ಸೇನೆಯ ರಕ್ಷಣಾ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡಿದ ಮೈಸೂರಿನ ವೈದ್ಯ

Public TV
1 Min Read
MYS DOCTORS FUND

ಮೈಸೂರು: ಭಾರತೀಯ ಸೇನೆಯ ರಕ್ಷಣಾ ನಿಧಿಗೆ ಮೈಸೂರಿನ ವೈದ್ಯರೊಬ್ಬರು ಬರೋಬ್ಬರಿ 1 ಕೋಟಿ ರೂ. ಹಣವನ್ನು ದೇಣಿಗೆ ನೀಡುವ ಮೂಲಕ ಯೋಧರ ಕುಟುಂಬಕ್ಕೆ ಸಹಾಯ ಮಾಡಿದ್ದಾರೆ.

ಜಿಲ್ಲೆಯ ಗೋಕುಲಂ ಬಡಾವಣೆಯಲ್ಲಿರುವ ಆದಿತ್ಯಾ ಅಧಿಕಾರಿ ಆಸ್ಪತ್ರೆ ಮುಖ್ಯಸ್ಥ ಡಾ. ಚಂದ್ರಶೇಖರ್ ಅವರು ಯೋಧರಿಗಾಗಿ ಸಹಾಯಧನವನ್ನು ನೀಡಿದ್ದಾರೆ. ಚಂದ್ರಶೇಖರ್ ಅವರು ಬರೋಬ್ಬರಿ 1 ಕೋಟಿ ರೂ. ಹಣವನ್ನು ದೇಣಿಗೆ ರೂಪದಲ್ಲಿ ಭಾರತೀಯ ಸೇನೆಯ ರಕ್ಷಣಾ ನಿಧಿಗೆ ನೀಡಿದ್ದಾರೆ.

IndianArmy jk boy

ಬುಧವಾರ ಖಾಸಗಿ ಹೋಟೆಲ್‍ನಲ್ಲಿ ನಡೆದ ಪ್ರಬುದ್ಧರಗೋಷ್ಠಿ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್‍ರವರಿಗೆ ದೇಣಿಗೆ ಹಣದ ಚೆಕ್ ಅನ್ನು ಡಾ.ಚಂದ್ರಶೇಖರ್ ಅವರು ಹಸ್ತಾಂತರಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *