ಮೈಸೂರು: ನಟ ದರ್ಶನ್ಗೆ ಅನಾರೋಗ್ಯದಿಂದ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಮುಂಜಾನೆ 4 ಗಂಟೆ ವೇಳೆಗೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ದರ್ಶನ್ ಅವರಿಗೆ ಕೊಲಂಬಿಯಾ ಏಷಿಯಾ ಆಸ್ಪತ್ರೆ ಸ್ಪೇಷಲ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಗ್ರಾಸ್ಟ್ರಿಕ್ ಪರಿಣಾಮ ತೀವ್ರ ಥರವಾದ ಹೊಟ್ಟೆನೋವಿನಿಂದಾಗಿ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದರ್ಶನ್ ಅವರಿಗೆ ಒಂದು ದಿನ ಚಿಕಿತ್ಸೆ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವೈದ್ಯರ ಸಲಹೆ ಮೇರೆಗೆ ಇಂದು ಆಸ್ಪತ್ರೆಯಲ್ಲೇ ಡಿ ಬಾಸ್ ಉಳಿದಿದ್ದಾರೆ. ವೈದ್ಯರ ಸಲಹೆ ಮೇರೆಗೆ ಒಂದು ದಿನ ವಿಶ್ರಾಂತಿ ಪಡೆಯುತ್ತಿದ್ದಾರೆ.
ದರ್ಶನ್ ಅವರ ಬಹು ನಿರೀಕ್ಷಿತ ಚಿತ್ರ ರಾಬರ್ಟ್ ಸಿನಿಮಾದ ಹಾಡು ಮಂಗಳವಾರ ಬಿಡುಗಡೆಯಾಗಿತ್ತು. ಈ ಹಾಡಿಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದ್ದು, ಬಿಡುಗಡೆಯಾದ ಒಂದೇ ದಿನಕ್ಕೆ 11 ಲಕ್ಷ ವೀಕ್ಷಣೆ ಕಂಡಿದೆ. ಈ ವಿಚಾರವಾಗಿ ನಿನ್ನೆ ಟ್ವೀಟ್ ಮಾಡಿದ್ದ ದರ್ಶನ್ ಅವರು, ನೀವೆಲ್ಲರೂ ಕಾತುರದಿಂದ ಕಾಯುತ್ತಿರುವ ನಮ್ಮ ರಾಬರ್ಟ್ ಚಿತ್ರದ ಮೊದಲ ಹಾಡು ಬಾ ಬಾ ಬಾ ನಾನ್ ರೆಡಿ ಈಗ ನಿಮ್ಮ ಮುಂದೆ. ನೋಡಿ ಆಶೀರ್ವದಿಸಿ ಎಂದು ಟ್ವೀಟ್ ಮಾಡಿದ್ದರು.
ನೀವೆಲ್ಲರೂ ಕಾತುರದಿಂದ ಕಾಯುತ್ತಿರುವ ನಮ್ಮ #Roberrt ಚಿತ್ರದ ಮೊದಲ ಹಾಡು #BaBaBaNaReady ಈಗ ನಿಮ್ಮ ಮುಂದೆ. ನೋಡಿ ಆಶೀರ್ವದಿಸಿ ????
ನಿಮ್ಮ ದಾಸ ದರ್ಶನ್https://t.co/pluX22G9Sx@aanandaaudio @TharunSudhir @umap30071 @UmapathyFilms @StarAshaBhat pic.twitter.com/QKQMLFe8WW
— Darshan Thoogudeepa (@dasadarshan) March 3, 2020