ವಿಷ್ಣು ಸ್ಮಾರಕ ಅಭಿಮಾನಿಗಳಿಗೆ ಅರ್ಪಣೆ – ಭಾರತಿ ವಿಷ್ಣುವರ್ಧನ್

Public TV
1 Min Read
collage mys bharthi

ಮೈಸೂರು: ಜಿಲ್ಲೆಯ ಹಾಲಾಳು ಗ್ರಾಮದಲ್ಲಿ ನಿರ್ಮಾಣವಾಗಲಿರುವ ವಿಷ್ಣು ಸ್ಮಾರಕವನ್ನು ವಿಷ್ಣುವರ್ಧನ್ ಅವರ ಅಭಿಮಾನಿಗಳಿಗೆ ಅರ್ಪಣೆ ಮಾಡುತ್ತಿದ್ದೇವೆ. ವಿಷ್ಣುವರ್ಧನ್ ಕನಸು ಕೂಡ ಇದೆ ಆಗಿತ್ತು ಎಂದು ಹಿರಿಯ ನಟಿ, ಭಾರತಿ ವಿಷ್ಣುವರ್ಧನ್ ತಿಳಿಸಿದ್ದಾರೆ.

ಮೈಸೂರಿನ ಹಾಲಾಳು ಗ್ರಾಮದಲ್ಲಿ ನಿರ್ಮಾಣವಾಗಲಿರುವ ವಿಷ್ಣು ಸ್ಮಾರಕ ಪ್ರದೇಶವನ್ನು ಭಾರತಿ ವಿಷ್ಣುವರ್ಧನ್ ವೀಕ್ಷಿಸಿದರು. ಸುಮಾರು 5 ಎಕರೆ ವ್ಯಾಪ್ತಿಯ 11 ಕೋಟಿ ವೆಚ್ಚದಲ್ಲಿ ಈ ಸ್ಮಾರಕ ನಿರ್ಮಾಣವಾಗುತ್ತಿದೆ. ಕಳೆದ 10 ವರ್ಷದಿಂದ ಈ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು. ಪುನಃ ಆರಂಭವಾಗಿರುವ ಕಾಮಗಾರಿಯನ್ನು ನೋಡಲು ಬಂದ ಭಾರತಿ ಅವರು ಸ್ಥಳೀಯರು ಹಾಗೂ ಅಧಿಕಾರಿಗಳ ಜೊತೆ ಸ್ಮಾರಕ ನಿರ್ಮಾಣದ ಕುರಿತು ಮಾಹಿತಿ ಪಡೆದರು.

mys bharathi

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 11 ಕೋಟಿ ವೆಚ್ಚದಲ್ಲಿ ಸ್ಮಾರಕ ಹಾಗೂ ಮ್ಯೂಸಿಯಂ ನಿರ್ಮಾಣವಾಗುತ್ತಿದೆ. ಸರ್ಕಾರದಿಂದ ಈ ಹಣ ಹಂತ ಹಂತವಾಗಿ ಬಿಡುಗಡೆ ಆಗಲಿದೆ. ಮೊದಲು ನಾವು ಈ ಜಾಗದಲ್ಲಿದ್ದವರಿಗೆ ಮಾನವೀಯತೆಯಿಂದ ಹಣ ಕೊಡುತ್ತೇವೆ ಎಂದು ಹೇಳಲಾಗಿತ್ತು. ಆದರೆ ಸ್ಥಳೀಯರು ಇಂದು ಆಗೋದಿಲ್ಲ ಹೋರಾಟ ಮಾಡುತ್ತೀವಿ ಎಂದರು. ಆದರೆ ಈಗ ಇದು ಸರ್ಕಾರದ ಜಾಗವಾಗಿದೆ. ಹಾಗಾಗಿ ಈಗ ಅವರಿಗೆ ಮಾನವೀಯತೆಯಿಂದ ಹಣ ಕೊಡುವ ಅವಶ್ಯಕತೆ ಇಲ್ಲ. ನಾವು ಕೊಡೋದಿಲ್ಲ, ಸರ್ಕಾರವೂ ಕೊಡಲ್ಲ. ಈ ಸ್ಮಾರಕ ಅಭಿಮಾನಿಗಳು ಹಾಗೂ ವಿಷ್ಣು ಅವರಿಗೆ ಅರ್ಪಿಸುತ್ತೇವೆ. ವಿಷ್ಣುವರ್ಧನ್ ಅವರ ಕನಸು ಕೂಡ ಇದೆ ಆಗಿತ್ತು ಎಂದು ಹೇಳಿದ್ದಾರೆ.

msy bharathi2

ಈ ವೇಳೆ ಮಾತನಾಡಿದ ವಿಷ್ಣುವರ್ಧನ್ ಅಳಿಯ, ನಟ ಅನಿರುದ್ಧ್ ಮಾತನಾಡಿ, ಮೈಸೂರಿನಲ್ಲಿ ಸ್ಮಾರಕ ಆಗ್ತಿರೋದು ತುಂಬಾನೇ ಖುಷಿಯಾಗಿದೆ. ಅಪ್ಪಾಜಿಯವರ ಕನಸು ಕೂಡ ಇದೇ ಆಗಿತ್ತು. ಇದು ಕೇವಲ ಸ್ಮಾರಕವಲ್ಲ, ಇದೊಂದು ರಾಜ್ಯದ ಮಾಡೆಲ್. ರಂಗ ತರಬೇತಿಯಿಂದ ಹಿಡಿದು ಸಿನಿಮಾಗೆ ಸಂಬಂಧಿಸಿದ ಎಲ್ಲ ರೀತಿಯ ಟ್ರೈನಿಂಗ್ ಇಲ್ಲಿ ಇರುತ್ತದೆ. ದಕ್ಷಿಣ ಭಾರತದಲ್ಲಿ ಇದೊಂದು ಉತ್ತಮವಾದ ಮ್ಯೂಸಿಯಂ ಆಗಬೇಕಿದೆ. 10 ವರ್ಷಗಳ ಕಾಲ ನಡೆದ ಹೋರಾಟದ ಫಲ ಇಂದು ದೊರಕಿದೆ. ಎರಡು ವರ್ಷದಲ್ಲಿ ಸ್ಮಾರಕ ಹಾಗೂ ಮ್ಯೂಸಿಯಂ ಮುಕ್ತಾಯವಾಗಲಿದೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *