ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2023 (Mysuru Dasara 2023) ಬಹಳ ಅದ್ಧೂರಿಯಿಂದ ನಡೆಯುತ್ತಿದ್ದು, ಸಿಡಿಮದ್ದು ತಾಲೀಮು ವೇಳೆ ಅವಘಡವೊಂದು ನಡೆದಿದೆ.
ಸಿಡಿಮದ್ದು ಸಿಡಿದು ಸಿಬ್ಬಂದಿಗೆ ಸುಟ್ಟ ಗಾಯಗಳಾದ ಘಟನೆ ಭಾನುವಾರ ಪುಷ್ಪಾರ್ಚನೆ ರಿಹರ್ಸಲ್ ವೇಳೆ ನಡೆದಿದೆ. ನಿನ್ನೆ ಸಂಜೆ ಅರಮನೆ ಆವರಣದಲ್ಲಿ ಜಂಬೂಸವಾರಿಗೆ ಪುಷ್ಪಾರ್ಚನೆ ರಿಹರ್ಸಲ್ ನಡೆಸಲಾಗಿತ್ತು.
ಈ ವೇಳೆ ರಾಷ್ಟ್ರಗೀತೆ ನುಡಿಸಿ 21 ಸುತ್ತು ಕುಶಾಲತೋಪು ಸಿಡಿಸಲಾಗಿತ್ತು. ಈ ಕುಶಾಲತೋಪು ಸಿಡಿದು ಸಿಬ್ಬಂದಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ.
Web Stories