ಸುಳ್ವಾಡಿ ದುರಂತದ ಬಳಿಕ ಎಚ್ಚೆತ್ತ ಮುಜರಾಯಿ ಇಲಾಖೆ! – ಆದೇಶದಲ್ಲಿ ಏನಿದೆ?

Public TV
1 Min Read
muzari

ಬೆಂಗಳೂರು: ಸುಳ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ನೀಡಿದ್ದ ವಿಷ ಪ್ರಸಾದ ಸೇವಿಸಿ 14 ಮಂದಿ ಸಾವನ್ನಪ್ಪಿದ ಬಳಿಕ ಎಚ್ಚೆತ್ತಿರುವ ರಾಜ್ಯ ಮುಜರಾಯಿ ಇಲಾಖೆ, ದೇವಾಲಯಗಳಲ್ಲಿ ಅನ್ನದಾಸೋಹ, ಪ್ರಸಾದ ವಿತರಣೆಗೆ ಸ್ಥಳೀಯ ಅಧಿಕಾರಿಗಳ ಅನುಮತಿ ಕಡ್ಡಾಯ ಎಂಬ ಖಡಕ್ ಆದೇಶವನ್ನು ಹೊರಡಿಸಿದೆ.

ಆದೇಶದಲ್ಲಿ ಏನಿದೆ?
ದೇವರ ನೈವೇದ್ಯ ಮತ್ತು ದಾಸೋಹ ತಯಾರಿಸುವ ಕೋಣೆಯಲ್ಲಿ ಸಿಸಿ ಟಿವಿ ಅಳವಡಿಕೆಯೂ ಕೂಡ ಕಡ್ಡಾಯ. ಪ್ರಮುಖವಾಗಿ ದೇವಾಲಯದ ಅಡುಗೆ ಕೋಣೆಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ ಮೇಲೆ ಕಟ್ಟುನಿಟ್ಟಿನ ನಿಗಾವಹಿಸುವುದು.

muzari 1 copy

ತಯಾರಿಸಿದ ನೈವೇದ್ಯ/ ಅಡುಗೆಗೆ ಸ್ವೀಕರಿಸಲು ಯೋಗ್ಯವಾಗಿರುವ ಬಗ್ಗೆ ಖಚಿತಪಡಿಸಿಕೊಂಡು ನಂತರ ವಿತರಣೆ ಮಾಡಬೇಕು. ದೇವಾಲಯಗಳಲ್ಲಿ ತಯಾರಿಸುವ ಪ್ರಸಾದವನ್ನು ಆರೋಗ್ಯಾಧಿಕರಿಗಳು ಪರಿಶೀಲನೆ ನಡೆಸಬೇಕು. ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ನೀಡುವ ಪ್ರಸಾದಕ್ಕೆ ಆರೋಗ್ಯಾಧಿಕಾರಿಯಿಂದ ಅನುಮತಿ ಪಡೆದ ಮೇಲೆಯೇ ವಿತರಣೆ
ಮಾಡಬೇಕು.

ದೇವಾಲಯದ ಪರಿಸರದಲ್ಲಿ ಭಕ್ತಾದಿಗಳೇ ಪ್ರಸಾದ ತಯಾರಿಸಿ ನೇರವಾಗಿ ಭಕ್ತರಿಗೆ ನೀಡುವ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಆಹಾರ ಸುರಕ್ಷತಾ ತಂಡದಿಂದ ಪರೀಕ್ಷೆ ಒಳಪಡಿಸಿ ಅನುಮತಿ ಪತ್ರ ಪಡೆಯುವುದು ಕಡ್ಡಾಯ ಮಾಡಲಾಗಿದೆ.

ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲಿ ಇಲಾಖೆ ನೀಡಿದ ನಿಯಮಗಳನ್ನು ಆಯಾ ದೇವಾಲಯ ಸಂಸ್ಥೆಗಳು ಪಾಲಿಸಬೇಕು ಎಂದು ತಿಳಿಸಿದೆ.

muzari 2 copy

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *