Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮ್ಯಾನ್ಮಾರ್‌ನಲ್ಲಿ ಭೂಕಂಪ – 144ಕ್ಕೇರಿದ ಸಾವಿನ ಸಂಖ್ಯೆ; ತುರ್ತು ಪರಿಸ್ಥಿತಿ ಘೋಷಣೆ

Public TV
Last updated: March 28, 2025 10:51 pm
Public TV
Share
2 Min Read
myanmar earthquake 4
SHARE

ನೇಪಿಟಾವ್: ಮ್ಯಾನ್ಮಾರ್‌ನಲ್ಲಿ (Myanmar Earthquake) ಎರಡು ಪ್ರಬಲ ಭೂಕಂಪನ ಸಂಭವಿಸಿದೆ. ಭೂಕಂಪನದ ತೀವ್ರತೆ ಥ್ಯಾಯ್ಲೆಂಡ್‌ನ (Thailand) ಬ್ಯಾಂಕಾಕ್‌ ಮತ್ತು ಬಾಂಗ್ಲಾದೇಶದ ವರೆಗೂ ವ್ಯಾಪಿಸಿದೆ. ಭೂಕಂಪನದ ಕೇಂದ್ರಬಿಂದು ಇದ್ದ ಮ್ಯಾನ್ಮಾರ್‌ನಲ್ಲಿ ಭಾರಿ ಹಾನಿಯಾಗಿದ್ದು, 144 ಜನರು ಸಾವನ್ನಪ್ಪಿದ್ದಾರೆ. ಮನೆ ದೇವಸ್ಥಾನ ಸೇರಿದಂತೆ ನೂರಾರು ಕಟ್ಟಡಗಳು ಧರೆಗುರುಳಿದ್ದು, ಜನರ ಬದುಕು ಬೀದಿಗೆ ಬಂದಿದೆ.

11:50 ಸುಮಾರಿಗೆ 7.7 ಮತ್ತು 7.4 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದ್ದು, ಭಾರಿ ಅನಾಹುತಗಳು ಸಂಭವಿಸಿವೆ. ಈ ಭೂಕಂಪದ ಕೇಂದ್ರಬಿಂದು ಸಗೈಂಗ್ ಪ್ರದೇಶದಿಂದ ಸುಮಾರು 45 ಕಿಲೋಮೀಟರ್ ದೂರದಲ್ಲಿ, ಭೂಮಿಯಿಂದ 10 ಕಿಲೋಮೀಟರ್ ಆಳದಲ್ಲಿ ಇತ್ತು ಎಂದು ಯುನೈಟೆಡ್ ಸ್ಟೇಟ್ಸ್ ಜಿಯಾಲಾಜಿಕಲ್ ಸರ್ವೇ ತಿಳಿಸಿದೆ. ಇದನ್ನೂ ಓದಿ: Myanmar Earthquake: ಮ್ಯಾನ್ಮಾರ್‌ನಲ್ಲಿ ಪ್ರಬಲ ಭೂಕಂಪಕ್ಕೆ 60 ಸಾವು, 250 ಮಂದಿಗೆ ಗಾಯ

earthquake building collapse

ಈ ಘಟನೆಯು ಮ್ಯಾನ್ಮಾರ್‌ನ ಜನಜೀವನವನ್ನು ಅಸ್ಥವ್ಯಸ್ಥ ಮಾಡಿದ್ದು, ಪಕ್ಕದ ರಾಷ್ಟ್ರಗಳಾದ ಭಾರತ, ಥೈಲ್ಯಾಂಡ್ ಮತ್ತು ಬಾಂಗ್ಲಾದೇಶದಲ್ಲೂ ತೀವ್ರ ಕಂಪನ ಅನುಭವವಾಗಿದೆ. ಮುಖ್ಯವಾಗಿ ಈ ಭೂಕಂಪವು ಮ್ಯಾನ್ಮಾರ್‌ನ ಉತ್ತರ ಮತ್ತು ಮಧ್ಯ ಭಾಗಗಳಲ್ಲಿ ಭಾರೀ ವಿನಾಶವನ್ನು ಉಂಟುಮಾಡಿದೆ. ಸಗೈಂಗ್ ಪ್ರದೇಶದಲ್ಲಿ ಹಲವಾರು ಕಟ್ಟಡಗಳು ಕುಸಿದಿದ್ದು, ಇತಿಹಾಸ ಪ್ರಸಿದ್ಧ ಸಗೈಂಗ್ ಗುಡ್ಡದ ಸುತ್ತಮುತ್ತಲಿನ ದೇವಾಲಯಗಳಿಗೆ ಹಾನಿಯಾಗಿದೆ.

ಘಟನೆಯಲ್ಲಿ ಇದುವರೆಗೆ ಕನಿಷ್ಠ 144 ಜನರು ಸಾವನ್ನಪ್ಪಿದ್ದಾರೆ ಮತ್ತು 732 ಜನರು ಗಾಯಗೊಂಡಿದ್ದಾರೆ. ಯುನೈಟೆಡ್ ಸ್ಟೇಟ್ಸ್ ಸರ್ಕಾರಿ ಸಂಸ್ಥೆಯು ಭೂಕಂಪದ ಶಕ್ತಿ ಮತ್ತು ಆಳವನ್ನು ವಿಶ್ಲೇಷಿಸಿದ ನಂತರ, ತೀವ್ರ ಆರ್ಥಿಕ ನಷ್ಟಗಳೊಂದಿಗೆ ಸಾವಿನ ಸಂಖ್ಯೆ ಸಾವಿರಾರು ಸಂಖ್ಯೆಯಲ್ಲಿರಬಹುದು ಎಂದು ಎಚ್ಚರಿಸಿದೆ. ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಜನರು ಸಿಲುಕಿದ್ದು ರಕ್ಷಣೆ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: Photo Gallary: ಮ್ಯಾನ್ಮಾರ್‌, ಥೈಲ್ಯಾಂಡ್‌ನಲ್ಲಿ ಡೆಡ್ಲಿ ಭೂಕಂಪ – ಭೀಕರ ದೃಶ್ಯಗಳನ್ನು ಫೋಟೊಗಳಲ್ಲಿ ನೋಡಿ..

earthquake myanmar

ಭೂಕಂಪಕ್ಕೆ ಆದ ಅನಾಹುತಗಳೇನು?
* ಭೂಕಂಪದಿಂದಾಗಿ ಐದು ನಗರಗಳು ಮತ್ತು ಪಟ್ಟಣಗಳಲ್ಲಿ ಕಟ್ಟಡಗಳು ಕುಸಿದಿವೆ.
* ಯಾಂಗೂನ್-ಮಂಡಲೆ ಎಕ್ಸ್‌ಪ್ರೆಸ್‌ವೇಯಲ್ಲಿ ರೈಲ್ವೆ ಸೇತುವೆ ಮತ್ತು ರಸ್ತೆ ಸೇತುವೆ ಕೂಡ ಕುಸಿದು ಬಿದ್ದಿದೆ.
* ಪ್ರಬಲ ಭೂಕಂಪದ ನಂತರ ಮಂಡಲೆಯಲ್ಲಿರುವ 90 ವರ್ಷ ಹಳೆಯದಾದ ಅವಾ ಸೇತುವೆ ಇರಾವಡ್ಡಿ ನದಿಯಲ್ಲಿ ಕುಸಿದಿದೆ.
* ಐತಿಹಾಸಿಕ ಪ್ರಸಿದ್ಧವಾಗಿರುವ ಗಡಿಯಾರ ಗೋಪುರ ಮತ್ತು ಐತಿಹಾಸಿಕ ಮಂಡಲೆ ಅರಮನೆಯ ಹಾನಿಯಾಗಿದೆ.
* ಮ್ಯಾನ್ಮಾರ್‌ನಲ್ಲಿರುವ ದೊಡ್ಡ ಅಣೆಕಟ್ಟುಗಳ ಸ್ಥಿತಿಯ ಬಗ್ಗೆ ಮಾನವೀಯ ಸಂಸ್ಥೆ ರೆಡ್‌ಕ್ರಾಸ್ ಕಳವಳ ವ್ಯಕ್ತಪಡಿಸಿದೆ.
* ರಸ್ತೆಗಳು, ಸೇತುವೆಗಳು ಮತ್ತು ಸಾರ್ವಜನಿಕ ಕಟ್ಟಡಗಳು ಸೇರಿದಂತೆ ಸಾರ್ವಜನಿಕ ಮೂಲಸೌಕರ್ಯಗಳು ಹಾನಿಗೊಳಗಾಗಿವೆ.
* ಮ್ಯಾನ್ಮಾರ್‌ನ ಸಾಗೈಂಗ್, ಮಂಡಲೆ ಮತ್ತು ರಾಜಧಾನಿ ನೇಪಿಟಾವ್ ಸೇರಿದಂತೆ ಆರು ಪ್ರದೇಶಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದೆ.

ಯಾಂಗೊನ್‌ನಲ್ಲಿ ಕೂಡ ಕಂಪನದ ಪರಿಣಾಮವಾಗಿ ಜನರು ಭಯಭೀತರಾಗಿ ರಸ್ತೆಗಳಿಗಿಳಿದಿದ್ದಾರೆ. ಮ್ಯಾನ್ಮಾರ್ ಸರ್ಕಾರವು ತುರ್ತು ಪರಿಸ್ಥಿತಿ ಘೋಷಿಸಿ, ಸೇನೆ ಮತ್ತು ಸ್ಥಳೀಯ ರಕ್ಷಣಾ ತಂಡಗಳನ್ನು ಕಾರ್ಯಾಚರಣೆಗೆ ಇಳಿಸಿದೆ. ಭಗ್ನಾವಶೇಷಗಳಡಿ ಸಿಲುಕಿರುವ ಜನರನ್ನು ರಕ್ಷಿಸಲು ತೀವ್ರ ಪ್ರಯತ್ನಗಳು ನಡೆಯುತ್ತಿವೆ. ಆದರೆ, ರಸ್ತೆ ಸಂಪರ್ಕ ಕಡಿತ ಮತ್ತು ಸಂವಹನ ವ್ಯವಸ್ಥೆಯ ವೈಫಲ್ಯದಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಸವಾಲು ಎದುರಾಗಿದೆ. ಸ್ಥಳೀಯ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಔಷಧಿ ಮತ್ತು ಆಹಾರ ಸಾಮಗ್ರಿಗಳ ಕೊರತೆಯಾಗಿದೆ. ಇದನ್ನೂ ಓದಿ: ಮೊದಲು ನನಗೆ ತಲೆ ಸುತ್ತುತ್ತಿದೆ ಎಂದು ಭಾವಿಸಿದ್ದೆ – ಥೈಲ್ಯಾಂಡ್‌ ಭೂಕಂಪದ ಭಯಾನಕ ಚಿತ್ರಣ ಬಿಚ್ಚಿಟ್ಟ ಕನ್ನಡಿಗ

TAGGED:myanmarMyanmar Earthquakethailandಥೈಲ್ಯಾಂಡ್ಭೂಕಂಪನಮ್ಯಾನ್ಮಾರ್
Share This Article
Facebook Whatsapp Whatsapp Telegram

Cinema Updates

disha madan
ಕಾನ್ ಫೆಸ್ಟಿವಲ್‌ನಲ್ಲಿ ಕನ್ನಡತಿ- ಅಮ್ಮನ ಸೀರೆ ಗೌನ್ ಮಾಡಿದ ದಿಶಾ ಮದನ್
3 hours ago
pawan kalyan 1 1
ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಚಿತ್ರದ ರಿಲೀಸ್ ಡೇಟ್ ಅನೌನ್ಸ್
3 hours ago
yash kajal
Ramayana: ‘ರಾವಣ’ ಯಶ್ ಪತ್ನಿಯಾಗಿ ಕಾಜಲ್ ಅಗರ್ವಾಲ್?
4 hours ago
drithi puneeth rajkumar
ವಿದೇಶದಲ್ಲಿ ಪದವಿ ಪಡೆದ ಪುನೀತ್ ರಾಜ್‌ಕುಮಾರ್ ಪುತ್ರಿ ಧೃತಿ
5 hours ago

You Might Also Like

BSF Army Purnam kumar
Latest

ಬಿಎಸ್‌ಎಫ್‌ ಯೋಧನಿಗೆ 20 ದಿನವೂ ಇನ್ನಿಲ್ಲದ ಟಾರ್ಚರ್‌ ನೀಡಿದ್ದ ಪಾಕ್‌

Public TV
By Public TV
22 minutes ago
D K Shivakumar 2
Districts

ವಿಪಕ್ಷದವರು ಕ್ವಾರ್ಟರ್ ಅಲ್ಲ, ಫುಲ್ ಬಾಟಲ್ ಆದ್ರೂ ಹೇಳಲಿ ನಾವು ತಲೆ ಕೆಡಿಸಿಕೊಳ್ಳಲ್ಲ: ಡಿಕೆಶಿ

Public TV
By Public TV
26 minutes ago
Shobha Karandlaje
Dharwad

ಕಾಂಗ್ರೆಸ್ ಅವಧಿಯಲ್ಲಿ ದೇಶದ ರಕ್ಷಣಾ ಕ್ಷೇತ್ರ ಬಲಪಡಿಸಿಲ್ಲ: ಶೋಭಾ ಕರಂದ್ಲಾಜೆ

Public TV
By Public TV
38 minutes ago
CM Siddaramaiah 2
Districts

ಗಂಗಾವತಿ ಕ್ಷೇತ್ರದಲ್ಲಿ ಉಪಚುನಾವಣೆ ನಡೆದರೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ತಾರೆ – ಸಿಎಂ

Public TV
By Public TV
56 minutes ago
DCET Exam
Districts

ದ್ವಿತೀಯ ಪಿಯುಸಿ ಪರೀಕ್ಷೆ- 2 ಫಲಿತಾಂಶ ಪ್ರಕಟ

Public TV
By Public TV
1 hour ago
Chinnaswamy Stadium
Bengaluru City

ನಾಳೆ ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್ – ಎಲ್ಲಿ ಪಾರ್ಕ್ ಮಾಡಬಹುದು?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?