Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಚ್‍ಡಿಕೆ ಮಾತಿಗೆ ಬೆಲೆ ಕೊಟ್ಟು ಜನ ಬಿಜೆಪಿ ಸರ್ಕಾರವನ್ನು ಉಳಿಸಿದ್ದಾರೆ: ಜಿಟಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಎಚ್‍ಡಿಕೆ ಮಾತಿಗೆ ಬೆಲೆ ಕೊಟ್ಟು ಜನ ಬಿಜೆಪಿ ಸರ್ಕಾರವನ್ನು ಉಳಿಸಿದ್ದಾರೆ: ಜಿಟಿಡಿ

Districts

ಎಚ್‍ಡಿಕೆ ಮಾತಿಗೆ ಬೆಲೆ ಕೊಟ್ಟು ಜನ ಬಿಜೆಪಿ ಸರ್ಕಾರವನ್ನು ಉಳಿಸಿದ್ದಾರೆ: ಜಿಟಿಡಿ

Public TV
Last updated: December 11, 2019 4:16 pm
Public TV
Share
2 Min Read
GTD
SHARE

– ಕುಮಾರಸ್ವಾಮಿ ನಡೆಯೇ ಬೇರೆ, ನುಡಿಯೇ ಬೇರೆ
– ವಿಶ್ವನಾಥ್ ಸೋಲಿಗೆ ಯೋಗೀಶ್ವರ್ ಕಾರಣ

ಮೈಸೂರು: ಮಾಜಿ ಸಿಎಂ ಎಚ್‍ಡಿಕೆ ಮತ್ತು ಅನರ್ಹ ಶಾಸಕ ಹಳ್ಳಿಹಕ್ಕಿ ವಿಶ್ವನಾಥ್ ವಿರುದ್ಧ ಮಾಜಿ ಸಚಿವ ಜಿ.ಟಿ ದೇವೇಗೌಡ ಕಿಡಿಕಾರಿದ್ದಾರೆ.

ಉಪ ಚುನಾವಣೆಯಲ್ಲಿ ಜೆಡಿಎಸ್ ಗೆ ಶೂನ್ಯ ಸಾಧನೆ ವಿಚಾರ ಹಾಗೂ ಹುಣಸೂರು ಉಪ ಚುನಾವಣೆಯಲ್ಲಿ ತಮ್ಮ ಸೋಲಿಗೆ ಜಿ.ಟಿ. ದೇವೇಗೌಡ ಕಾರಣ ಎಂಬ ಎಚ್. ವಿಶ್ವನಾಥ್ ಹೇಳಿಕೆ ಬಗ್ಗೆ ಮೈಸೂರಿನಲ್ಲಿ ಮಾಜಿ ಸಚಿವ ಜಿ.ಟಿ. ದೇವೇಗೌಡ ಮಾಧ್ಯಮದವರ ಮಾತಾಡಿದ್ದಾರೆ. ಉಪ ಚುನಾವಣೆ ಘೋಷಣೆ ಮುನ್ನವೆ ಎಚ್‍ಡಿಕೆ ಕುಮಾರಸ್ವಾಮಿ ಬಿಜೆಪಿ ಸರಕಾರ ಉಳಿಸುತ್ತೇನೆ ಎಂದು ಹೇಳಿದ್ರು ಹೀಗಾಗಿ ಜನ ಜೆಡಿಎಸ್ ಅನ್ನು ಶೂನ್ಯ ಮಾಡಿ ಸರಕಾರ ಭದ್ರ ಮಾಡಿದ್ದಾರೆ ಇದರಲ್ಲಿ ತಪ್ಪೇನಿದೆ. ಜನ ಎಚ್‍ಡಿಕೆ ಮಾತಿನಂತೆ ನಡೆದು ಕೊಂಡಿದ್ದಾರೆ ಎಂದು ಹೇಳುವ ಮೂಲಕ ಜೆಡಿಎಸ್ ಶೂನ್ಯ ಸಾಧನೆ ವಿಚಾರದಲ್ಲಿ ಎಚ್ಡಿಕೆ ಕಾಲನ್ನು ಜಿಟಿಡಿ ಎಳೆದರು.

hdk 1

ಕುಮಾರಣ್ಣ ಮುತ್ತಿನಂತ ಮಾತು ಆಡುತ್ತಾರೆ ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ಇತ್ತೀಚೆಗೆ ಅವರು ಆಡುತ್ತಿರುವ ಮಾತುಗಳು ಅಭಿಮಾನಿಗಳನ್ನೇ ಕೆರಳಿಸಿದೆ. ಕುಮಾರಸ್ವಾಮಿ ಅವರ ನಡೆಯೇ ಬೇರೆ, ನುಡಿಯೇ ಬೇರೆ ಆಗಿದೆ. ಇನ್ನಾದರೂ ಅವರು ಬದಲಾಗಬೇಕು. ಆಡುವ ಮಾತಿನ ಮೇಲೆ ಹಿಡಿತ ಇಟ್ಟುಕೊಳ್ಳಲಿ ಎಂದು ಎಚ್‍ಡಿಕೆಗೆ ಸಲಹೆ ನೀಡಿದರು.

ಹುಣಸೂರು ಉಪ ಚುನಾವಣೆಯಲ್ಲಿ ಎಚ್. ವಿಶ್ವನಾಥ್ ಸೋಲಿಗೆ ಸಿ.ಪಿ. ಯೋಗೀಶ್ವರ್ ಕಾರಣ. ಯೋಗೀಶ್ವರ್ ಸಮುದಾಯದ ನಾಯಕರನ್ನು ಟೀಕಿಸಿದ್ದರಿಂದ ಒಕ್ಕಲಿಗರು ವಿಶ್ವನಾಥ್ ವಿರುದ್ಧ ತಿರುಗಿ ಬಿದ್ದರು. ಅವನ್ಯಾರು ದೇವೇಗೌಡ, ಕುಮಾರಸ್ವಾಮಿ, ಜಿ.ಟಿ.ದೇವೇಗೌಡ ಅಂತೆಲ್ಲ ಮಾತನಾಡಿದರು. ದುಡ್ಡು, ಸೀರೆ, ಕುಕ್ಕರ್ ಹಂಚಿ ಗೆಲ್ಲುತ್ತೇವೆ ಎಂಬ ಹುಂಬತನ ಅವರಲ್ಲಿ ಇತ್ತು. ಹೀಗಾಗಿ 5 ಕೋಟಿ ಆಮಿಷ ತೋರಿ ಒಕ್ಕಲಿಗರನ್ನು ಓಲೈಸುವ ಪ್ರಯತ್ನ ಮಾಡಿದ್ದರು ಎಂದು ಆರೋಪಿಸಿದರು.

mys vishwanath

ಜಿಟಿಡಿ ಪಕ್ಷದ್ರೋಹಿ ಎಂಬ ವಿಶ್ವನಾಥ್ ಹೇಳಿಕೆಗೂ ಜಿ.ಟಿ.ದೇವೇಗೌಡ ತಿರುಗೇಟು ನೀಡಿ, ಹುಣಸೂರಿನಲ್ಲಿ ನಾನು ವಿಶ್ವನಾಥ್ ಬೆಂಬಲಿಸುತ್ತೇನೆ ಎಂದು ಎಲ್ಲಿಯೂ ಹೇಳಿರಲಿಲ್ಲ. ಇಡೀ ಚುನಾವಣೆಯಲ್ಲಿ ನಾನು ಭಾಗವಹಿಸಲ್ಲ ಅಂತ ಮೊದಲೇ ಹೇಳಿದ್ದೆ. ಅಂದ ಮೇಲೆ ಪಕ್ಷದ್ರೋಹಿ ಹೇಗಾಗುತ್ತೆ? ನಾನು ಈಗಲೂ ತಟಸ್ಥನಾಗಿಯೇ ಇದ್ದೇನೆ. ನನ್ನ ಮಗ ಸ್ವತಂತ್ರನಿದ್ದಾನೆ. ಅವನು ಸ್ವತಂತ್ರ ನಿರ್ಧಾರ ಕೈಗೊಂಡಿದ್ದಾನೆ ಎಂದು ಸ್ಪಷ್ಟಪಡಿಸಿದರು.

ಯೋಗೀಶ್ವರ್ ಟೀಕೆ ನಂತರ ನನ್ನ ಮಗ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟು ಸ್ವಂತ ನಿರ್ಧಾರ ಕೈಗೊಂಡಿದ್ದಾನೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಬೆಂಬಲ ವಿಚಾರದಲ್ಲಿ ತಮ್ಮ ಮಗನನ್ನು ಜಿಟಿಡಿ ಸಮರ್ಥಿಸಿಕೊಂಡರು. ವಿಶ್ವನಾಥ್ ಹುಣಸೂರು ಕ್ಷೇತ್ರ ಅರ್ಥ ಮಾಡಿಕೊಳ್ಳುವಲ್ಲಿ ವಿಫಲರಾದರು. ಅವರು ಎಲ್ಲಿಂದಲೋ ಬಂದವರು. ಕಳೆದ ಬಾರಿ ಎಚ್‍ಡಿ ದೇವೇಗೌಡರು, ನಾನು ಒಟ್ಟಿಗೆ ಸೇರಿ ಗೆಲ್ಲಿಸಿಕೊಂಡಿದ್ದೆವು. ಆದರೆ ಅದನ್ನು ಉಳಿಸಿಕೊಳ್ಳಲು ವಿಶ್ವನಾಥ್ ಕೈಯಲ್ಲಿ ಆಗಲಿಲ್ಲ. ಹಳ್ಳಿ ಹಳ್ಳಿಯಲ್ಲಿ ಜನ ಆಕ್ರೋಶ ಹೊರಹಾಕಿದ್ರು. ಗ್ರಾಮಗಳ ಒಳಗೆ ಬಿಟ್ಟು ಕೊಳ್ಳಲಿಲ್ಲ. ಅದು ಅವರ ಸೋಲಿಗೆ ಕಾರಣ ಎಂದರು.

TAGGED:bjpGT Deve GowdaH ViswanathKumaraswamymysoreಎಚ್ ವಿಶ್ವನಾಥ್ಕುಮಾರಸ್ವಾಮಿಜಿಟಿ ದೇವೇಗೌಡರುಮೈಸೂರು
Share This Article
Facebook Whatsapp Whatsapp Telegram

Cinema news

Ashwini Gowda and Gilli Nata Talk Fight
ಉಡ್ಕೊಂಡ್ ತಿನ್ಕೊಂಡ್ ಇರೋಕೆ ಬಿಗ್‌ಬಾಸ್ ಮನೆಗೆ ಬಂದಿದ್ಯಾ? – ಗಿಲ್ಲಿ ವಿರುದ್ಧ ಅಶ್ವಿನಿ ಕೆಂಡಾಮಂಡಲ
Cinema Latest Sandalwood
Dear Comrade
ವಿಜಯ್ ದೇವರಕೊಂಡ-ರಶ್ಮಿಕಾ ನಟನೆಯ ಸಿನಿಮಾ ಹಿಂದಿಯಲ್ಲಿ ರಿಮೇಕ್
Bollywood Cinema Latest Top Stories
vijayalakshmi 1 1
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ – ಬೆಂಗಳೂರು ಮೂಲದ ವ್ಯಕ್ತಿ ಸೇರಿ ಇಬ್ಬರು ಅರೆಸ್ಟ್
Cinema Karnataka Latest Sandalwood Top Stories
dhanush bigg boss
ಕೊನೆಯ ಕ್ಯಾಪ್ಟನ್ಸಿ ಆಟದಲ್ಲಿ ಮೋಸ ಮಾಡಿದ್ರಾ ಧನುಷ್‌? – ಯಾರಾಗ್ತಾರೆ ಮನೆಯ ಕ್ಯಾಪ್ಟನ್?
Cinema Latest Top Stories TV Shows

You Might Also Like

EVM
Bengaluru City

EVM ನಿಖರ ಫಲಿತಾಂಶ ಕೊಡುತ್ತೆ – ಕಾಂಗ್ರೆಸ್‌ಗೆ ಭಾರೀ ಮುಜುಗರ ತರಿಸುವ ಸಮೀಕ್ಷೆ ರಾಜ್ಯದಿಂದಲೇ ಪ್ರಕಟ

Public TV
By Public TV
25 seconds ago
Resort
Crime

ರೆಸಾರ್ಟ್​​ ಮಾಲೀಕರ ಕಾರು ಚಾಲಕನ ಮೇಲೆ ಹಲ್ಲೆ – ಮೊಬೈಲ್, ಹಣ ದೋಚಿ‌ದ ಕಿಡಿಗೇಡಿಗಳು

Public TV
By Public TV
46 minutes ago
Himachal College Student Dies Of Sexual Assault 4 Including Professor Charged
Crime

ವಿದ್ಯಾರ್ಥಿನಿ ಸಾವಿನ ಬಳಿಕ ಲೆಕ್ಚರ್‌ನ ಕ್ರೌರ್ಯ ಬಯಲು – ದೌರ್ಜನ್ಯದ ಬಗ್ಗೆ ವಿಡಿಯೋ ಮಾಡಿಟ್ಟಿದ್ದ ಯುವತಿ!

Public TV
By Public TV
1 hour ago
Zameer Ahmed Khan
Bellary

Ballari Firing Case | ತನಿಖೆ ನಡೆಯುತ್ತಿದೆ, ಯಾರನ್ನೂ ಬಿಡಲ್ಲ – ಸಚಿವ ಜಮೀರ್ ವಾರ್ನಿಂಗ್‌

Public TV
By Public TV
2 hours ago
Siddaramaiah 15
Bellary

ಶಾಸಕ ಭರತ್ ರೆಡ್ಡಿ ಮೇಲೆ ಗರಂ – ಫೋನಿನಲ್ಲಿ ಮಾತನಾಡಲ್ಲ ಎಂದ ಸಿಎಂ

Public TV
By Public TV
2 hours ago
MC Sudhakar 1
Bengaluru City

ಸಿಎಂ ಸೂಚನೆ ಕೊಟ್ಟರೆ ಕಾಲೇಜು ಹೆಣ್ಣುಮಕ್ಕಳಿಗೆ ಋತುಚಕ್ರ ರಜೆ: ಡಾ. ಎಂ.ಸಿ.ಸುಧಾಕರ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?