ಪತ್ನಿ ಕೊಲ್ಲಲು ಯತ್ನಿಸಿದ ಸರ್ಕಾರಿ ಅಧಿಕಾರಿ- ಪೋಷಕರ ಆರೋಪ

Public TV
1 Min Read
mys

ಮೈಸೂರು: ಸರ್ಕಾರಿ ಅಧಿಕಾರಿಯೊಬ್ಬ ತನ್ನ ಪತ್ನಿಯನ್ನು ನೇಣು ಬಿಗಿದು ಕೊಲೆ ಮಾಡಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ.

ನಾಗವೇಣಿ (41) ಈಗ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದು, ಪತಿಯೇ ಈ ಕೃತ್ಯ ಎಸಗಿದ್ದಾನೆ ಎಂದು ಪತ್ನಿಯ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.

ವೆಂಕಟಪ್ಪಗೆ 1997ರಲ್ಲಿ ನಾಗವೇಣಿಯನ್ನು ಮದುವೆ ಮಾಡಿಕೊಡಲಾಗಿತ್ತು. ನಾಗವೇಣಿ  ಪತಿ ವೆಂಕಟಪ್ಪ, ಹುಣಸೂರು ತಾಲೂಕಿನಲ್ಲಿ ಸಹಾಯಕ ಶಿಶುಯೋಜನಾ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾನೆ. ಮೈಸೂರು ತಾಲೂಕಿನ ಸೋಮನಾಥಪುರ ಗ್ರಾಮದಲ್ಲಿ ಈ ದಂಪತಿ ವಾಸವಿದ್ದರು.

police 4

ಆದರೆ ಈಗ ನಾಗವೇಣಿ ಪೋಷಕರು, ಅಳಿಯ ವೆಂಕಟಪ್ಪ ಕೆಲ ತಿಂಗಳಿನಿಂದ ಕುಡಿದು ಬಂದು ಮಗಳಿಗೆ ಹೊಡೆದು ಕಿರುಕುಳ ಕೊಡುತ್ತಿದ್ದನು. ಅಲ್ಲದೇ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದನು. ಈ ಬಗ್ಗೆ ನಮ್ಮ ಮಗಳು ನಮಗೆ ಹೇಳಿದ್ದಳು. ನಂತರ ನಾವು ಅಳಿಯನಿಗೆ ಬುದ್ಧಿವಾದ ಹೇಳಿದ್ದೆವು. ಆದರೆ ಆತ ನಮಗೆ ಅವಾಚ್ಯ ಪದದಿಂದ ಬೈದಿದ್ದನು. ಈಗ ಆತನೇ ಮಗಳಿಗೆ ನೇಣು ಬಿಗಿದು ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಈ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *