ಬೆಂಗಳೂರು: 75 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯರನ್ನ (Siddaramaiah) ಆಶೀರ್ವದಿಸಲು ಆಗಮಿಸಿದ್ದ ಅರ್ಚಕರು ಮತ್ತೆ ಮುಖ್ಯಂತ್ರಿಯಾಗುವಂತೆ (Chief Minister) ಆಶೀರ್ವಾದಿಸಿದ್ದಾರೆ.
ಅಖಿಲ ಕರ್ನಾಟಕ ಮುಜರಾಯಿ ದೇವಾಲಯಗಳ (Muzarai Temple) ಅರ್ಚಕರ, ಆಗಮಿಕರ ಹಾಗೂ ಉಪಾಧಿವಂತರ ಒಕ್ಕೂಟದ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲೆಯ ಮುಜರಾಯಿ ದೇವಾಲಯಗಳಿಂದ 70ಕ್ಕೂ ಹೆಚ್ಚು ಮಂದಿ ಆಗಮಿಸಿದ್ದರು. ಇದನ್ನೂ ಓದಿ: ಸೆಮಿಕಂಡಕ್ಟರ್ ಘಟಕ ಸ್ಥಾಪನೆಗೆ ಕರ್ನಾಟಕವನ್ನು ಬಿಟ್ಟು ಗುಜರಾತ್ ಆಯ್ಕೆ ಮಾಡಿದ್ದು ಯಾಕೆ – ಪ್ರಶ್ನೆಗೆ ಉತ್ತರ ಕೊಟ್ಟ ವೇದಾಂತ ಕಂಪನಿ
ಇಲ್ಲಿನ ಶಿವಾನಂದ ವೃತ್ತದ ಸರ್ಕಾರಿ ನಿವಾಸಕ್ಕೆ ಆಗಮಿಸಿದ್ದ 70ಕ್ಕೂ ಹೆಚ್ಚು ಅರ್ಚಕರು (Priests), ಎಲ್ಲಾ ದೇವಸ್ಥಾನಗಳ (Temple) ಆಶೀರ್ವಾದ ನಿಮಗಿದೆ. ನೀವು ಮತ್ತೆ ಮುಖ್ಯಮಂತ್ರಿಯಾಗಿ ಎಂದು ಆಶಿಸಿದ್ದಾರೆ. ಇದನ್ನೂ ಓದಿ: ಲವರ್ ಜೊತೆ ಪತ್ನಿಯ ಜಾಲಿ ರೈಡ್ – ಸ್ಕೂಟಿಯನ್ನು ಚೇಸ್ ಮಾಡಿ ಪ್ರಿಯಕರನಿಗೆ ಕಪಾಳಮೋಕ್ಷ ಮಾಡಿದ ಪತಿ
ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ (Congress), ಬಿಜೆಪಿ (BJP), ಜೆಡಿಎಸ್ (JDS)ನಿಂದ ಭರ್ಜರಿ ತಯಾರಿ ನಡೆಯುತ್ತಿವೆ. ಬರುವ ದಿನಗಳಲ್ಲಿ ರಾಜ್ಯದಲ್ಲಿ ಸಮಾವೇಶಗಳ ಪರ್ವ ಆರಂಭವಾಗಿದೆ. ಎಲ್ಲ ಪಕ್ಷಗಳು ರಾಜಕೀಯ ಘಟಾನುಘಟಿಗಳಿಗೆ ಸಂಘಟನೆಯ ಉಸ್ತುವಾರಿ ನೀಡಿದ್ದು ಪಕ್ಷ ಸಂಘಟನೆಯ ತಯಾರಿ ನಡೆಸಿವೆ. ಇದೇ ಸಂದರ್ಭದಲ್ಲಿ ಅರ್ಚಕರು ಸಿದ್ದರಾಮಯ್ಯರನ್ನ ಬೆಂಬಲಿಸಿದ್ದಾರೆ.