Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾರಮ್ಮ ದೇವಿಯ ಪ್ರಸಾದ ಸೇವಿಸಿ 11 ಮಂದಿ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಮಾರಮ್ಮ ದೇವಿಯ ಪ್ರಸಾದ ಸೇವಿಸಿ 11 ಮಂದಿ ಸಾವು

Chamarajanagar

ಮಾರಮ್ಮ ದೇವಿಯ ಪ್ರಸಾದ ಸೇವಿಸಿ 11 ಮಂದಿ ಸಾವು

Public TV
Last updated: December 14, 2018 11:52 pm
Public TV
Share
2 Min Read
CNG Died
SHARE

ಚಾಮರಾಜನಗರ/ಮೈಸೂರು: ಸುಳ್ವಾಡಿ ಗ್ರಾಮದ ಮಾರಮ್ಮನ ದೇವಸ್ಥಾನದಲ್ಲಿ ಪ್ರಸಾದಕ್ಕೆ ವಿಷ ಹಾಕಿದ ಘಟನೆಯಲ್ಲಿ 11 ಜನರು ಮೃತಪಟ್ಟಿದ್ದು, ಅಸ್ವಸ್ಥಗೊಂಡವರಿಗೆ ಮೈಸೂರಿನ ಕೆ.ಆರ್.ಆಸ್ಪತ್ರೆ ಹಾಗೂ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನ ಕೆಆರ್ ಆಸ್ಪತ್ರೆ ಹಾಗೂ ಜೆಎಸ್‍ಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಸಿದ್ಧವಿರುವಂತೆ ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಸೂಚನೆ ನೀಡಿದೆ.

ಬೆಳಗ್ಗೆಯಿಂದ ಏನಾಯಿತು?:
ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಮಾರಮ್ಮ ದೇವಸ್ಥಾನದ ಗೋಪುರ ಶಂಕುಸ್ಥಾಪನೆ ಇಂದು ನಡೆದಿತ್ತು. ವಿವಿಧ ಪೂಜಾ ಕಾರ್ಯಗಳು ಮುಗಿದ ಬಳಿಕ ಮಧ್ಯಾಹ್ನ ಭಕ್ತರಿಗೆ ಪ್ರಸಾದ (ರೈಸ್‍ಬಾತ್) ವ್ಯವಸ್ಥೆ ಮಾಡಲಾಗಿತ್ತು. ಸುಳ್ವಾಡಿ ಸುತ್ತಮುತ್ತಲಿನ ಅನೇಕ ಗ್ರಾಮದ ಜನರು ದೇವಿಯ ದರ್ಶನಕ್ಕೆ ಹಾಗೂ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಶಂಕುಸ್ಥಾಪನೆ ಬಳಿಕ ಕೆಲವರು ಪ್ರಸಾದ ಸೇವಿಸಿ ತಮ್ಮ ಮನೆಗೆ ಹಾಗೂ ಊರುಗಳಿಗೆ ತೆರಳಿದರು.

MYS DR RAJESH KUMAR 1

ಊಟ ಸೇವಿಸಿದ ಸ್ವಲ್ಪ ಹೊತ್ತಿಗೆ ಮೂರ್ನಾಲ್ಕು ಮಂದಿ ದೇವಸ್ಥಾನದ ಆವರಣದಲ್ಲಿ ವಾಂತಿ ಮಾಡಿಕೊಂಡು, ನೆಲದ ಮೇಲೆ ಬಿದ್ದು ಒದ್ದಾಡಿದ್ದಾರೆ. ವೃದ್ಧರು, 20ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದರು. ಸ್ಥಳದಲ್ಲಿಯೇ ಗೋಪಿಯಮ್ಮ (40) ಹಾಗೂ ಶಾಂತ (42) ಸಾವನ್ನಪ್ಪಿದ್ದರು. ಅಸ್ವಸ್ಥಗೊಂಡಿದ್ದವರನ್ನು ತಕ್ಷಣವೇ ಕೊಳ್ಳೇಗಾಲ ಆಸ್ಪತ್ರೆಗೆ ಸಾಗಿಸಲಾಗಿತ್ತು. ಕೆಲವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಾಗಿದ್ದರಿಂದ ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆ ಸಾಗಿಸಲಾಯಿತು.

vlcsnap 2018 12 14 21h04m51s250

ಕೊಳ್ಳೇಗಾಲದಿಂದ ಮೈಸೂರಿಗೆ ಸಾಗಿಸಲು ಖಾಸಗಿ ಆಸ್ಪತ್ರೆಗಳ ಆಂಬ್ಯುಲೆನ್ಸ್ ಗಳನ್ನು ಕೂಡ ಬಳಸಿಕೊಳ್ಳಲಾಯಿತು. ಸಂಜೆಯಾಗುತ್ತಿದ್ದಂತೆಯೇ ಮೃತರ ಸಂಖ್ಯೆ ಹೆಚ್ಚುತ್ತಾ ಹೋಯಿತು. ಕೊಳ್ಳೇಗಾಲದಿಂದ ಮೈಸೂರಿಗೆ ಸಾಗಿಸುವಾಗ ದೇವಸ್ಥಾನದಲ್ಲಿ ಅಡುಗೆ ಮಾಡಿದ್ದ ಭಟ್ಟರ ಮಗಳು ಅನಿತಾ (12), ಪಾಪಣ್ಣ (50) ಕೊನೆಯುಸಿರೆಳೆದರು. ನಂತರ ಅಣ್ಣಯ್ಯಪ್ಪ, ಕೃಷ್ಣನಾಯ್ಕ, ರಾಚಯ್ಯ(55), ಶಿವು, ಶಕ್ತಿವೇಲು, ಅವಿನಾಶ್ ಸಾವನ್ನಪ್ಪಿದ್ದಾರೆ. ದೇವಸ್ಥಾನದ ಆವರಣದಲ್ಲಿ ಹಾಕಿದ್ದ ವಿಷಯುಕ್ತ ಆಹಾರ ಸೇವಿಸಿದ್ದ 60ಕ್ಕೂ ಹೆಚ್ಚು ಕಾಗೆಗಳು ಹಾಗೂ ಗೊರವಂಕಗಳು ವಿಲವಿಲ ಒದ್ದಾಡಿ ಪ್ರಾಣಬಿಟ್ಟವು.

CNG birds died 1

ಮೃತರ ಸಂಬಂಧಿಕರು ಕೊಳ್ಳೇಗಾಲದ ಆಸ್ಪತ್ರೆ ಆವರಣ ಹಾಗೂ ಹೊರಗೆ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ, ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಿದರು. ಇತ್ತ ಪ್ರಸಾದ ಸೇವಿಸಿ ಮಲೆಮಹದೇಶ್ವರ ಬೆಟ್ಟಕ್ಕೆ ಹೋಗಿದ್ದ ದೊಡ್ಡಮಾದಯ್ಯ ಎನ್ನುವವರು ಅಲ್ಲೇ ಪ್ರಾಣಬಿಟ್ಟಿದ್ದಾರೆ.

ಕಣ್ಣು ನೀಲಿಯಾಗಿತ್ತು!:
ಎಲ್ಲರ ಕಣ್ಣು ನೀಲಿಗೆ ತಿರುಗಿದೆ. ಎಲ್ಲರನ್ನೂ ಗಮನಿಸಿದಾಗ ಉಸಿರಾಟದ ತೊಂದರೆ ಕಾಣಿಸಿದೆ. ಪ್ರಸಾದದಲ್ಲಿ ಕ್ರಿಮಿನಾಶಕ ಅಥವಾ ಟಿಕ್-20 ಬೆರೆಸಿರುವ ಸಾಧ್ಯತೆ ಇದೆ ಎಂದು ಮೈಸೂರು ಜಿಲ್ಲಾಸ್ಪತ್ರೆ ಡಿ.ಎಚ್.ಒ ಡಾ.ಬಸವರಾಜ್ ಹೇಳಿದರು.

MYS K.R.Hospital 1

ಘಟನೆಗೆ ಸಂಬಂಧಿಸಿದಂತೆ ಸುಳ್ವಾಡಿ ಗ್ರಾಮದ ಚಿನ್ನಪ್ಪಿ ಹಾಗೂ ಮಾದೇಶ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರೋದಾಗಿ ದಕ್ಷಿಣ ವಲಯ ಐಜಿಪಿ ಶರತ್ ಚಂದ್ರ ಹೇಳಿದ್ದಾರೆ.

ಘಟನೆಯ ತಿಳಿದ ತಕ್ಷಣ ಸಿಎಂ ಕುಮಾರಸ್ವಾಮಿ ಅವರು ಮೈಸೂರಿಗೆ ಭೇಟಿ ನೀಡಿ ಅಸ್ವಸ್ಥಗೊಂಡವರ ಆರೋಗ್ಯ ವಿಚಾರಿಸಿದರು. ಇದಕ್ಕೂ ಮುನ್ನ ಚೆನ್ನೈನಲ್ಲಿ ಮಾತನಾಡಿದ ಅವರು, ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿವವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ನೀಡುತ್ತದೆ ಎಂದು ಭರವಸೆ ನೀಡಿದರು. ಈ ಘಟನೆ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವೆ ಎಂದು ತಿಳಿಸಿದರು.

https://www.youtube.com/watch?v=V_qoMhCwGNs

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:ಚಾಮರಾಜನಗರಪಬ್ಲಿಕ್ ಟಿವಿಮಾರಮ್ಮ ದೇವಸ್ಥಾನಮೈಸೂರುವಿಷ
Share This Article
Facebook Whatsapp Whatsapp Telegram

Cinema news

Rakshita Shetty 1
ಟ್ರೋಫಿ ಸಿಕ್ಕಿಲ್ಲ ಅಷ್ಟೇ.. ನನಗೆ ಎಲ್ಲ ಸಿಕ್ಕಿದೆ, ನಾನೇ ವಿನ್ನರ್: ರಕ್ಷಿತಾ ಶೆಟ್ಟಿ
Cinema Latest Main Post Sandalwood Top Stories
gilli nata hd kumaraswamy
ಅಪ್ಪಟ ಗ್ರಾಮೀಣ ಪ್ರತಿಭೆ ಗಿಲ್ಲಿಗೆ ಅಭಿನಂದನೆ: ಬಿಗ್‌ ಬಾಸ್‌ ವಿನ್ನರ್‌ಗೆ ಕೇಂದ್ರ ಸಚಿವ ಹೆಚ್‌ಡಿಕೆ ವಿಶ್‌
Bengaluru City Cinema Latest Top Stories TV Shows
gilli nata 4
ಬಂದಿರೋ 50 ಲಕ್ಷದಲ್ಲಿ ಜಮೀನು ತಗೊಂಡು ವ್ಯವಸಾಯ ಮಾಡ್ತೀನಿ: ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ ಫಸ್ಟ್ ರಿಯಾಕ್ಷನ್‌
Cinema Latest Main Post TV Shows
Bigg Boss Gilli
`ದೊಡ್ಮನೆ’ ದೊರೆಯಾದ ದಡದಪುರದ ಹೈದ – ಗಿಲ್ಲಿ ಗೆಲುವಿಗೆ ಸಂಭ್ರಮಿಸಿದ ಕರುನಾಡು
Bengaluru City Cinema Karnataka Latest Main Post Mandya Sandalwood Top Stories

You Might Also Like

spain train accident
Latest

ಸ್ಪೇನ್‌ನಲ್ಲಿ 2 ಹೈಸ್ಪೀಡ್‌ ರೈಲುಗಳ ನಡುವೆ ಡಿಕ್ಕಿ; 21 ಮಂದಿ ಸಾವು, 70ಕ್ಕೂ ಹೆಚ್ಚು ಜನರಿಗೆ ಗಾಯ

Public TV
By Public TV
13 minutes ago
Gilli Nata 3
Cinema

ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ, ರನ್ನರ್‌ ರಕ್ಷಿತಾ, ಅಶ್ವಿನಿ ಗೌಡಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು?

Public TV
By Public TV
9 hours ago
Bermingham Pink sky
Latest

ಗುಲಾಬಿ ಬಣ್ಣಕ್ಕೆ ತಿರುಗಿದ ಬರ್ಮಿಂಗ್‌ಹ್ಯಾಮ್ ಆಕಾಶ – ಈ ಅಚ್ಚರಿ ಹಿಂದಿನ ಕಾರಣವೇನು? 

Public TV
By Public TV
9 hours ago
big bulletin 18 January 2026 part 1
Big Bulletin

ಬಿಗ್‌ ಬುಲೆಟಿನ್‌ 18 January 2026 ಭಾಗ-1

Public TV
By Public TV
10 hours ago
big bulletin 18 January 2026 part 2
Big Bulletin

ಬಿಗ್‌ ಬುಲೆಟಿನ್‌ 18 January 2026 ಭಾಗ-2

Public TV
By Public TV
10 hours ago
Pralhad Joshi Davos WEF Meeting
Latest

ವಿಶ್ವ ಆರ್ಥಿಕ ವೇದಿಕೆ ಸಭೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?