ಲಕ್ನೋ: ಉತ್ತರ ಪ್ರದೇಶದಲ್ಲಿ ಮಾನ್ಯತೆ ಪಡೆಯದಿರುವ ಮದರಸಾಗಳ ಮೇಲೆ ಸಮೀಕ್ಷೆ ನಡೆಸುವ ನಿರ್ಧಾರವನ್ನು ಯೋಗಿ ಆದಿತ್ಯನಾಥ್ ಅವರ ಸರ್ಕಾರ ತೆಗೆದುಕೊಂಡಿದೆ. ಈ ನಡೆಯನ್ನು ಇಸ್ಲಾಮಿಕ್ ಪ್ರಮುಖ ಸಂಸ್ಥೆ ಜಮಿಯತ್ ಉಲೇಮಾ-ಎ-ಹಿಂದ್ ಬೆಂಬಲಿಸಲು ನಿರ್ಧರಿಸಿದೆ.
ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉಲೇಮಾ-ಎ-ಹಿಂದ್ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಮೊಹಮ್ಮದ್ ಅಸದ್ ಮದನಿ ಅವರು, ಇಂದು ಮದರಸಾಗಳನ್ನು ಉತ್ತಮ ರೀತಿಯಲ್ಲಿ ನೋಡಲಾಗುತ್ತಿಲ್ಲ. ನಮ್ಮನ್ನು ಅರ್ಥಮಾಡಿಕೊಳ್ಳುವಂತೆ ನಾನು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ನಾವು ಯಾವಾಗಲೂ ನಮ್ಮ ಕರ್ತವ್ಯವನ್ನು ಅನುಸರಿಸುತ್ತೇವೆ. ನಾವು ಈ ಬಗ್ಗೆ ಮಾತನಾಡಲು ಸದಾ ಸಿದ್ಧರಿದ್ದೇವೆ, ಆದರೆ ಬಲವಂತದಿಂದಲ್ಲ. ನಮಗೆ ಸಮಯ ನೀಡಿ, ನಾವು ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡುತ್ತೇವೆ ಎಂದು ತಿಳಿಸಿದರು.
ಅಸ್ಸಾಂನಲ್ಲಿ ಮದರಸಾಗಳ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಅಸ್ಸಾಂನಲ್ಲಿ ಏನಾಗುತ್ತಿದೆ ಎಂಬುದನ್ನು ನೀವು ನೋಡಿದ್ದೀರಿ. ಆ ವಿಧಾನ ಕಾನೂನುಬಾಹಿರವಾಗಿದೆ. ನಮಗೆ ಸ್ವಲ್ಪ ಸಮಯ ನೀಡಿದರೆ, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿಯನ್ನು ಕಳುಹಿಸುತ್ತೇವೆ ಎಂದರು.
ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದ್ದರೂ ಅದನ್ನು ತಪ್ಪು ರೀತಿಯಲ್ಲಿ ಮಾಡಬಾರದು. ಏನನ್ನಾದರೂ ಸುಧಾರಿಸಲು ಯಾವಾಗಲೂ ಅವಕಾಶವಿದೆ. ಆದರೆ ಅದನ್ನು ಚಿತ್ರಿಸುವ ರೀತಿ ತಪ್ಪು ಎಂದು ಮೌಲಾನಾ ಹೇಳಿದರು. ಇದನ್ನೂ ಓದಿ: ಹಿಂಬದಿ ಸವಾರರಿಗೂ ಸೀಟ್ಬೆಲ್ಟ್ ಕಡ್ಡಾಯ, ತಪ್ಪಿದರೆ ದಂಡ
ಉತ್ತರ ಪ್ರದೇಶದ ಸರ್ಕಾರ ಮಾನ್ಯತೆ ಪಡೆಯದೇ ಇರುವ ಮದರಸಾಗಳಲ್ಲಿ ವಿದ್ಯಾರ್ಥಿಗಳು ಶಿಕ್ಷಕರು, ಪಠ್ಯಕ್ರಮ ಹಾಗೂ ಯಾವುದೇ ಸರ್ಕಾರೇತರ ಸಂಸ್ಥೆಗಳೊಂದಿಗೆ ಸಂಬಂಧ ಹೊಂದಿದೆಯೇ ಎಂಬುದನ್ನು ತಿಳಿದುಕೊಳ್ಳಲು ಸೆಪ್ಟೆಂಬರ್ 1 ರಂದು ಸಮೀಕ್ಷೆ ನಡೆಸುವುದಾಗಿ ಘೋಷಿಸಿದೆ. ಇದನ್ನೂ ಓದಿ: ಮಳೆ; ನಾಳೆ ಬೆಂಗಳೂರು ಪೂರ್ವ ಭಾಗದ ಶಾಲೆಗಳಿಗೆ ರಜೆ