ಮೈಸೂರು: ಮೈಸೂರಿನಲ್ಲಿ ಹೆಚ್ಚು ಬಾಡಿಗೆಗೆ ಒತ್ತಾಯಿಸಿದ 35 ಆಟೋಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಎನ್.ಆರ್ ಸಂಚಾರ ಪೊಲೀಸರು ಮಾರುವೇಷದಲ್ಲಿ ಸಾರ್ವಜನಿಕರಂತೆ ಹೋಗಿ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಯಾಣಿಕರ ಹೇಳಿದ ಸ್ಥಳಕ್ಕೆ ಬಾರದ ಆಟೋಗಳ ವಿರುದ್ಧವೂ ಪ್ರಕರಣ ದಾಖಲು ಮಾಡಲಾಗಿದೆ.
ಎನ್ಆರ್ ಸಂಚಾರ ಠಾಣೆ ಇನ್ಸ್ ಪೆಕ್ಟರ್ ದಿವಾಕರ್ ನೇತೃತ್ವದಲ್ಲಿ ರೈಲು ನಿಲ್ದಾಣ, ಕೆ.ಆರ್ ಆಸ್ಪತ್ರೆ, ಮಿಲಾದ್ ಪಾರ್ಕ್ ಮತ್ತು ಆರ್.ಎಂ.ಸಿ ವೃತ್ತ ಸೇರಿದಂತೆ ಹಲವು ಕಡೆ ಕಾರ್ಯಾಚರಣೆ ನಡೆಸಿ ಒಟ್ಟು 13 ಸಾವಿರ ರೂಪಾಯಿ ದಂಡ ವಸೂಲಿ ಮಾಡಲಾಗಿದೆ.