ಮೈಸೂರು: ಜಿಲ್ಲೆಯ ಕೆ.ಆರ್.ನಗರದಲ್ಲಿ ಮೈತ್ರಿ ಪಕ್ಷಗಳ ನಡುವಿನ ಕಿತ್ತಾಟ ಮುಂದುವರಿದಿದೆ. ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ವಿರುದ್ಧ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.
ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಷ್ಟಚಾರ ಉಲ್ಲಂಘನೆ ಆಗಿದೆ. ಸ್ಥಳೀಯ ಸಂಸ್ಥೆಗಳಲ್ಲಿನ ಕಾಂಗ್ರೆಸ್ ಸದಸ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಕೆ.ಆರ್.ನಗರದ ಪುರಸಭೆ ಕಾಂಗ್ರೆಸ್ ಸದಸ್ಯರು ಮತ್ತು ಕಾರ್ಯಕರ್ತರು ಪ್ರತಿಭಟಿಸಿದರು.
ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಪುರಸಭೆ ಸದಸ್ಯರಿಗೆ ಆಹ್ವಾನ ನೀಡಿಲ್ಲ. ಸಚಿವರ ಅಣತಿಯಂತೆ ಸರ್ಕಾರಿ ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದ್ದರು. ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಅವಕಾಶ ನೀಡುವುದಿಲ್ಲ ಎಂದು ಸಚಿವರ ವಿರುದ್ಧ ಘೋಷಣೆ ಕೂಗಿ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸಿದರು.
ಈ ವೇಳೆ ಪ್ರತಿಭಟನಾ ನಿರತ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]