ಮೈಸೂರು: ಫ್ರೀ ಕಾಶ್ಮಿರ ಪ್ಲೇ ಕಾರ್ಡ್ ಪ್ರದರ್ಶನ ಪ್ರಕರಣಕ್ಕೆ ರಾಜ್ಯಪಾಲರ ಭವನ ಕೂಡ ಎಂಟ್ರಿ ಕೊಟ್ಟಿದೆ. ಪ್ರಕರಣದ ಬಗ್ಗೆ ಸವಿಸ್ತಾರ ನೀಡುವಂತೆ ರಾಜ್ಯಪಾಲರು ವಿಶ್ವವಿದ್ಯಾಲಯದ ರಿಜಿಸ್ಟರ್ ಅವರಿಗೆ ಆದೇಶಿಸಿದ್ದಾರೆ. ಪ್ರಕರಣಕ್ಕೆ ಕಾರಣ ಏನು? ಇದಕ್ಕೆ ಹೊಣೆಗಾರರು ಯಾರು ಎಂಬುದನ್ನು ವಿವರವಾಗಿ ವರದಿ ನೀಡುವಂತೆ ಆದೇಶಿಸಿದ್ದಾರೆ.
ಮೈಸೂರು ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ನಡೆದ ಪ್ರತಿಭಟನಾ ವೇಳೆ ಫ್ರೀ ಕಾಶ್ಮಿರ ಪ್ಲೇ ಕಾರ್ಡ್ ಪ್ರದರ್ಶನ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮೈಸೂರು ವಿಶ್ವವಿದ್ಯಾಲಯದ ರಿಜಿಸ್ಟರ್ ಆರ್.ಶಿವಪ್ಪ ಅವರು ಪ್ರತಿಭಟನಾ ಆಯೋಜಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಮೈಸೂರು ವಿಶ್ವವಿದ್ಯಾಲಯದಿಂದ ಜಯಲಕ್ಷೀಪುರಂ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರತ್ಯೇಕ ದೂರು ದಾಖಲಾಗಿದೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಫ್ರೀ ಕಾಶ್ಮೀರ ಪ್ಲೇಕಾರ್ಡ್ ಪ್ರದರ್ಶಿಸಿದವರ ಮೇಲೆ ದೂರು ದಾಖಲು
- Advertisement 2
- Advertisement 3
ಮಾನಸ ಗಂಗೋತ್ರಿಯ ಭದ್ರತಾ ಸಿಬ್ಬಂದಿಗೂ ನೋಟಿಸ್ ಜಾರಿಯಾಗಿದೆ. ಅನುಮತಿ ಇಲ್ಲದ ವ್ಯಕ್ತಿಗಳಿಗೆ ಪ್ರತಿಭಟನೆ ನಡೆಸಲು ಹೇಗೆ ಅವಕಾಶ ಕೊಟ್ಟಿದ್ದೀರಿ? ಇದು ಭದ್ರತಾ ಲೋಪ. ಇದಕ್ಕೆ ಕಾರಣ ನೀಡಿ ಎಂದು ನೋಟಿಸ್ ಜಾರಿಯಾಗಿದೆ.