ. ಇನ್ನು ಕೋರ್ಟ್ ಆದೇಶದಂತೆ ಬಿಡುಗಡೆಯಾದ ಮುರುಘಾಶ್ರೀ ಹೈಕೋರ್ಟ್ ಷರತ್ತಿನ ಅನ್ವಯ ಚಿತ್ರದುರ್ಗ ನಗರದಲ್ಲಿ ನೆಲೆಸದೇ ದಾವಣಗೆರೆಯ (Davanagere) ಶಿವಯೋಗ ಮಂದಿರಕ್ಕೆ ತೆರಳಿದರು.

ಇನ್ನು ಮುರುಘಾಶ್ರೀ ಪರ ಹೈಕೋರ್ಟ್ ವಕೀಲರಾದ ಸಿವಿ ನಾಗೇಶ್ ವಾದ ಮಂಡಿಸಿದ್ದರು. ಇವರಿಗೆ ಚಿತ್ರದುರ್ಗದ ಮುರುಘಾ ಮಠದ ವಕೀಲರಾದ ಕೆನ್ ವಿಶ್ವನಾಥಯ್ಯ, ಉಮೇಶ್ ಹಾಗೂ ಪ್ರತಾಪ್ ಜೋಗಿ ಸಾಥ್ ನೀಡಿದ್ದರು. ಈ ವೇಳೆ ಮುರುಘಾಶ್ರೀ ಬೆಂಬಲಿಗರಾದ ಜಿತೇಂದ್ರ, ವಕೀಲ ಪ್ರತಾಪ್, ಶಿಷ್ಯರಾದ ಬಸವಪ್ರಭು ಶ್ರೀ ಸೇರಿದಂತೆ ಮುರುಘಾಶ್ರೀ ಬೆಂಬಲಿಗರು ಇದ್ದರು.ಇದನ್ನೂ ಓದಿ: ಮೈಕ್ರೋRNA ಆವಿಷ್ಕಾರ – ವಿಕ್ಟರ್‌, ಗ್ಯಾರಿಗೆ ನೊಬೆಲ್‌ ಪುರಸ್ಕಾರ

TAGGED:bailChitradurgadavanagereMuruga ShreePOCSO caseReleaseಚಿತ್ರದುರ್ಗದಾವಣಗೆರೆಪೋಕ್ಸೊ ಕೇಸ್ಬಿಡುಗಡೆಮುರುಘಾಶ್ರೀಷರತ್ತು ಬದ್ಧ ಜಾಮೀನು
Share This Article
Facebook Whatsapp Whatsapp Telegram

Cinema Updates

mrunal thakur
ಮೃಣಾಲ್ ಠಾಕೂರ್ ಫ್ಯಾನ್ಸ್‌ಗೆ ಡಬಲ್ ಧಮಾಕ!
4 hours ago
aishwarya rai 1 2
‘ಸಿಂಧೂರ’ ಆಯ್ತು, ಈಗ ಭಗವದ್ಗೀತೆ ಶ್ಲೋಕ- ಭಾರತೀಯ ಸಂಸ್ಕೃತಿ ಪ್ರದರ್ಶಿಸಿದ ಐಶ್ವರ್ಯಾ ರೈ!
7 hours ago
pranitha subhash
ಕಾನ್ ಚಿತ್ರೋತ್ಸವದಲ್ಲಿ ಪ್ರಣಿತಾ ಧರಿಸಿದ್ದ ವಾಚ್ ಬೆಲೆ ಕೇಳಿ ಫ್ಯಾನ್ಸ್ ಶಾಕ್!
8 hours ago
rukmini vasanth
ಬಿಗ್ ಆಫರ್ ಗಿಟ್ಟಿಸಿಕೊಂಡ ಕನ್ನಡತಿ- ಪ್ರಭಾಸ್‌ಗೆ ರುಕ್ಮಿಣಿ ವಸಂತ್ ನಾಯಕಿ?
10 hours ago

You Might Also Like

RCB Fans
Cricket

ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆಲ್ಲೋವರೆಗೂ ನಾನು ಮದುವೆಯಾಗಲ್ಲ: ಫಲಕ ಪ್ರದರ್ಶಿಸಿದ ಅಭಿಮಾನಿ

Public TV
By Public TV
43 minutes ago
RCB Playoffs
Cricket

IPL 2025 | ಕೊನೆಯಲ್ಲಿ ʻಸನ್‌ʼ ಸ್ಟ್ರೋಕ್‌ – ಮೊದಲೆರಡು ಸ್ಥಾನ ಕಳೆದುಕೊಂಡರೆ ಆರ್‌ಸಿಬಿಗೆ ಆಗುವ ನಷ್ಟವೇನು?

Public TV
By Public TV
44 minutes ago
Weather 1
Bengaluru City

ಬೆಂಗಳೂರು | ಧಾರಾಕಾರ ಮಳೆಯಿಂದಾಗಿ ಬೆಸ್ಕಾಂಗೆ 3.54 ಕೋಟಿ ನಷ್ಟ

Public TV
By Public TV
57 minutes ago
Phil Salt
Cricket

ಸನ್‌ ರೈಸರ್ಸ್‌ ಆರ್ಭಟಕ್ಕೆ ಆರ್‌ಸಿಬಿ ಬರ್ನ್‌ – ಹೈದರಾಬಾದ್‌ಗೆ 42 ರನ್‌ಗಳ ಜಯ, 3ನೇ ಸ್ಥಾನಕ್ಕೆ ಕುಸಿದ ಬೆಂಗಳೂರು

Public TV
By Public TV
1 hour ago
virat kohli rcb fans
Cricket

ಬೆಂಗಳೂರಲ್ಲಿ ಮಿಸ್‌.. ಕೊಹ್ಲಿಗೆ ಲಕ್ನೋದಲ್ಲಿ ಸಿಕ್ತು ಆರ್‌ಸಿಬಿ ಅಭಿಮಾನಿಗಳಿಂದ ‘ಟೆಸ್ಟ್‌ ಫೇರ್‌ವೆಲ್‌’

Public TV
By Public TV
1 hour ago
police station
Belgaum

ಕರ್ನಾಟಕದ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದಲ್ಲಿ ಗ್ಯಾಂಗ್ ರೇಪ್

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?