ಮೈಸೂರು: ದೆಹಲಿಯ ಕೇಂದ್ರ ಬಿಜೆಪಿ ಕಚೇರಿಗೆ ಹುಸಿಬಾಂಬ್ ಬೆದರಿಕೆ ಕರೆ ಮಾಡಿದ ಪ್ರಕರಣ ಸಂಬಂಧ ಕರ್ನಾಟಕ ಪೊಲೀಸರು ಮೈಸೂರಿನಲ್ಲಿ ವೃದ್ಧನನ್ನು ಬಂಧಿಸಿದ್ದಾರೆ.
ಮೈಸೂರಿನ ಸಿದ್ಧಾರ್ಥ ನಗರ ನಿವಾಸಿ 85 ವರ್ಷದ ಸುಕನ್ ರಾಜ್ ಬಂಧಿತ ವೃದ್ಧ. ಬಂಧಿತ ವೃದ್ಧ ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದ್ದು ಸದ್ಯ ಪೊಲೀಸರು ಆರೋಪಿಯನ್ನು ವಿಚಾರಣೆ ಮಾಡುತ್ತಿದ್ದಾರೆ.
ಏನಿದು ಪ್ರಕರಣ?
ಜೂನ್ 22 ರಂದು ಅಶೋಕ ರಸ್ತೆಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಾಂಬ್ ಇದೆ ಎಂದು ವ್ಯಕ್ತಿಯೊಬ್ಬ ಕರೆ ಮಾಡಿದ್ದನು. ಕೂಡಲೇ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಬಿಜೆಪಿ ಕಚೇರಿಗೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಆದರೆ ಇದೊಂದು ಹುಸಿ ಕರೆ ಎಂಬುದು ತಿಳಿದುಬಂದಿತ್ತು. ಕರೆಯ ಜಾಡು ಹಿಡಿದ ಪೊಲೀಸರಿಗೆ ಇದು ಮೈಸೂರಿನಿಂದ ಬಂದಿದೆ ಎನ್ನುವುದು ಗೊತ್ತಾಗಿತ್ತು. ಅದ್ದರಿಂದ ಈ ಪ್ರಕರಣವನ್ನು ಕರ್ನಾಟಕ ಪೊಲೀಸರಿಗೆ ವಹಿಸಲಾಗಿತ್ತು.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]