Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಸಿನಿಮಾ ಕಥೆಗಳಿಗೆ ನನ್ನ ಊರು, ಯಕ್ಷಗಾನ ಪ್ರೇರಣೆ: ನಟ ರಿಷಬ್ ಶೆಟ್ಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನನ್ನ ಸಿನಿಮಾ ಕಥೆಗಳಿಗೆ ನನ್ನ ಊರು, ಯಕ್ಷಗಾನ ಪ್ರೇರಣೆ: ನಟ ರಿಷಬ್ ಶೆಟ್ಟಿ

Cinema

ನನ್ನ ಸಿನಿಮಾ ಕಥೆಗಳಿಗೆ ನನ್ನ ಊರು, ಯಕ್ಷಗಾನ ಪ್ರೇರಣೆ: ನಟ ರಿಷಬ್ ಶೆಟ್ಟಿ

Public TV
Last updated: August 18, 2024 11:47 am
Public TV
Share
3 Min Read
rishab shetty 2
SHARE

ಬೆಂಗಳೂರು: ನನ್ನ ಸಿನಿಮಾದ ಕಥೆಗಳಿಗೆ ನನ್ನ ಊರು ಮತ್ತು ಯಕ್ಷಗಾನವೇ ಪ್ರೇರಣೆ ಎಂದು ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಮಾತನಾಡಿದ್ದಾರೆ. ಇದನ್ನೂ ಓದಿ:ಡಿಫ್ರೆಂಟ್ ಕಂಟೆಂಟ್ ಚಿತ್ರ ದೇಶಕ್ಕೆ ಇಷ್ಟ ಆಗಿದೆ: ಮಾನಸಿ ಸುಧೀರ್

rishab shetty

‘ಕುಂದಾಪ್ರ ಕನ್ನಡ ಪ್ರತಿಷ್ಠಾನ’ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ‘ಕುಂದಾಪುರ ಕನ್ನಡ ಹಬ್ಬ-2024’ರ ಮೊದಲ ದಿನವಾದ ಶನಿವಾರ (ಆ.17) ‘ಊರ ಗೌರವ’ ಸನ್ಮಾನ ಸ್ವೀಕರಿಸಿ ರಿಷಬ್ ಶೆಟ್ಟಿ ಮಾತನಾಡಿ, ಎಲ್ಲಿಗೆ ಹೋದರೂ, ಏನೇ ಮಾಡಿದರೂ, ಎಲ್ಲಿಂದ ಬಂದಿದ್ದೇವೆ ಎನ್ನುವುದು ಮುಖ್ಯ. ಆ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ನನ್ನ ಸಿನಿಮಾದ ಎಲ್ಲ ಕಥೆಗಳಿಗೂ ಕುಂದಾಪುರದ ನನ್ನೂರು ಕೆರಾಡಿಯೇ ಕಾರಣ, ನಾನು ಬೆಳೆದ ಪರಿಸರವೇ ಪ್ರೇರಣೆ. ಅದರಲ್ಲೂ ಓದದೆಯೇ ರಾಮಾಯಣ-ಮಹಾಭಾರತದ ಸಾರ ತಿಳಿಯಲು ಯಕ್ಷಗಾನ ಕಾರಣ. ‘ಕಾಂತಾರ’ ಸಿನಿಮಾ ಚಿತ್ರೀಕರಣ ಕೂಡ ಕುಂದಾಪುರ ಪರಿಸರದಲ್ಲೇ ಆಗಿರುವುದು ಎಂದು ರಿಷಬ್ ಶೆಟ್ಟಿ ಮಾತನಾಡಿದರು. ಇದನ್ನೂ ಓದಿ:‘ಕೆಜಿಎಫ್ 2’ ನಿರ್ದೇಶಕನನ್ನು ಹಾಡಿ ಹೊಗಳಿದ ಪ್ರಭಾಸ್

rishab shetty 1

ನಮ್ಮ ಭಾಷೆ ಸಂಸ್ಕೃತಿ ಮಕ್ಕಳಿಗೆ ಗೊತ್ತಾಗಬೇಕು. ಅದಕ್ಕಾಗಿ ಇಂಥ ಹಬ್ಬಗಳು ಅತ್ಯಗತ್ಯ. ತುಳಸಿ ಕಟ್ಟೆಗಳು ಅಪರೂಪ ಆಗಿರುವ ಈ ಕಾಲದಲ್ಲಿ ಇಲ್ಲಿ ತುಳಸಿ ಕಟ್ಟೆ ಇಟ್ಟು ಉದ್ಘಾಟನೆ ನಡೆಸಿರುವುದು ಉತ್ತಮ ಸಂಗತಿ. ನಾನು ಕೂಡ ನನ್ನ ಪ್ರತಿ ಸಿನಿಮಾದಲ್ಲೂ ಅಕ್ಕಿಮುಡಿ, ನೆಟ್ಟಿ ಮುಂತಾದವನ್ನು ತೋರಿಸುತ್ತಿರುತ್ತೇನೆ ಎಂದು ರಿಷಬ್ ಶೆಟ್ಟಿ ಹೇಳಿದರು. ರಿಷಬ್ ಶೆಟ್ಟಿ, ಪ್ರಗತಿ ಶೆಟ್ಟಿ (Pragathi Shetty) ದಂಪತಿಗೆ ‘ಊರ ಗೌರವ’ದ ಸನ್ಮಾನ ಮಾಡಲಾಯಿತು.

ಭಾಷೆಯ ಉಳಿವು ಬೆಳವಣಿಗೆ ದೃಷ್ಟಿಯಿಂದ ಈ ಕುಂದಾಪುರ ಕನ್ನಡ ಹಬ್ಬ ಉತ್ತಮ ಪ್ರಯೋಗ. ದಿನನಿತ್ಯದ ಬಳಕೆಯಲ್ಲಿ ಸಾಧ್ಯವಾದಷ್ಟೂ ಅಧಿಕ ಕುಂದಾಪುರ ಕನ್ನಡ ಬಳಕೆ ಆಗಲಿ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ತಿಳಿಸಿದರು.

ಸಂಗೀತ ನಿರ್ದೇಶಕ ರವಿ ಬಸ್ರೂರು, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಮಾರಣಕಟ್ಟೆ ಎಂ.ಎಸ್. ಮಂಜ ಚಾರಿಟಬಲ್ ಟ್ರಸ್ಟ್ನ ಕೃಷ್ಣಮೂರ್ತಿ ಮಂಜ, ಲೈಫ್‌ಲೈನ್ ಫೀಡ್ಸ್ ಪ್ರೈ.ಲಿ. ಎಂಡಿ ಕಿಶೋರ್ ಕುಮಾರ್ ಹೆಗ್ಡೆ, ಕುಂದಾಪ್ರ ಕನ್ನಡ ಪ್ರತಿಷ್ಠಾನದ ಗೌರವಾಧ್ಯಕ್ಷ ಉದಯ ಹೆಗ್ಡೆ, ಅಧ್ಯಕ್ಷ ಡಾ.ದೀಪಕ್ ಶೆಟ್ಟಿ, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಕಾರ್ಯದರ್ಶಿ ರಾಘವೇಂದ್ರ ಕಾಂಚನ್, ಕೋಶಾಧಿಕಾರಿ ವಿಜಯ್ ಶೆಟ್ಟಿ ಹಾಲಾಡಿ ಮುಂತಾದವರು ಉಪಸ್ಥಿತರಿದ್ದರು.

ಹಬ್ಬಕ್ಕೆ ತಾರಾ ಮೆರುಗು

ಕುಂದಾಪುರ ಕನ್ನಡ ಹಬ್ಬದ ಭಾನುವಾರದ ಕಾರ್ಯಕ್ರಮಕ್ಕೆ ಖ್ಯಾತ ನಟಿ ಪ್ರಿಯಾಂಕಾ ಉಪೇಂದ್ರ, ನಟ-ನಿರ್ದೇಶಕ ರಾಜ್ ಬಿ. ಶೆಟ್ಟಿ, ಗೋಲ್ಡನ್ ಸ್ಟಾರ್ ಗಣೇಶ್, ನಟ-ನಿರ್ಮಾಪಕ ಪ್ರಮೋದ್ ಶೆಟ್ಟಿ ಆಗಮಿಸಲಿದ್ದಾರೆ. ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಅವರನ್ನೂ ಆಹ್ವಾನಿಸಲಾಗಿದ್ದು, ಅವರೂ ಬರುವ ನಿರೀಕ್ಷೆ ಇದೆ. ಅಲ್ಲದೆ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರು ಇದೇ ಮೊದಲು ಸಂಗೀತ ಸಂಜೆ ಕಾರ್ಯಕ್ರಮ ನೀಡುತ್ತಿದ್ದು, ಇದು ಆ.18ರ ಪ್ರಮುಖ ಆಕರ್ಷಣೆ ಆಗಿರಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಕುಂದಾಪುರ ಕನ್ನಡ ಹಬ್ಬ ಆಗಸ್ಟ್ 18ರ ಕಾರ್ಯಕ್ರಮಗಳು
ಬೆಳಗ್ಗೆ 10: ಬಯಲಾಟ- ಗ್ರಾಮೀಣ ಉತ್ಸವ
ಬೆಳಗ್ಗೆ 10: ತಾರೆಯರ ಜೊತೆ ಮಾತುಕತೆ, ಕವಿತೆ.
ಬೆಳಗ್ಗೆ 11: ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರಿಂದ ‘ಡಾನ್ಸ್ ಕುಂದಾಪ್ರ ಡಾನ್ಸ್’
ಬೆಳಗ್ಗೆ 11.15: ಕುಂದಾಪುರ ಭಾಷೆ ಬದುಕು ಬರಹ ಕುರಿತ ನುಡಿಚಾವಡಿ.
ಮಧ್ಯಾಹ್ನ 12: ಮನು ಹಂದಾಡಿ ಅವರಿಂದ ‘ಹಂದಾಡ್ತಾ ನೆಗ್ಯಾಡಿ’ ಹಾಸ್ಯ ಕಾರ್ಯಕ್ರಮ.
ಮಧ್ಯಾಹ್ನ 1.30: ಚಂಡೆ-ಜಂಬೆ ಜುಗಲ್ಬಂದಿ ಕಾರ್ಯಕ್ರಮ ‘ಪೆಟ್ ಒಂದೇ, ಸ್ವರ ಬೇರೆ’
ಮಧ್ಯಾಹ್ನ 2.30: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿಯ ನೃತ್ಯಗಾಥೆ ‘ಮಂದಾರ್ತಿ ಮಾದೇವಿ’
ಸಂಜೆ 4.30: ರಥೋತ್ಸವ
ರಾತ್ರಿ 7.30: ‘ರವಿ ಬಸ್ರೂರ್ ನೈಟ್ಸ್’ ವಿಶೇಷ ಸಂಗೀತ ಸಂಜೆ.

TAGGED:Pragathi Shettyrishab shettysandalwoodಕಾಂತಾರಕುಂದಾಪುರ ಕನ್ನಡ ಹಬ್ಬ 2024ಪ್ರಗತಿ ಶೆಟ್ಟಿರಿಷಬ್ ಶೆಟ್ಟಿ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
52 minutes ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
1 hour ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
1 hour ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
2 hours ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?