ಮೈಸೂರು: ಸಿಎಂ ಸಿದ್ದರಾಮಯ್ಯ (Siddaramaiah) ಅವರು ನಂದಿ ಧ್ವಜಕ್ಕೆ (Nandi Dhwaja) ಪೂಜೆ ಸಲ್ಲಿಸಿದ್ದಾರೆ. ಮಧ್ಯಾಹ್ನ1 ರಿಂದ 18ರ ಶುಭ ಧನುರ್ ಲಗ್ನದಲ್ಲಿ ಪೂಜೆ ನೆರವೇರಿದೆ.
ಕೋಟೆ ಆಂಜನೇಯ ಸ್ವಾಮಿ ಮುಂಭಾಗದಲ್ಲಿ ನಂದಿಧ್ವಜಕ್ಕೆ ಪೂಜೆ ನೆರವೇರಿಸಲಾಯಿತು. ಈ ವೇಳೆ ಸಿಎಂ ಈಡುಗಾಯಿ ಒಡೆದರು. ಎರಡು ಸಲ ವಿಫಲವಾಗಿ, ಮೂರನೇ ಬಾರಿಗೆ ಈಡುಗಾಯಿ ಒಡೆಯುವಲ್ಲಿ ಅವರು ಯಶಸ್ವಿಯಾದರು. ಇದನ್ನೂ ಓದಿ: ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದ ಯದುವೀರ್ ಒಡೆಯರ್
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವವಿಖ್ಯಾತ ಜಂಬೂ ಸವಾರಿ ಇಂದು ನಡೆಯಲಿದೆ. ಈಗಾಗಲೇ ನಂದಿ ಧ್ವಜ ಪೂಜೆ ನೆರವೇರಿದೆ. ಎಲ್ಲಾ ಪ್ರವಾಸಿಗರಿಗೆ ಸ್ವಾಗತ ಕೋರುತ್ತೇನೆ.
ಹಿಂದೆ ಸಿಎಂ ಆಗಿದ್ದಾಗಲೂ ನಾನು ದಸರಾದಲ್ಲಿ ಭಾಗಿಯಾಗಿದ್ದೇನೆ. ಸಿಎಂ ಆಗಿ 8 ಸಲ ದಸರಾಕ್ಕೆ ಬಂದಿದ್ದೇನೆ. ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ. ರಾಜ್ಯದ ಜನ ಎಲ್ಲರೂ ಖುಷಿಯಾಗಿದ್ದರೆ ಸರ್ಕಾರ ಸಹ ಸಂತೋಷವಾಗಿರುತ್ತದೆ ಎಂದಿದ್ದಾರೆ.
ಇದಕ್ಕೂ ಮುನ್ನ ಅರಮನೆ ಬಲರಾಮ ದ್ವಾರದ ಕೋಡಿ ಸೋಮೇಶ್ವರ ದೇವಾಲಯದ ಬಳಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ದರಾಮಯ್ಯ ಅವರು ಪೂಜೆ ಸಲ್ಲಿಸುವ ವೇಳೆ ಸಚಿವ ಮಹಾದೇವಪ್ಪ, ಭೈರತಿ ಸುರೇಶ್ ಇನ್ನಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಜಂಬೂಸವಾರಿಗೆ ಕ್ಷಣಗಣನೆ – ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ ಸೇರಿ 150ಕ್ಕೂ ಹೆಚ್ಚು ಕಲಾತಂಡಗಳು ಭಾಗಿ