Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 23 ವರ್ಷಗಳ ನಂತರ ನಿರ್ದೇಶನಕ್ಕಿಳಿದ ಸಂಗೀತ ನಿರ್ದೇಶಕ ಮನೋಹರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | 23 ವರ್ಷಗಳ ನಂತರ ನಿರ್ದೇಶನಕ್ಕಿಳಿದ ಸಂಗೀತ ನಿರ್ದೇಶಕ ಮನೋಹರ್

Cinema

23 ವರ್ಷಗಳ ನಂತರ ನಿರ್ದೇಶನಕ್ಕಿಳಿದ ಸಂಗೀತ ನಿರ್ದೇಶಕ ಮನೋಹರ್

Public TV
Last updated: March 31, 2023 10:14 am
Public TV
Share
3 Min Read
V 1
SHARE

ಮೆಲೋಡಿ ಹಿಟ್ ಸಿನಿಮಾಗಳ ಸಂಗೀತ ನಿರ್ದೇಶಕ ವಿ.ಮನೋಹರ್ (V. Manohar) ಬಹಳ ದಿನಗಳ ನಂತರ ನಿರ್ದೇಶನ ಮಾಡಿರುವ ಚಿತ್ರ ದರ್ಬಾರ್ (Darbar), ಸತೀಶ್ (Satish) ಕಥೆ ಬರೆದು ನಿರ್ಮಾಣದ ಜೊತೆಗೆ ನಾಯಕನಾಗೂ ನಟಿಸಿರುವ ಈ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಮಂಗಳವಾರ ಇದರ ಮೇಕಿಂಗ್ ವಿಡಿಯೋ ಪ್ರದರ್ಶನ  ಹಾಗೂ ಪತ್ರಿಕಾಗೋಷ್ಠಿ ಎಸ್.ಆರ್.ವಿ. ಥಿಯೇಟರಿನಲ್ಲಿ ನಡೆಯಿತು. ಇಲ್ಲಿ ಚಿತ್ರದ ವಿಶೇಷತೆಗಳ ಕುರಿತು ಚಿತ್ರತಂಡ ಮಾಹಿತಿಗಳನ್ನು ಹಂಚಿಕೊಂಡಿತು.

V 6

ಈ ಸಂದರ್ಭದಲ್ಲಿ ಮಾತನಾಡಿದ ಮನೋಹರ್, ಸುಮಾರು 23 ವರ್ಷಗಳ ನಂತರ ನಾನು ನಿರ್ದೇಶನಕ್ಕೆ ಕೈ ಹಾಕಿದ್ದೇನೆ. ಅದಕ್ಕೆ ಸತೀಶ್ ಅವರೇ ಕಾರಣ. ನಾನು ಇಂದ್ರಧನುಷ್ ಚಿತ್ರ ಮಾಡಿದ ನಂತರ ಏನೇನೋ ಆಯಿತು. ಅಲ್ಲದೆ ನಾನೂ ಸೀರಿಯಲ್, ಸಂಗೀತ ನಿರ್ದೇಶನ ಅಂತ ಬ್ಯುಸಿಯಾಗ್ತಾ ಹೋದೆ. ಸಿನಿಮಾ ಶುರು ಮಾದ್ಬೇಕಂತ ಬಂದವರು ನಂತರ ಮುಂದುವರಿಯುತ್ತಲೇ ಇರಲಿಲ್ಲ,  ಸಿನಿಮಾರಂಗಕ್ಕೆ ಬರೋಕೂ ಮುನ್ನ ನಾನು ಕೆಲ ದಿನಪತ್ರಿಕೆಗಳಿಗೆ ಕಾರ್ಟೂನ್ ಬರೆಯುತ್ತಿದ್ದೆ. ಆಗಿಂದಲೇ ನಾನು ರಾಜಕೀಯದ ಬಗ್ಗೆ  ತಿಳಿದುಕೊಂಡಿದ್ದೆ. ಇದೇ ಕಂಟೆಂಟ್ ಇಟ್ಟುಕೊಂಡು ಸಿನಿಮಾ ಮಾಡಬೇಕು ಎಂದುಕೊಡಿದ್ದೆ. ಸತೀಶ್ ಅವರು ನನಗೆ ಹಿಂದೆ ದಿಲ್ದಾರ್   ಟೈಮ್‌ನಲ್ಲಿ ಸ್ನೇಹಿತರಾಗಿದ್ದರು. ಮೊನ್ನೆ ಮತ್ತೆ ಸಿಕ್ಕಾಗ ಅವರೊಂದು ಕಥೆ ಹೇಳಿದರು. ಅದರಲ್ಲೂ ಪಾಲಿಟಿಕ್ಸ್ ಇತ್ತು. ತುಂಬಾ ಚೆನ್ನಾಗಿ ಕಥೆ ಮಾಡಿದ್ದರು. ಇವತ್ತಿನ ರಾಜಕೀಯವನ್ನು ವ್ಯಂಗ್ಯವಾಗಿ ಹೇಳುವ ಸಬ್ಜೆಕ್ಟ್  ಎಂದು ದರ್ಬಾರ್ ಚಿತ್ರವನ್ನು ಆರಂಭಿಸಲು ಸೃಷ್ಟಿಯಾದ ಸಂದರ್ಭವನ್ನು ನಿರ್ದೇಶಕ ವಿ. ಮನೋಹರ್ ವಿವರಿಸಿದರು. ಇದನ್ನೂ ಓದಿ: ʻಪೊನ್ನಿಯಿನ್ ಸೆಲ್ವನ್-2ʼ ಟ್ರೈಲರ್ ರಿಲೀಸ್: ಚೋಳಾ ಸಾಮ್ರಾಜ್ಯಕ್ಕಾಗಿ ಮುಂದುವರೆದ ಹೋರಾಟ

V 5

ಮಾತು ಮುಂದುವರೆಸಿದ ಅವರು, ಚಿತ್ರವನ್ನು ಶುರು ಮಾಡುವ ವೇಳೆಗೆ ಕೋವಿಡ್ ಬಂತು. ಎರಡನೇ ಅಲೆಯ ನಂತರ ಚಿತ್ರವನ್ನು ಕಂಪ್ಲೀಟ್ ಮಾಡಿದೆವು. ಮದ್ದೂರು ಬಳಿಯ ಹಳ್ಳಿಯೊಂದರಲ್ಲಿ   ಚಿತ್ರದ ಬಹುತೇಕ ಶೂಟಿಂಗ್ ನಡೆದಿದೆ.‌ ಅಲ್ಲಿಯ ಜನರೂ ಅಷ್ಟೆ ಚೆನ್ನಾಗಿ ಸಹಕಾರ  ನೀಡಿದರು. ಹಿರಿಯ ಕಲಾವಿದರಾದ ಎಂ.ಎನ್.ಲಕ್ಷ್ಮಿದೇವಿ, ಅಶೋಕ್, ಸಾಧು ಕೋಕಿಲ, ನವೀನ್ ಡಿ, ಪಡೀಲ್, ಹುಲಿ ಕಾರ್ತೀಕ್ ಹೀಗೆ ಸಾಕಷ್ಟು ಜನ ಅಭಿನಯಿಸಿದ್ದಾರೆ. ಜಾಹ್ನವಿ ಈ ಚಿತ್ರದಲ್ಲಿ  ಪೂರ್ಣ ಪ್ರಮಾಣದ ನಾಯಕಿಯಾಗಿ ಅಭಿನಯಿಸಿದ್ದಾರೆ. ಅಲ್ಲದೆ ೩ ಹಾಡುಗಳು ಚಿತ್ರದಲ್ಲಿದ್ದು, ಟೈಟಲ್ ಸಾಂಗನ್ನು ಚಂದನ್ ಶೆಟ್ಟಿ ಹಾಡಿದ್ದಾರೆ, ರಾಜಕೀಯ ವಿಡಂಬನೆಯ ಹಾಡನ್ನು ಉಪೇಂದ್ರ ಹಾಡಿದ್ದಾರೆ, ಇನ್ನು ಡ್ಯುಯೆಟ್ ಹಾಡಿಗೆ ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ, ಚಿತ್ರವೀಗ ಡಿಟಿಎಸ್ ಹಂತದಲ್ಲಿದ್ದು, ಏಪ್ರಿಲ್ ವೇಳೆಗೆ ತೆರೆಗೆ ತರುವ ಯೋಜನೆಯಿದೆ ಎಂದು  ವಿವರಿಸಿದರು. ನಂತರ ಚಿತ್ರದ ನಾಯಕ, ನಿರ್ಮಾಪಕ, ಸತೀಶ್ ಮಾತನಾಡುತ್ತ.  2 ದಿನಗಳಲ್ಲಿ ಸೆನ್ಸಾರ್‌ಗೆ ಹೋಗ್ತಿದ್ದೇವೆ, ನಮ್ಮ ಚಿತ್ರವು ನಿಜವಾಗಿಯೂ ನಾವು ಹಾಕುವ ಮತ ಸರಿಯಾಗಿದೆಯೇ, ಸೂಕ್ತ ವ್ಯಕ್ತಿಗೆ ನಾವು ಹಾಕ್ತಿದ್ದೇವಾ ಎಂಬ ಚಿಂತನೆಗೆ ಹಚ್ಚುವ ಕೆಲಸ ಮಾಡುತ್ತದೆ.  ವಿ.ಮನೋಹರ್ ಅಂಥವರೊಂದಿಗೆ ಕೆಲಸ ಮಾಡಿದ್ದು ಅದೃಷ್ಟವೇ ಸರಿ. ನಾನು ಹೇಳಿದ್ದನ್ನು ಅವರು ಬರೆಯುತ್ತಿದ್ದುದು ನೋಡಿ  ನನಗೆ ಮುಜುಗರವಾಯಿತ್ತು. ಪ್ರತಿ ಪಾತ್ರಕ್ಕೆ ಇಂಥವರೇ ಬೇಕೆಂದು ಸೆಲೆಕ್ಟ್ ಮಾಡಿಕೊಂಡು ನೀವೇ ಮಾಡಿ ಎಂದು ಒತ್ತಾಯಿಸಿ ಮಾಡಿಸಿದ್ದಾರೆ. ಅವರ ಒತ್ತಾಯಕ್ಕೆ ಮಣಿದು ನಾನೂ ಅಭಿನಯಿಸಿದ್ದೇನೆ ಎಂದು ಹೇಳಿದರು.

V 7

ನಾಯಕಿ ಜಾಹ್ನವಿ ಮಾತನಾಡಿ ಇದು ನನ್ನ ಮೊದಲ ಚಿತ್ರ. ಮದ್ಯಮ ವರ್ಗದ  ಸೈಕಾಲಜಿ ಸ್ಟೂಡೆಂಟ್, ರಜೆಗೆಂದು ಊರಿಗೆ ಬಂದಾಗ ನಾಯಕನ ಪರಿಚಯವಾಗುತ್ತದೆ. ನಂತರ ಆತನಿಗೆ ಸಪೋರ್ಟ್ ಮಾಡುತ್ತೇನೆ. ಮೊದಲ ಚಿತ್ರದಲ್ಲೇ ಇಂಥ ದೊಡ್ಡ ಡೈರೆಕ್ಟರ್ ಜೊತೆ ವರ್ಕ್ ಮಾಡೋ ಅವಕಾಶವಿತ್ತು ಎಂದು ಹೇಳಿದರು. ನಟ ಹುಲಿಕಾರ್ತೀಕ್ ಹಾಗೂ  ಛಾಯಾಗ್ರಾಹಕ ಸಾಮ್ರಾಟ್ ಎಸ್. ಚಿತ್ರದ ಕುರಿತಂತೆ ಮಾತನಾಡಿದರು.   ಹಳ್ಳಿಯೊಂದರಲ್ಲಿ  ನಡೆಯುವ  ರಾಜಕೀಯ, ಅಧಿಕಾರಕ್ಕಾಗಿ ಅಲ್ಲಿನ  ಮುಖಂಡರು ನಡೆಸುವ ಲಾಭಿ ಇದನ್ನೆಲ್ಲ  ದರ್ಬಾರ್ ಚಿತ್ರದಲ್ಲಿ  ಹೇಳಲಾಗಿದೆ.  ಈ ಚಿತ್ರಕ್ಕೆ ಹಿರಿಯ ಸಂಗೀತ ನಿರ್ದೇಶಕ ವಿ.ಮನೋಹರ್ ಅವರು ಆಕ್ಷನ್ ಕಟ್ ಹೇಳಿದ್ದಾರೆ. ಜೊತೆಗೆ ಸಂಗೀತ ನಿರ್ದೇಶನ ಕೂಡ ಮಾಡಿದ್ದಾರೆ,  ಜನುಮದ ಜೋಡಿ, ಸೂರ್ಯವಂಶ, ಜೋಡಿಹಕ್ಕಿ ಸೇರಿದಂತೆ ಕನ್ನಡದ ಹಲವಾರು ಸೂಪರ್ ಹಿಟ್ ಚಲನಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡಿರುವ ವಿ. ಮನೋಹರ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಮೂರನೇ ಚಿತ್ರವಿದು.  ಸತೀಶ್  ಕಥೆ, ಚಿತ್ರಕಥೆ ಹಾಗೂ  ಸಂಭಾಷಣೆ ಬರೆದಿದ್ದು, ದರ್ಬಾರ್ ಪ್ರೊಡಕ್ಷನ್ಸ್ ಮೂಲಕ  ಬಿ.ಎನ್. ಶಿಲ್ಪ ಅವರು  ನಿರ್ಮಾಣ ಮಾಡಿದ್ದಾರೆ. ಮಾಸ್ ಮಾದ, ವಿನೋದ್ ಸಾರಥ್ಯದ 3 ಸಾಹಸ ದೃಶ್ಯಗಳು  ಚಿತ್ರದಲ್ಲಿವೆ, ಮಂಡ್ಯ,  ಮದ್ದೂರು ಹಾಗೂ ಕೋಲಾರ ಸಮೀಪದ ಮಾಲೂರಿನಲ್ಲಿ  ಚಿತ್ರೀಕರಣ ನಡೆಸಲಾಗಿದೆ. ಉಳಿದ ತಾರಾಬಳಗದಲ್ಲಿ  ಸಾಧುಕೋಕಿಲ, ನವೀನ್ ಡಿ ಪಡೀಲ್, ಹುಲಿ ಕಾರ್ತೀಕ್, ಕಾಮಿಡಿ ಸಂತು ಹಾಗೂ ತ್ರಿವೇಣಿ  ನಟಿಸಿದ್ದಾರೆ.

TAGGED:DarbarJahnaviSatishV. Manoharಜಾಹ್ನವಿದರ್ಬಾರ್ವಿ.ಮನೋಹರ್ಸತೀಶ್
Share This Article
Facebook Whatsapp Whatsapp Telegram

Cinema news

BBK 12 Gilli Nata Gym Ravi
ಗಲ್ಲಿ ಗಲ್ಲಿಯಲ್ಲಿ ಗಿಲ್ಲಿ ಹೆಸರು ಕೇಳಿ ಬರ್ತಿದೆ: ಜಿಮ್ ರವಿ
Latest Sandalwood Top Stories TV Shows
bigg boss sudeep
ಬಿಗ್‌ ಬಾಸ್‌ ವಿನ್ನರ್‌ ಯಾರು ಅನ್ನೋದು ಇಂದು ಸೂರ್ಯಾಸ್ತದ ಬಳಿಕ ಗೊತ್ತಾಗುತ್ತೆ: ಸುದೀಪ್‌
Cinema Latest Main Post TV Shows
bigg boss kannada 12 finalists
Bigg Boss: 12ರ ಗ್ರ‍್ಯಾಂಡ್ ಫಿನಾಲೆಗೆ ಕೌಂಟ್‌ಡೌನ್; ಯಾರಾಗ್ತಾರೆ ಬಿಗ್ ಬಾಸ್ 12ರ ವಿನ್ನರ್?
Cinema Latest Main Post TV Shows
BBK 12
ಬಿಗ್‌ಬಾಸ್ ವಿನ್ನರ್‌ಗೆ 370000000 ವೋಟ್ – ಗೆಲ್ಲೋದ್ಯಾರು?
Latest Top Stories TV Shows

You Might Also Like

Bidar Death
Bidar

ಗಾಳಿಪಟ ಹಿಡಿಯಲು ಹೋಗಿ ಕಟ್ಟಡ ಮೇಲಿಂದ ಬಿದ್ದು ಯುವಕ ಸಾವು

Public TV
By Public TV
1 hour ago
car hits electric pole in bhatkal two dead
Crime

ಭಟ್ಕಳ | ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಇಬ್ಬರು ದುರ್ಮರಣ

Public TV
By Public TV
1 hour ago
Noida Techie
Latest

ನೋಯ್ಡಾದಲ್ಲಿ ದಟ್ಟ ಮಂಜಿನಿಂದ ಕಂದಕಕ್ಕೆ ಉರುಳಿದ ಕಾರು – ಟೆಕ್ಕಿ ಸಾವು

Public TV
By Public TV
1 hour ago
Eknath Shinde Sena corporators
Latest

ಮುಂಬೈನಲ್ಲಿ ಮತ್ತೆ ರೆಸಾರ್ಟ್ ರಾಜಕೀಯ – ಶಿಂಧೆ ಸೇನಾ ಕಾರ್ಪೊರೇಟರ್‌ಗಳು ಫೈವ್‌ ಸ್ಟಾರ್ ಹೋಟೆಲ್‌ಗೆ ಸ್ಥಳಾಂತರ

Public TV
By Public TV
2 hours ago
MLA Nanjegowda
Districts

ಗಿಲ್ಲಿ ನಟನೇ ಬಿಗ್‌ಬಾಸ್ ಗೆದ್ದು ಬರಲಿ – ಶಾಸಕ ನಂಜೇಗೌಡ ಶುಭಹಾರೈಕೆ

Public TV
By Public TV
2 hours ago
Excavation at Lakkundi Metal Shivalinga discovered
Districts

ಲಕ್ಕುಂಡಿಯಲ್ಲಿ ಉತ್ಖನನ – ಲೋಹದ ಶಿವಲಿಂಗ ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?