ಮೈಸೂರು: ನನಗೆ ಏನು ಆಗಿಲ್ಲ, ನಾನು ಫಸ್ಟ್ ಕ್ಲಾಸ್ ಆಗಿ ಇದ್ದೇನೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.
ಇಂದು ಮುಂಜಾನೆ ಅನಾರೋಗ್ಯದ ಸಮಸ್ಯೆಯಿಂದ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಸಂಜೆ ಡಿಸ್ಚಾರ್ಜ್ ಆಗಿರುವ ಅವರು ನನಗೆ `ಏನೂ ಆಗಿಲ್ಲ ನಾನು ಫಸ್ಟ್ ಕ್ಲಾಸ್ ಆಗಿ ಇದ್ದೀನಿ. ಸ್ವಲ್ಪ ಗ್ಯಾಸ್ಟ್ರಿಕ್ ಆಗಿತ್ತು ಅಷ್ಟೇ ಎಂದು ಮಾಧ್ಯಮದವರಿಗೆ ಹೇಳಿದ್ದಾರೆ.
ಇಂದು ಚಿಕಿತ್ಸೆ ಪಡೆದು ಹೊರ ಬಂದ ಡಿ ಬಾಸ್, ಸರಿಯಾದ ಸಮಯಕ್ಕೆ ಊಟ ತಿಂಡಿ ನೋಡಿಕೊಳ್ಳದ ಕಾರಣ ಸ್ವಲ್ಪ ಗ್ಯಾಸ್ಟ್ರಿಕ್ ಆಗಿತ್ತು. ನಮ್ಮ ಅಜೇಯ್ ಹೆಗಡೆ ಡಾಕ್ಟರ್ ಇದ್ದಾರೆ ಅವರು ನೋಡಿಕೊಂಡಿದ್ದಾರೆ. ಈಗ ಏನು ಅಗಿಲ್ಲ. ನಾನು ಆರಾಮಾಗಿ ಇದ್ದೀನಿ ಎಂದು ತಿಳಿಸಿದರು. ಹೊಟ್ಟೆ ನೋವಿನ ಹಿನ್ನೆಲೆಯಲ್ಲಿ ದರ್ಶನ್ ಆಸ್ಪತ್ರೆಗೆ ದಾಖಲಾಗಿದ್ದರು. ಗ್ಯಾಸ್ಟ್ರೋ ಎಂಟರಾಲಜಿಸ್ಟ್ ತಜ್ಞರಾದ ಡಾ.ಅನೂಪ್ ಆಳ್ವಾ ಅವರಿಗೆ ಚಿಕಿತ್ಸೆ ನೀಡಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಸ್ಪಷ್ಟಪಡಿಸಿದ್ದರು.
ಇಂದು ಮುಂಜಾನೆ 4 ಗಂಟೆ ವೇಳೆಗೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ದರ್ಶನ್ ಅವರಿಗೆ ಕೊಲಂಬಿಯಾ ಏಷಿಯಾ ಆಸ್ಪತ್ರೆ ಸ್ಪೆಷಲ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ದರ್ಶನ್ ಅವರಿಗೆ ಒಂದು ದಿನ ಚಿಕಿತ್ಸೆ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದರು. ವೈದ್ಯರ ಸಲಹೆ ಮೇರೆಗೆ ಇಂದು ಆಸ್ಪತ್ರೆಯಲ್ಲೇ ಡಿ ಬಾಸ್ ಸಂಜೆವರೆಗೂ ಉಳಿದಿದ್ದು ವಿಶ್ರಾಂತಿ ಪಡೆದಿದ್ದಾರೆ.