ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಕಳ್ಳತನ ಮಾಡಿರೋ ಘಟನೆ ಬಸವೇಶ್ವರ ನಗರದ ಶಿವನಗರ 9ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಇಂದು ಬೆಳಗಿನ ಜಾವ ಮನೆ ಮುಂದೆ ನಿಂತಿರುವ ಕಾರಿನ ಗಾಜು ಹೊಡೆದಿರುವ ಕಿಡಿಗೇಡಿಗಳು, ಕಾರಿನಲ್ಲಿದ್ದ ಮ್ಯೂಸಿಕ್ ಸಿಸ್ಟ್ಂಗಳನ್ನು ಕದ್ದೊಯ್ದಿದ್ದಾರೆ. ಈ ಹಿಂದೆ ಹಲವು ಸಹ ಈ ರಸ್ತೆಯಲ್ಲಿ ಕಳ್ಳತನ ನಡೆದಿತ್ತು.
ದ್ವಿಚಕ್ರ ವಾಹನ ಕಳವು: ಇದೇ ರಸ್ತೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನೂ ಕೂಡ ದುಷ್ಕರ್ಮಿಗಳು ಕಳವುಗೈದಿದ್ದಾರೆ. ಬೈಕ್ ಕಳವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೇ ಕಳ್ಳರಿಂದ ಕಾರಿನಲ್ಲಿದ್ದ ಮ್ಯೂಸಿಕ್ ಸಿಸ್ಟ್ಂ ಕಳವು ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ.
ಈ ಎರಡೂ ಘಟನೆಗಳ ಸಂಬಂಧ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.