– ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ರಾಜವಂಶಸ್ಥ
ಮಂಡ್ಯ: ಮೈಸೂರು-ಕೊಡಗು (Mysuru-Kodagu Lok Sabha) ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Wadiyar) ಟೆಂಪಲ್ ರನ್ ಮಾಡುತ್ತಿದ್ದಾರೆ. ಶ್ರೀಕ್ಷೇತ್ರ ಆದಿಚುಂಚನಗಿರಿ ಯದುವೀರ್ ಭೇಟಿ ನೀಡಿದ್ದಾರೆ.
ಶ್ರೀ ಕ್ಷೇತ್ರದ ಕಾಲಭೈರವೇಶ್ವರ ಸ್ವಾಮಿ (Kalabhairaveshwara Swami Adichunchanagiri Temple) ದರ್ಶನ ಪಡೆದು ಯದುವೀರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಯದುವೀರ್ ಆಗಮನದ ವೇಳೆ ಪೀಠಾಧಿಪತಿ ಶ್ರೀ ನಿರ್ಮಲಾನಂದ ಸ್ವಾಮೀಜಿ (Nirmalananda Swamiji) ವಿಶೇಷ ಪೂಜಾ ಕೈಂಕರ್ಯ ನಡೆಸಿದರು. ಇದನ್ನೂ ಓದಿ: ಯದುವೀರ್ ವಿರುದ್ಧ ತುಟಿ ಬಿಚ್ಚಬೇಡಿ: ‘ಕೈ’ ನಾಯಕರಿಗೆ ಸಿಎಂ ಎಚ್ಚರಿಕೆ
ಯದುವೀರ್ ದೇವಾಲಯಕ್ಕೆ ಆಗಮಿಸುತ್ತಿದ್ದಂತೆ ಯದುವೀರ್ಗೆ ದೇಗುಲದಿಂದ ಪೂರ್ಣಕುಂಭ ಸ್ವಾಗತ ಕೋರಲಾಯಿತು. ದೇವರ ದರ್ಶನದ ಬಳಿಕ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಜೊತೆ ಮಾತುಕತೆ ನಡೆಸಿದರು.
ಅಲ್ಲದೇ, ಆದಿಚುಂಚನಗಿರಿಗೆ ತುಮಕೂರು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ (V.Somanna) ಕೂಡ ಭೇಟಿ ನೀಡಿ ಕಾಲಭೈರವೇಶ್ವರನ ದರ್ಶನ ಪಡೆದರು. ಬಾಲಗಂಗಾಧರನಾಥ ಸ್ವಾಮೀಜಿಯವರ ಗದ್ದುಗೆಗೆ ಪುಷ್ಪ ನಮನ ಸಲ್ಲಿಸಿದರು. ಇದನ್ನೂ ಓದಿ: ಮೈಸೂರಿನಿಂದ ಲಕ್ಷ್ಮಣ್, ಚಾಮರಾಜನಗರದಿಂದ ಹೆಚ್.ಸಿ.ಮಹದೇವಪ್ಪ ಪುತ್ರನಿಗೆ ʼಕೈʼ ಟಿಕೆಟ್ ಫೈನಲ್?
ದೇವರ ದರ್ಶನದ ಬಳಿಕ ಶ್ರೀಕ್ಷೇತ್ರದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಶ್ರೀಗಳ ಆಶೀರ್ವಾದ ಪಡೆದು ಕೆಲಹೊತ್ತು ಮಾತುಕತೆ ನಡೆಸಿದರು. ವಿ.ಸೋಮಣ್ಣಗೆ ಮಾಜಿ ಸಚಿವ ಕೆ.ಗೋಪಾಲಯ್ಯ, ಶಾಸಕ ಸುರೇಶಗೌಡ ಸಾಥ್ ನೀಡಿದರು.