Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರಿ ಶಾಲೆಯಲ್ಲಿ ಓದಿ ನನ್ನ ಮಗ ವಿಜ್ಞಾನಿಯಾಗಿದ್ದಾನೆ: ವಿಜ್ಞಾನಿ ಮಹದೇಶ್ ತಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸರ್ಕಾರಿ ಶಾಲೆಯಲ್ಲಿ ಓದಿ ನನ್ನ ಮಗ ವಿಜ್ಞಾನಿಯಾಗಿದ್ದಾನೆ: ವಿಜ್ಞಾನಿ ಮಹದೇಶ್ ತಾಯಿ

Districts

ಸರ್ಕಾರಿ ಶಾಲೆಯಲ್ಲಿ ಓದಿ ನನ್ನ ಮಗ ವಿಜ್ಞಾನಿಯಾಗಿದ್ದಾನೆ: ವಿಜ್ಞಾನಿ ಮಹದೇಶ್ ತಾಯಿ

Public TV
Last updated: March 16, 2020 12:29 pm
Public TV
Share
3 Min Read
mahadesh mother
SHARE

– ನನ್ನ ಮಗ ದೇಶ ಸೇವೆಯಲ್ಲ, ವಿಶ್ವಸೇವೆ ಮಾಡ್ತಿದ್ದಾನೆ
– ಎರಡು ತಿಂಗಳಿನಿಂದ ಕೊರೊನಾಗೆ ವಾಕ್ಸಿನ್ ಸಂಶೋಧನೆ

ಮೈಸೂರು: ಕೊರೊನಾ ವೈರಸ್‍ಗೆ ಔಷಧ ಕಂಡು ಹಿಡಿಯಲು ಯುರೋಪಿಯನ್ ರಾಷ್ಟ್ರಗಳು ನೇಮಿಸಿದ ತಂಡದಲ್ಲಿ ಕನ್ನಡಿಗ ಡಾ. ಮಹದೇಶ್ ಪ್ರಸಾದ್ ಅವರಿಗೆ ಸ್ಥಾನ ಸಿಕ್ಕಿದ್ದು ತಾಯಿ ಸಂತಸಗೊಂಡಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಮಹದೇಶ್ ಪ್ರಸಾದ್ ಅವರ ತಾಯಿ ರತ್ನಮ್ಮ, ನನ್ನ ಮಗ ಕೊರೊನಾಗೆ ಔಷಧ ಕಂಡು ಹಿಡಿಯುವ ತಂಡದಲ್ಲಿ ಸ್ಥಾನ ಪಡೆದಿರುವುದು ನನಗೆ ಖುಷಿಯಿದೆ ಹಾಗೂ ತುಂಬಾ ಹೆಮ್ಮೆ ಇದೆ. ನಾವು ಮೂಲತಃ ಹಾಸನದ ಅರಕಲಗೂಡಿನವರಾಗಿದ್ದು, ನನ್ನ ಮಗ ಸರ್ಕಾರಿ ಶಾಲೆಯಲ್ಲಿ ಎಲ್ಲಾ ಹಂತದ ಶಿಕ್ಷಣವನ್ನು ಮುಗಿಸಿದ್ದಾನೆ. ಬಿಎಸ್‍ಸಿ ಹಾಸನದ ಸರ್ಕಾರಿ ಕಾಲೇಜಿನಲ್ಲಿ ಓದಿದ್ದಾನೆ. ಎಂಎಸ್‍ಸಿ ಹಾಗೂ ಪಿಎಚ್‍ಡಿ ಮೈಸೂರು ವಿವಿಯಲ್ಲಿ ವ್ಯಾಸಂಗ ಮಾಡಿದ್ದಾನೆ ಎಂದರು. ಇದನ್ನೂ ಓದಿ: ಕೊರೊನಾ ವೈರಸ್‍ಗೆ ವಾಕ್ಸಿನ್ ಕಂಡು ಹಿಡಿಯುವ ತಂಡದಲ್ಲಿ ಕನ್ನಡಿಗ

 MYS CORONA MEDICIN DOCTOR 2 e1584341052230

ಮಹದೇಶ್ ಈಗ ಯೂರೋಪ್‍ನ ಬೆಲ್ಜಿಯಂ ದೇಶದಲ್ಲಿ ವಿಜ್ಞಾನಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾನೆ. ಕೊರೊನಾಗೆ ವಾಕ್ಸಿನ್ ಕಂಡು ಹಿಡಿಯುವ ತಂಡದಲ್ಲಿ ಸ್ಥಾನ ಪಡೆದಿದ್ದೇನೆ ಎಂದು ಹೇಳಿದ್ದನು. ಅಲ್ಲದೆ ಎರಡು ತಿಂಗಳಿನಿಂದ ನಾನು ಕೊರೊನಾ ವಾಕ್ಸಿನ್ ಸಂಶೋಧನೆ ಮಾಡುತ್ತಿದ್ದೇನೆ ಎಂದು ಹೇಳಿದ್ದನು. ಆಗ ನಾನು ತುಂಬಾ ಸಂತೋಷಗೊಂಡು, ಮುಂದುವರಿಸು ಎಂದು ಹೇಳಿದ್ದೆ. ಎರಡು ತಿಂಗಳ ಹಿಂದೆಯಷ್ಟೇ ಮಹದೇಶ್ ಭಾರತಕ್ಕೆ ಬಂದಿದ್ದನು. ಈ ವೇಳೆ ತಂಡದಲ್ಲಿ ಕೆಲಸ ಮಾಡುತ್ತೇನೆ ಅಂತ ಹೇಳಿದ್ದನು ಎಂದು ಮಹದೇಶ್ ತಾಯಿ ಹೇಳಿದರು.

mahadesh prasad corona scientist

ನನ್ನ ಮಗ ಕೊರೊನಾಗೆ ಔಷಧಿ ಕಂಡು ಹಿಡಿಯುವ ತಂಡದಲ್ಲಿ ಕೆಲಸ ಮಾಡುತ್ತಿರುವುದರಿಂದ ನನಗೆ ಆತಂಕ ಇಲ್ಲ. ಈಗಾಗಲೇ ಕೊರೊನಾ ವೈರಸ್ ಇಡೀ ವಿಶ್ವದಲ್ಲಿ 5 ಸಾವಿರ ಜನರನ್ನು ಬಲಿ ಪಡೆದುಕೊಂಡಿದೆ. ಅಂತಹದರಲ್ಲಿ ನನ್ನ ಮಗ ಔಷಧಿ ಕಂಡು ಹಿಡಿದರೆ ಎಷ್ಟೋ ಜನರ ಪ್ರಾಣ ಉಳಿಯುತ್ತೆ ಎಂಬ ಖುಷಿ ಹಾಗೂ ಹೆಮ್ಮೆ ನನಗಿದೆ. ನನ್ನ ಮಗ ಔಷಧಿ ಕಂಡು ಹಿಡಿದು ಕೋಟ್ಯಂತರ ಜನರಿಗೆ ಉಪಯೋಗ ಆಗಲಿ ಎಂಬುದು ನಮ್ಮ ಆಶಯ ಎಂದರು.

hsn mahadesh 1 e1584337105430

ಮಹದೇಶ್ ಪಿಎಚ್‍ಡಿ ಮುಗಿದ ಮೇಲೆ ಜರ್ಮನಿಯಲ್ಲಿ ಹಲವು ವರ್ಷಗಳ ಕಾಲ ವಿಜ್ಞಾನಿಯಾಗಿ ಕಾರ್ಯ ನಿರ್ವಹಿಸಿದ್ದಾನೆ. ಆದಾದ ಬಳಿಕ ಯುಎಸ್‍ಎ, ಸ್ವೀಡನ್‍ನಲ್ಲಿ ವಿಜ್ಞಾನಿಯಾಗಿ ಕೆಲಸ ಮಾಡಿದ್ದಾನೆ. ಇದೀಗ ಬೆಲ್ಜಿಯಂನಲ್ಲಿ ವಿಜ್ಞಾನಿಯಾಗಿ ಕೆಲಸ ಮಾಡುತ್ತಿದ್ದಾನೆ. ನನಗೆ ದಿನಕ್ಕೆ ಎರಡು ಬಾರಿ ಕರೆ ಮಾಡುತ್ತಾನೆ. ಈ ವೇಳೆ ವ್ಯಾಕ್ಸಿನ್ ಕಂಡು ಹಿಡಿಯಲು ತುಂಬಾ ಶ್ರಮಪಡುತ್ತಿದ್ದೇವೆ. ಔಷಧಿ ಕಂಡು ಹಿಡಿದೇ ಹಿಡಿಯುತ್ತೇವೆ ಎಂದು ಹೇಳುತ್ತಾನೆ ಎಂದು ತಿಳಿಸಿದರು.

hsn mahadesh 2

ನನ್ನ ಮಗ ಆರೋಗ್ಯವಾಗಿದ್ದು, ಆತನ ಪತ್ನಿ ಹಾಗೂ ಮಗು ಅಲ್ಲಿಯೇ ವಾಸಿಸುತ್ತಿದ್ದಾರೆ. ಅವರು ಕೂಡ ಆರೋಗ್ಯವಾಗಿದ್ದು, ನನಗೆ ಯಾವುದೇ ಆತಂಕವಿಲ್ಲ. ನನ್ನ ಮಗ ದೇಶ ಸೇವೆಯಲ್ಲ, ಇಡೀ ವಿಶ್ವ ಸೇವೆ ಮಾಡುತ್ತಿದ್ದಾನೆ. ಇದರಿಂದ ನನಗೆ ತುಂಬಾ ಹೆಮ್ಮೆ ಇದೆ. ನಮಗೆ ಖಂಡಿತ ಯಾವುದೇ ಸ್ವಾರ್ಥ ಇಲ್ಲ. ನಮ್ಮ ಮಕ್ಕಳು ದೇಶ ಸೇವೆ ಮಾಡಬೇಕೆಂದು ಚಿಕ್ಕ ವಯಸ್ಸಿನಿಂದಲೂ ಅವರಿಗೆ ಹೇಳಿಕೊಟ್ಟಿದ್ದೆವು. ನನ್ನ ಮಕ್ಕಳು ವಿಜ್ಞಾನಿಗಳಾಗಬೇಕು ಎಂದು ನಾನು ಬಯಸಿದ್ದೆ. ಹಾಗೆಯೇ ನನ್ನ ಇಬ್ಬರು ಮಕ್ಕಳು ವಿಜ್ಞಾನಿಗಳಾಗಿದ್ದಾರೆ. ನನ್ನ ಕಿರಿಯ ಮಗ ಯೂರೋಪ್‍ನ ಫಿನ್‍ಲ್ಯಾಂಡ್‍ನಲ್ಲಿ ವಿಜ್ಞಾನಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ನಾನು ನನ್ನ ಮಗನಿಗೆ ಈ ಸಂಶೋಧನೆಯನ್ನು ಮುಂದುವರಿಸು ಎಂದು ಹೇಳುತ್ತೇನೆ. ಇಡೀ ವಿಶ್ವಕ್ಕೆ ಕಾಡುತ್ತಿರುವ ಮಹಾಮಾರಿ ಕೊರೊನಾ ವೈರಸ್‍ಗೆ ಔಷಧಿ ಕಂಡು ಹಿಡಿದು ಅದನ್ನು ನಿರ್ಮೂಲನೆ ಮಾಡು ಎಂದು ನಾನು ನನ್ನ ಮಗನಿಗೆ ಹೇಳುತ್ತೇನೆ ಎಂದು ಮಹದೇಶ್ ಪ್ರಸಾದ್ ಅವರ ತಾಯಿ ಹೇಳಿದರು.

TAGGED:Corona Virusmahadesh prasadmothermysuruPublic TVscientistvaccineಕೊರೊನಾ ವೈರಸ್ತಾಯಿಪಬ್ಲಿಕ್ ಟಿವಿಮಹದೇಶ್ ಪ್ರಸಾದ್ಮೈಸೂರುವಿಜ್ಞಾನಿವ್ಯಾಕ್ಸಿನ್
Share This Article
Facebook Whatsapp Whatsapp Telegram

Cinema news

dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories

You Might Also Like

Jagannath Shegji
Bengaluru City

ಸಣ್ಣ ಗುತ್ತಿಗೆದಾರರಿಂದ ಕಮಿಷನ್‌ – ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಶೇಗಜಿ ಅಮಾನತು

Public TV
By Public TV
54 minutes ago
Sunetra Pawar
Latest

ವಕ್ಫ್‌, ಅಬಕಾರಿ ಸೇರಿ ಸುನೇತ್ರಾ ಪವಾರ್‌ಗೆ 4 ಖಾತೆ ಹಂಚಿಕೆ – ಹಣಕಾಸು ತಮ್ಮಲ್ಲೇ ಇಟ್ಟುಕೊಂಡ ಫಡ್ನವಿಸ್‌

Public TV
By Public TV
1 hour ago
KAGODU THIMMAPPA
Districts

ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ – ಆಸ್ಪತ್ರೆಗೆ ದಾಖಲು

Public TV
By Public TV
1 hour ago
Pankaja Munde
Latest

ಬಿಜೆಪಿ ಸಚಿವೆ ಪಂಕಜಾ ಮುಂಡೆ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ – ಚುನಾವಣಾ ಪ್ರಚಾರ ರದ್ದು

Public TV
By Public TV
2 hours ago
Stray dogs Enters runway at Bengaluru airport
Bengaluru City

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಲೋಪ – ರನ್‌ವೇಗೆ ನುಗ್ಗಿದ ಬೀದಿನಾಯಿಗಳು!

Public TV
By Public TV
2 hours ago
WhatsApp
Court

ನಿಯಮ ಪಾಲಿಸದಿದ್ರೆ ದೇಶ ಬಿಟ್ಟು ತೊಲಗಿ – ವಾಟ್ಸಪ್‌ಗೆ ಸುಪ್ರೀಂ ವಾರ್ನಿಂಗ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?