Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದೂ ಮಹಿಳೆ, ಮುಸ್ಲಿಂ ವ್ಯಕ್ತಿ ರೈಲಿನಲ್ಲಿ ಪ್ರಯಾಣ – ಲವ್ ಜಿಹಾದ್ ಅಂತ ಠಾಣೆಗೆ ಎಳೆದೊಯ್ದ ಭಜರಂಗದಳ ಸದಸ್ಯರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಿಂದೂ ಮಹಿಳೆ, ಮುಸ್ಲಿಂ ವ್ಯಕ್ತಿ ರೈಲಿನಲ್ಲಿ ಪ್ರಯಾಣ – ಲವ್ ಜಿಹಾದ್ ಅಂತ ಠಾಣೆಗೆ ಎಳೆದೊಯ್ದ ಭಜರಂಗದಳ ಸದಸ್ಯರು

Latest

ಹಿಂದೂ ಮಹಿಳೆ, ಮುಸ್ಲಿಂ ವ್ಯಕ್ತಿ ರೈಲಿನಲ್ಲಿ ಪ್ರಯಾಣ – ಲವ್ ಜಿಹಾದ್ ಅಂತ ಠಾಣೆಗೆ ಎಳೆದೊಯ್ದ ಭಜರಂಗದಳ ಸದಸ್ಯರು

Public TV
Last updated: January 19, 2022 12:46 pm
Public TV
Share
2 Min Read
muslim man beaten
SHARE

ಭೋಪಾಲ್: ರೈಲಿನಲ್ಲಿ ಒಟ್ಟಿಗೆ ಪ್ರಯಾಣಿಸುತ್ತಿದ್ದ ಎಂಬ ಕಾರಣಕ್ಕೆ ಮುಸ್ಲಿಂ ವ್ಯಕ್ತಿ ಹಾಗೂ ಹಿಂದೂ ವಿವಾಹಿತೆಯನ್ನು ಬಲವಂತವಾಗಿ ಕೆಳಗಿಳಿಸಿ ಬಜರಂಗದಳದ ಸದಸ್ಯರು ಉಜ್ಜಯಿನಿ ರೈಲ್ವೆ ಪೊಲೀಸ್ ಠಾಣೆಗೆ ಎಳೆದೊಯ್ದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮುಸ್ಲಿಂ ವ್ಯಕ್ತಿ ಮತ್ತು ಹಿಂದೂ ಮಹಿಳೆ ರೈಲಿನಲ್ಲಿ ಜೊತೆಯಾಗಿ ಪ್ರಯಾಣಿಸಿದ್ದಾರೆ. ಇದು ಲವ್ ಜಿಹಾದ್ ಎಂದು ಭಜರಂಗದಳದ ಸದಸ್ಯರು ಆರೋಪಿಸಿದ್ದಾರೆ. ನಂತರ ಮುಸ್ಲಿಂ ವ್ಯಕ್ತಿಯನ್ನು ರೈಲಿನಿಂದ ಕೆಳಗಿಳಿಸಿ ಹಲ್ಲೆ ನಡೆಸಿ ಪೊಲೀಸ್ ಠಾಣೆಗೆ ಬಲವಂತವಾಗಿ ಎಳೆದುಕೊಂಡು ಹೋಗಿರುವ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಸ್ನಾನದ ವೀಡಿಯೋ ಚಿತ್ರೀಕರಿಸಿ ಬ್ಲ್ಯಾಕ್‍ಮೇಲ್ ಮಾಡುತ್ತಾ ಅತ್ತಿಗೆಯನ್ನೇ ರೇಪ್ ಮಾಡ್ದ!

train

ಇಂದೋರ್‌ನ ಈ ಇಬ್ಬರು ಪ್ರಯಾಣಿಕರು ಮತ್ತು ಕುಟುಂಬದ ಸ್ನೇಹಿತರನ್ನು ಸರ್ಕಾರಿ ರೈಲ್ವೆ ಪೊಲೀಸರು ವಿಚಾರಣೆಗೆ ಒಳಪಡಿಸಿದರು. ಇವರಿಬ್ಬರ ಪೋಷಕರು ಬರುವವರೆಗೂ ಪೊಲೀಸ್ ಠಾಣೆಯಲ್ಲಿ ಕುಳಿತುಕೊಳ್ಳುವಂತೆ ಮಾಡಿದರು. ನಂತರ ಅವರ ಹೇಳಿಕೆಗಳನ್ನು ದಾಖಲಿಸಿ ಬಿಡುಗಡೆ ಮಾಡಿ ಕಳುಹಿಸಿದರು.

मुस्लिम लड़का और गैर मुस्लिम लड़की MP उज्जैन से ट्रेन में जा रहे थे, हिंदू संगठन वालों को खबर लगी तो वहाँ पहुँचकर लड़के को पीटते हुए थाने ले गए, जाँच के बाद पुलिस ने बताया कि लड़का और लड़की दोनों शादीशुदा हैं, दोनों में पारिवारिक संबंध भी है, जिसके बाद पुलिस ने उन्हें जाने दिया… pic.twitter.com/Q6u0md3pMC

— Ashraf Hussain (@AshrafFem) January 18, 2022

ಈ ಘಟನೆ ಜ.14ರಂದು ನಡೆದಿದೆ. ಮುಸ್ಲಿಂ ವ್ಯಕ್ತಿ ಆಸಿಫ್ ಶೇಖ್ ಎಂದು ಗುರುತಿಸಲಾಗಿದ್ದು, ಈತ ಎಲೆಕ್ಟ್ರಾನಿಕ್ ಅಂಗಡಿಯೊಂದರ ಮಾಲೀಕ. ಮಹಿಳೆ ಖಾಸಗಿ ಶಾಲೆಯೊಂದರ ಶಿಕ್ಷಕಿಯಾಗಿದ್ದಾರೆ. ಇದನ್ನೂ ಓದಿ: ನಾಪತ್ತೆಯಾಗಿದ್ದ ಬಾಂಗ್ಲಾ ನಟಿ ಶವವಾಗಿ ಗೋಣಿಚೀಲದಲ್ಲಿ ಪತ್ತೆ

ನಾವು ಭಜರಂಗದಳದವರು ಎಂದು ಪರಿಚಯಿಸಿಕೊಂಡಿರುವ ಮೂವರು ಸದಸ್ಯರು ಮುಸ್ಲಿಂ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾರೆ. ಆತನನ್ನು ರೈಲ್ವೆ ಪೊಲೀಸ್ ಠಾಣೆಗೆ ಎಳೆದೊಯ್ಯುತ್ತಿದ್ದಾಗ, ಮಹಿಳೆಯೂ ಅವರ ಹಿಂದೆ ಸಾಗುತ್ತಿರುವ ದೃಶ್ಯದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

POLICE JEEP

ಮತ್ತೊಂದು ವೀಡಿಯೋದಲ್ಲಿ, ನಿಮ್ಮ ತಪ್ಪು ತಿಳಿವಳಿಕೆಯಿಂದ ನನ್ನ ಜೀವನವೇ ಹಾಳಾಯಿತು. ನಾನು ವಯಸ್ಕಳು, ಶಾಲೆಯಲ್ಲಿ ಶಿಕ್ಷಕಿಯಾಗಿ ಮಕ್ಕಳಿಗೆ ಬೋಧನೆ ಮಾಡುತ್ತಿದ್ದೇನೆ’ ಎಂದು ಭಜರಂಗದಳದ ಸದಸ್ಯನೊಬ್ಬನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದಳದ ಸದಸ್ಯನೊಬ್ಬ ಪಿಂಟು ಕೌಶಲ್ ಎಂದು ಗುರುತಿಸಲಾಗಿದ್ದು, ನಿನ್ನೊಂದಿಗೆ ನಾನು ಮಾತನಾಡುವುದಿಲ್ಲ ಎಂದು ಮಹಿಳೆಗೆ ಪ್ರತಿಕ್ರಿಯಿಸುತ್ತಿರುವುದು ಕಂಡುಬಂದಿದೆ.

ಘಟನೆ ಸಂಬಂಧ ಪೊಲೀಸ್ ವರಿಷ್ಠಾಧಿಕಾರಿ ನಿವೇದಿತಾ ಗುಪ್ತ ಮಾತನಾಡಿ, ಶೇಖ್ ಮತ್ತು ಮಹಿಳೆ ತಮ್ಮ ಕುಟುಂಬದವರಿಂದ ಪರಸ್ಪರ ಪರಿಚಿತರು ಮತ್ತು ಸ್ನೇಹಿತರು. ಇದು ಲವ್ ಜಿಹಾದ್ ಎಂದು ಆರೋಪಿಸಿ ಭಜರಂಗದಳದವರು ಇಬ್ಬರನ್ನೂ ಠಾಣೆಗೆ ಕರೆತಂದಿದ್ದರು. ನಾವು ಅವರ ಹೇಳಿಕೆಗಳನ್ನು ದಾಖಲಿಸಿದ್ದೇವೆ. ಇಬ್ಬರೂ ವಯಸ್ಕರು, ಯಾವುದೇ ಅಪರಾಧವಿಲ್ಲದ ಕಾರಣ ಬಿಟ್ಟು ಕಳುಹಿಸಿದ್ದೇವೆ. ಭಜರಂಗದಳದವರ ವಿರುದ್ಧವೂ ಯಾವುದೇ ದೂರು ಕೇಳಿಬರದ ಕಾರಣ ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ನಿಧನ

assault

ಭಜರಂಗದಳದ ವಿದ್ಯಾರ್ಥಿಗಳ ವಿಭಾಗ ವಿಎಚ್‌ಪಿಯ ಮಾಳವ ಪ್ರಾಂತದ ಪ್ರಚಾರ ಪ್ರಮುಖ್ ಕುಂದನ್ ಚಂದ್ರಾವತ್ ಪ್ರತಿಕ್ರಿಯಿಸಿ, ಹಿಂದೂ ಮಹಿಳೆಯನ್ನು ಮುಸ್ಲಿಂ ವ್ಯಕ್ತಿಯೊಬ್ಬ ದಾರಿ ತಪ್ಪಿಸಿ ತನ್ನೊಂದಿಗೆ ಕರೆದೊಯ್ಯುತ್ತಿದ್ದಾನೆ ಎಂಬ ಮಾಹಿತಿ ಬಲ್ಲ ಮೂಲಗಳಿಂದ ತಿಳಿದು ಬಂದಿತ್ತು. ಹಿಂದೂ ಸಹೋದರಿಯರ ರಕ್ಷಣೆಗಾಗಿ ನಮ್ಮ ಕಾರ್ಯಕರ್ತರು ಮಧ್ಯಪ್ರವೇಶಿಸಿ ಪೊಲೀಸ್ ಠಾಣೆಗೆ ಕರೆದೊಯ್ದರು. ಈ ಪ್ರಕ್ರಿಯೆಯಲ್ಲಿ ವ್ಯಕ್ತಿ ಮತ್ತು ನಮ್ಮ ಸದಸ್ಯರೊಂದಿಗೆ ಸಣ್ಣ ಜಗಳವಾಗಿದೆ ಅಷ್ಟೇ. ಯಾವುದೇ ಹಲ್ಲೆ ಘಟನೆ ನಡೆದಿಲ್ಲ. ನಂತರ ಅವರನ್ನು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

TAGGED:Bajrang Dalhindu womenLove JihadMadhya Pradeshmuslim manಭಜರಂಗದಳಮಧ್ಯಪ್ರದೇಶಮುಸ್ಲಿಂ ವ್ಯಕ್ತಿಲವ್ ಜಿಹಾದ್ಹಿಂದೂ ಮಹಿಳೆ
Share This Article
Facebook Whatsapp Whatsapp Telegram

Cinema news

Bharti Singh Haarsh Limbachiyaa
ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ
Bollywood Cinema Latest Top Stories
Koragajja Kannada Film 1
ಕೊರಗಜ್ಜ ಚಿತ್ರಕ್ಕಿದೆ ಮೆಸ್ಸಿ ಹಾಡು ಕ್ರಿಯೇಟ್ ಮಾಡಿದ ತಂಡದ ಲಿಂಕ್
Cinema Latest TV Shows
Ranya Rao 1
ಕಾಫಿಪೋಸಾ ಆದೇಶ ಪ್ರಶ್ನಿಸಿದ್ದ ರನ್ಯಾಗೆ ಮತ್ತೆ ಶಾಕ್ – ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru City Cinema Court Districts Karnataka Latest Top Stories
Vijay Deverakonda
ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಅಪ್‌ಡೇಟ್‌
Cinema Latest South cinema

You Might Also Like

Yellow Line Metro
Bengaluru City

ಇದೇ ಭಾನುವಾರ ಹಳದಿ ಮಾರ್ಗದ ಮೆಟ್ರೋ ಸೇವೆ ಒಂದು ಗಂಟೆ ಲೇಟ್‌

Public TV
By Public TV
3 hours ago
Tilak Varma Hardik Pandya
Cricket

ಪಾಂಡ್ಯ ಸ್ಫೋಟಕ ಫಿಫ್ಟಿ – ಭಾರತಕ್ಕೆ 30 ರನ್‌ಗಳ ಜಯ

Public TV
By Public TV
3 hours ago
Anegondi Bridge collapse
Court

ಆನೆಗೊಂದಿ ಸೇತುವೆ ಕುಸಿತ ಕೇಸ್ – ರಾಜ್ಯ ಸರ್ಕಾರ ಬಡ್ಡಿ ಸಹಿತ 5.63 ಕೋಟಿ ಪರಿಹಾರ ನೀಡಬೇಕಿದ್ದ ಆದೇಶ ರದ್ದು: ಹೈಕೋರ್ಟ್‌

Public TV
By Public TV
4 hours ago
CET Exam
Bengaluru City

ಸಿಸಿಟಿವಿ ಕಣ್ಗಾವಲಿನಲ್ಲಿ ನೇಮಕಾತಿ ಪರೀಕ್ಷೆ: ಕೆಇಎ

Public TV
By Public TV
4 hours ago
SUPREME COURT
Court

ಕೇಂದ್ರದ ಪೂರ್ವಾನುಮತಿ ಇಲ್ಲದೆ ಅರಣ್ಯಭೂಮಿ ಗುತ್ತಿಗೆ ನೀಡಲು ಸಾಧ್ಯವಿಲ್ಲ: ಸುಪ್ರೀಂ

Public TV
By Public TV
4 hours ago
GBA
Bengaluru City

ಜಿಬಿಎ 5 ಪಾಲಿಕೆ ಚುನಾವಣೆ – ಸರ್ಕಾರದಿಂದ ಮೀಸಲಾತಿ ಮಾರ್ಗಸೂಚಿ ಪ್ರಕಟ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?