Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಸೂರು ಅಖಾಡ ಹೇಗಿದೆ? ಪ್ರತಾಪ್ ಸಿಂಹ, ವಿಜಯ ಶಂಕರ್ ಪ್ಲಸ್, ಮೈನಸ್ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೈಸೂರು ಅಖಾಡ ಹೇಗಿದೆ? ಪ್ರತಾಪ್ ಸಿಂಹ, ವಿಜಯ ಶಂಕರ್ ಪ್ಲಸ್, ಮೈನಸ್ ಏನು?

Bengaluru City

ಮೈಸೂರು ಅಖಾಡ ಹೇಗಿದೆ? ಪ್ರತಾಪ್ ಸಿಂಹ, ವಿಜಯ ಶಂಕರ್ ಪ್ಲಸ್, ಮೈನಸ್ ಏನು?

Public TV
Last updated: April 15, 2019 8:13 pm
Public TV
Share
3 Min Read
MYSORE copy
SHARE

ಹಳೆಯ ಮೈಸೂರು ಭಾಗದಲ್ಲಿ ಜೆಡಿಎಸ್ ಬಲಿಷ್ಠವಾಗಿದ್ದರೂ ಸಹ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದಿಲ್ಲ. ಜನತಾದಳವೂ ಗೆದ್ದಿಲ್ಲ. ಒಟ್ಟು 16 ಚುನಾವಣೆಗಳು ನಡೆದಿದ್ದು, ಇಲ್ಲಿ ಕಾಂಗ್ರೆಸ್ 13 ಸಲ, ಬಿಜೆಪಿ 3 ಸಲ ಗೆದ್ದಿದೆ. ಗುರುಪಾದಸ್ವಾಮಿ, ಹೆಚ್.ಡಿ.ತುಳಸಿದಾಸಪ್ಪ, ಎಂ.ರಾಜಶೇಖರಮೂರ್ತಿ, ಶ್ರೀಕಂಠದತ್ತ ನರಸಿಂಹರಾಜ ಒಡೆಯರ್, ಹೆಚ್.ವಿಶ್ವನಾಥ್ ಘಟಾನುಘಟಿ ನಾಯಕರು ಸಂಸದರಾಗಿದ್ದ ಕ್ಷೇತ್ರ ಇದು. ನಾಲ್ಕು ಬಾರಿ ಈ ಕೇತ್ರದಿಂದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಗೆದ್ದಿದ್ದಾರೆ. ದೇವರಾಜ ಅರಸು ಪುತ್ರಿ ಚಂದ್ರಪ್ರಭಾ ಅರಸ್ ಅವರು ಈ ಕ್ಷೇತ್ರದಿಂದ 1991ರಲ್ಲಿ ಗೆದ್ದಿದ್ರು.

ಈಗ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲೀಗ ಆಗ್ನಿ ಪರೀಕ್ಷೆ ಎದುರಾಗಿದ್ದು, ಕಾಳಗ ಜೋರಾಗಿಯೇ ಇದೆ. ಇಡೀ ಕ್ಷೇತ್ರದಲ್ಲಿ ಜಾತಿಯೇ ದೊಡ್ಡ ಟ್ರಂಪ್ ಕಾರ್ಡ್. ಅದರಲ್ಲೂ ಈ ಬಾರಿ ಒಕ್ಕಲಿಗ ಸಮುದಾಯದ ಮತಗಳ ಕ್ಷೇತ್ರದಲ್ಲಿ ನಿರ್ಣಾಯಕ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾದರೂ ಕೂಡ ಜೆಡಿಎಸ್ ನ ಸಂಪ್ರದಾಯಿಕ ಮತಗಳಾದ ಒಕ್ಕಲಿಗರ ಮತಗಳು ಮೈತ್ರಿ ಅಭ್ಯರ್ಥಿಗೆ ಬರುವುದು ಅಷ್ಟು ಸುಲಭವಿಲ್ಲ.

ಎರಡು ಬಾರಿ ಬಿಜೆಪಿಯಿಂದ ಗೆದ್ದಿದ್ದ ವಿಜಯ್ ಶಂಕರ್‍ಗೆ ಕಳೆದ ಬಾರಿ ಮೈಸೂರಿನಿಂದ ಟಿಕೆಟ್ ಸಿಗದೇ ಹಾಸನದಲ್ಲಿ ಸ್ಪರ್ಧಿಸಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದರು. ಈಗ ಅದೇ ವಿಜಯಶಂಕರ್ ಸಿದ್ದರಾಮಯ್ಯ ಬಲದಿಂದ ಮೈಸೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‍ನಿಂದ ಕಣಕ್ಕಿಳಿದಿದ್ದು, ಎದುರಾಳಿಯಾಗಿ ಬಿಜೆಪಿಯ ಪ್ರತಾಪ್ ಸಿಂಹ ಇದ್ದಾರೆ. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಗುದ್ದಾಟ ಈಗ ಮೈತ್ರಿ ಪಕ್ಷಗಳಿಗೆ ದೊಡ್ಡ ತಲೆನೋವಾಗಿದ್ದು, ಅಖಾಡ ಸಾಕಷ್ಟು ಕುತೂಹಲ ಮೂಡಿಸಿದ್ದು ಗೆಲುವಿನ ಮಾಲೆ ಯಾರಿಗೆ ಅನ್ನೋದನ್ನ ಮತದಾರ ಪ್ರಭು ನಿರ್ಧರಿಸಲಿದ್ದಾನೆ.

Mysuru 1

ಒಟ್ಟು ಮತದಾರರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ 18,79,659 ಮತದಾರರಿದ್ದಾರೆ. ಇದರಲ್ಲಿ 9,40,687 ಮಹಿಳಾ ಮತದಾರರು ಮತ್ತು 9,38,826 ಪುರುಷ ಮತದಾರರಿದ್ದಾರೆ. ಜಾತಿವಾರು ನೋಡೋದಾದರೆ ಒಕ್ಕಲಿಗರು 4 ಲಕ್ಷ, ಮುಸ್ಲಿಮರು 2.10 ಲಕ್ಷ, ಲಿಂಗಾಯತರು 2 ಲಕ್ಷ, ಕುರುಬರು 1.80 ಲಕ್ಷ, ಎಸ್ಸಿ (ಬಲಗೈ) 1.75 ಲಕ್ಷ, ಎಸ್ಸಿ (ಎಡಗೈ) 1.25 ಲಕ್ಷ, ಎಸ್‍ಟಿ 1.25 ಲಕ್ಷ, ಕೊಡವರು 1 ಲಕ್ಷ, ಅರೆ ಭಾಷೆ ಒಕ್ಕಲಿಗರು 1 ಲಕ್ಷ, ಬ್ರಾಹ್ಮಣರು 1.10 ಲಕ್ಷ ಮತ್ತು ಇತರೆ/ಹಿಂದುಳಿದ ವರ್ಗ 2.30 ಲಕ್ಷ ಮತದಾರರು ಈ ಕ್ಷೇತ್ರದಲ್ಲಿದ್ದಾರೆ.

2014ರ ಫಲಿತಾಂಶ:
2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರತಾಪ್ ಸಿಂಹ 31,608 (2.72%) ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ವಿಶ್ವನಾಥ್ ವಿರುದ್ಧ ಗೆಲುವು ಕಂಡಿದ್ದರು. ಪ್ರತಾಪ್‍ಸಿಂಹ (ಬಿಜೆಪಿ) 5,03,908 (43.45%), ಹೆಚ್.ವಿಶ್ವನಾಥ್ (ಕಾಂಗ್ರೆಸ್) 4,72,300 (40.73%), ಚಂದ್ರಶೇಖರಯ್ಯ(ಜೆಡಿಎಸ್) 1,38,587(11.95%) ಮತಗಳನ್ನು ಪಡೆದುಕೊಂಡಿದ್ದರು.

Mysuru 4

ವಿಧಾನಸಭಾ ಎಲೆಕ್ಷನ್ ಫಲಿತಾಂಶ: 2018ರ ವಿಧಾನಸಭಾ ಚುನಾವಣೆಯಲ್ಲಿ 8 ಕ್ಷೇತ್ರಗಳ ಪೈಕಿ 4ರಲ್ಲಿ ಬಿಜೆಪಿ, 3ರಲ್ಲಿ ಜೆಡಿಎಸ್ ಮತ್ತು ಒಂದರಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿತ್ತು. ಮಡಿಕೇರಿ – ಅಪ್ಪಚ್ಚು ರಂಜನ್ (ಬಿಜೆಪಿ), ವಿರಾಜಪೇಟೆ – ಕೆ.ಜಿ.ಬೋಪಯ್ಯ (ಬಿಜೆಪಿ), ಕೃಷ್ಣರಾಜ – ಎಸ್.ಎ.ರಾಮದಾಸ್ (ಬಿಜೆಪಿ), ಚಾಮರಾಜ – ಎಲ್.ನಾಗೇಂದ್ರ (ಬಿಜೆಪಿ), ಚಾಮುಂಡೇಶ್ವರಿ – ಜಿ.ಟಿ.ದೇವೇಗೌಡ (ಜೆಡಿಎಸ್), ಹುಣಸೂರು – ಹೆಚ್.ವಿಶ್ವನಾಥ್ (ಜೆಡಿಎಸ್), ಪಿರಿಯಾಪಟ್ಟಣ – ಕೆ.ಮಹದೇವ್ (ಜೆಡಿಎಸ್) ಮತ್ತು ನರಸಿಂಹರಾಜ – ತನ್ವೀರ್ ಸೇಠ್ (ಕಾಂಗ್ರೆಸ್)

ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು
ಪ್ರತಾಪ್ ಸಿಂಹ- ಬಿಜೆಪಿ
ವಿಜಯಶಂಕರ್ – ಕಾಂಗ್ರೆಸ್
ಡಾ.ಬಿ.ಚಂದ್ರ- ಬಿಎಸ್‍ಪಿ

ಪ್ರತಾಪ್ ಸಿಂಹ
ಪ್ಲಸ್ ಪಾಯಿಂಟ್: ಮೈತ್ರಿ ಇದ್ದರೂ ಕಾಂಗ್ರೆಸ್-ಜೆಡಿಎಸ್ ಮಧ್ಯೆ ಒಳ ಜಗಳ ಲಾಭವಾಗಬಹುದು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಕುಮಾರಸ್ವಾಮಿ ವಿರುದ್ಧ ತುಟಿ ಬಿಚ್ಚದೆ ಒಕ್ಕಲಿಗರಿಗೆ ಹತ್ತಿರವಾಗುತ್ತಿರೋದು. ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರನ್ನು ಹೊಂದಿದ್ದು ಗೆಲುವಿನ ಸಮೀಪ ತಲುಪಿಸುವಲ್ಲಿ ಸಹಾಯ ಮಾಡಬಲ್ಲದು. ಸಂಸದರ ಅನುದಾನ ಬಳಕೆಯಲ್ಲಿ ಮೊದಲಿಗ ಅನ್ನೋದು ಮತ್ತೊಂದು ಪ್ಲಸ್ ಪಾಯಿಂಟ್. ಮೈಸೂರಿನಲ್ಲಿ ಸ್ವತಃ ಮೋದಿ ಪ್ರಚಾರ ಹೆಚ್ಚಿನ ಮತಗಳನ್ನು ಸೆಳೆಯುವ ಸಾಧ್ಯತೆಗಳಿವೆ.

Mysuru 3

ಮೈನಸ್ ಪಾಯಿಂಟ್: ಸಂಸದರು ಮತ್ತು ಕೆಲ ಸ್ಥಳೀಯ ಜನಪ್ರತಿನಿಧಿಗಳ ಸಂಬಂಧದಲ್ಲಿ ಬಿರುಕು ಹೊಡೆತ ನೀಡಬಹುದು. ಒಕ್ಕಲಿಗ ಸಮುದಾಯದ ಮತಗಳು ಈ ಬಾರಿ ಹಂಚಿ ಹೋಗಿದ್ದು, ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್, ಕಾಂಗ್ರೆಸ್ ಬಲಿಷ್ಠವಾಗಿರೋದು ಮತಗಳು ಮೈತ್ರಿ ಅಭ್ಯರ್ಥಿಯ ಪಾಲಾಗಬಹುದು. ಸಹಜವಾಗಿಯೇ ಕೆಲ ವಿಧಾನಸಭಾ ಕ್ಷೇತ್ರಗಳಲ್ಲಿ ಆಡಳಿತ ವಿರೋಧಿ ಅಲೆ ಕಾಣಿಸಿಕೊಂಡಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ವಿಜಯಶಂಕರ್
ಪ್ಲಸ್ ಪಾಯಿಂಟ್: ಕೈ ಅಭ್ಯರ್ಥಿ ವಿಜಯಶಂಕರ್ ಬೆನ್ನಿಗೆ ಮಾಜಿ ಸಿಎಂ ಸಿದ್ದರಾಮಯ್ಯ ನಿಂತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಕಾಂಗ್ರೆಸ್, ಜೆಡಿಎಸ್ ಬಲಿಷ್ಠವಾಗಿರೋದು ಮತಗಳ ಕ್ರೋಢಿಕರಣವಾಗುವ ಸಾಧ್ಯತೆಗಳಿವೆ. ಕಳೆದ ಎರಡು ಚುನಾವಣೆಗಳಲ್ಲಿ ಸೋತ ಅನುಕಂಪದ ಅಲೆ ವರ್ಕ್‍ಔಟ್ ಆಗಬಹುದು. ದೇವೇಗೌಡ, ಕುಮಾರಸ್ವಾಮಿ ಅವರು ಬೆಂಬಲ ಕೊಡಿ ಅಂತಾ ಸಭೆ ನಡೆಸಿರೋದು. ಕ್ಷೇತ್ರದ ಸೋಲು ಗೆಲುವಿನ ಜಾಡುಗಳು ಬಗ್ಗೆ ಸೂಕ್ಷ್ಮತೆ ಗೊತ್ತಿರುವುದು.

Mysuru 2

ಮೈನಸ್ ಪಾಯಿಂಟ್: ಚಾಮುಂಡೇಶ್ವರಿ ಸೋಲಿನ ಕಹಿಯ ಒಳ ಗುದ್ದಾಟ ನಿಲ್ಲದಿರುವುದು. ಸ್ವತಃ ಪ್ರಧಾನಿ ಮೋದಿಯೇ ಮೈಸೂರಿಗೆ ಪ್ರಚಾರಕ್ಕೆ ಬಂದು ಅಬ್ಬರಿಸಿರೋದು. ನಗರ ಪ್ರದೇಶ, ಕೊಡಗು ಭಾಗದಲ್ಲಿ ಬಿಜೆಪಿ ಬಲವಾಗಿರುವುದು. ಕಾಂಗ್ರೆಸ್, ಜೆಡಿಎಸ್ ನಲ್ಲಿ ಹೊಂದಾಣಿಕೆ ಕೊರತೆ ಹೆಚ್ಚಿರುವುದು.

TAGGED:bjpcongressjdsLok Sabha elections 2019Mysore-Kodagupratap simhaPublic TVsiddaramaiahVijay Shankarಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಪ್ರತಾಪ್ ಸಿಂಹಬಿಜೆಪಿಮೈಸೂರು-ಕೊಡಗುಲೋಕಸಭಾ ಚುನಾವಣೆ 2019ವಿಜಯ್ ಶಂಕರ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Bagalkote 4
Bagalkot

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Public TV
By Public TV
19 minutes ago
Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
35 minutes ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
49 minutes ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
2 hours ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
2 hours ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?