ಕರೆನ್ಸಿ ನೋಟುಗಳಲ್ಲಿರಲಿ ಗಣೇಶ, ಲಕ್ಷ್ಮೀ ಚಿತ್ರ – ಮೋದಿಗೆ ಕೇಜ್ರಿವಾಲ್ ಪತ್ರ

Public TV
2 Min Read
God

ನವದೆಹಲಿ: ದೇಶದ ಆರ್ಥಿಕ ಪ್ರಗತಿಗಾಗಿ ನೋಟುಗಳ ಮೇಲೆ ಗಣೇಶ ಮತ್ತು ಲಕ್ಷ್ಮೀ ದೇವಿಯ ಚಿತ್ರಗಳನ್ನು ಮುದ್ರಿಸುವಂತೆ ದೆಹಲಿ ಮುಖ್ಯಮಂತ್ರಿ (Delhi ChiefMinister) ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಪತ್ರ ಬರೆದಿದ್ದಾರೆ.

ಒಂದು ಕಡೆ ಮಹಾತ್ಮ ಗಾಂಧಿ ಮತ್ತು ಇನ್ನೊಂದು ಬದಿಯಲ್ಲಿ ಗಣೇಶ (Lord Ganesha) ಮತ್ತು ಲಕ್ಷ್ಮಿದೇವಿಯ (God Lakshmi) ಚಿತ್ರ ಮುದ್ರಿಸಬೇಕು ಎಂಬುದು 13 ಕೋಟಿ ದೇಶವಾಸಿಗಳ ಬಯಕೆಯಾಗಿದೆ. ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ನೋಟುಗಳ ಮೇಲೆ ಲಕ್ಷ್ಮಿ, ಗಣೇಶನ ಫೋಟೋವನ್ನು ಮುದ್ರಿಸಿ – ಮೋದಿಗೆ ಕೇಜ್ರಿವಾಲ್ ಮನವಿ

Arvind Kejriwal 3

ಸ್ವಾತಂತ್ರ‍್ಯ ಬಂದ 75 ವರ್ಷಗಳ ನಂತರವೂ ಭಾರತದ ಆರ್ಥಿಕತೆಯು ಅತ್ಯಂತ ಕೆಟ್ಟ ಸ್ಥಿತಿಯಲ್ಲಿದೆ. ಮುಂದುವರಿಯುತ್ತಿರುವ ದೇಶಗಳ ಪಟ್ಟಿಯಲ್ಲೇ ಉಳಿದಿದೆ, ನಮ್ಮ ದೇಶದಲ್ಲಿ ಇನ್ನೂ ಅನೇಕ ಜನರು ಬಡವರಿದ್ದಾರೆ ಇದಕ್ಕೆ ಕಾರಣ ಏನು? ನಾವು ಕಷ್ಟಪಟ್ಟು ಕೆಲಸ ಮಾಡಬೇಕಾದಾಗ, ನಮ್ಮ ಕೆಲಸವನ್ನು ಫಲಿಸಲು ದೇವರ ಆಶೀರ್ವಾದವೂ ಬೇಕು, ಸರಿಯಾದ ನೀತಿ, ಕಠಿಣ ಪರಿಶ್ರಮ ಮತ್ತು ದೇವರ ಆಶೀರ್ವಾದದ ಸಂಗಮವು ನಮ್ಮ ದೇಶವನ್ನು ಪ್ರಗತಿಯ ಹಾದಿಯಲ್ಲಿ ಕೊಂಡೊಯ್ಯುತ್ತದೆ. ಇದನ್ನೂ ಓದಿ: ಬಂಡೆಮಠದ ಸ್ವಾಮೀಜಿಗೆ ಮಹಿಳೆಯಿಂದ ಬರುತ್ತಿತ್ತು ದೂರವಾಣಿ ಕರೆ- ಡೆತ್‍ನೋಟ್‍ನಲ್ಲಿ ರಹಸ್ಯ ಬಯಲು

Naredra Modi1

ಆದ್ದರಿಂದ ಕರೆನ್ಸಿ (Indian Currency) ನೋಟುಗಳ ಒಂದು ಬದಿಯಲ್ಲಿ ಮಹಾತ್ಮ ಗಾಂಧಿಯವರ ಚಿತ್ರ ಮತ್ತು ಇನ್ನೊಂದು ಬದಿಯಲ್ಲಿ ಗಣೇಶ ಮತ್ತು ಲಕ್ಷ್ಮೀ ದೇವಿಯ ಫೋಟೋಗಳು ಇರಬೇಕು, ಈ ವಿಷಯದ ಬಗ್ಗೆ ಅಪಾರ ಬೆಂಬಲ ಸ್ವೀಕರಿಸಲಾಗಿದೆ. ಜನರಲ್ಲಿ ಭಾರೀ ಉತ್ಸಾಹವಿದೆ ಮತ್ತು ಎಲ್ಲರೂ ಇದನ್ನು ತಕ್ಷಣವೇ ಜಾರಿಗೆ ತರಬೇಕೆಂದು ಬಯಸುತ್ತಾರೆ ಎಂದು ಕೇಜ್ರಿವಾಲ್ ಪ್ರತಿಪಾದಿಸಿದ್ದಾರೆ.

ಕೇಜ್ರಿವಾಲ್ ಅವರ ಬೇಡಿಕೆಯನ್ನು ಬಿಜೆಪಿ (BJP) ತೀಕ್ಷ್ಣ ವಿರೋಧಿಸಿದೆ. ಇದು ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾಡುತ್ತಿರುವ ಕೆಲಸವಾಗಿದೆ `ಕೊಳಕು ಹಿಂದೂ ವಿರೋಧಿ ಮುಖ’ವನ್ನು ಮರೆಮಾಚುವ ಕೇಜ್ರಿವಾಲ್ ಮಾಡುತ್ತಿರುವ ವಿಫಲ ಪ್ರಯತ್ನ ಎಂದು ಬಿಜೆಪಿ ಟೀಕಿಸಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *