ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ನಡೆದಿದ್ದ ಮರ್ಯಾದ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಯುವತಿಗೆ ತನ್ನ ಸಾವು ಯಾರಿಂದ ಬರುತ್ತದೆ ಎಂಬ ವಿಚಾರ ಮೊದಲೇ ತಿಳಿದುಬಂದಿದ್ದು, ತನ್ನ ಸಾವಿಗೆ ಕಾರಣ ಯಾರೆಂದು ಬಹಿರಂಗ ಪಡಿಸಿರುವ ಆಡಿಯೋ ಲಭ್ಯವಾಗಿದೆ.
ಹೌದು, ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ ಅಪ್ರಾಪ್ತ ಮಗಳನ್ನು ತಂದೆ ಮತ್ತು ತಾಯಿ ಇಬ್ಬರು ಸೇರಿ ಕೊಲೆ ಮಾಡಿದ್ದರು. ದ್ವಿತೀಯ ಪಿಯು ವಿದ್ಯಾರ್ಥಿನಿ ಶಾಲಿನಿ (17) ಮಂಜುನಾಥ್ ಅವರನ್ನು ಪ್ರೀತಿಸುತ್ತಿದ್ದಳು. ಈ ವಿಚಾರ ತಿಳಿದು ತಂದೆ ಸುರೇಶ್ ಹಾಗೂ ತಾಯಿ ಬೇಬಿ ಮಗಳನ್ನು ಹತ್ಯೆಗೈದಿದ್ದರು. ನಂತರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನು ಕೊಂದ ಪೋಷಕರು
ಇದೀಗ ಶಾಲಿನಿ ಸಾಯುವ ಮುನ್ನ ತನ್ನ ಪ್ರಿಯಕರನೊಂದಿಗೆ ಮಾತನಾಡಿರುವ ಆಡಿಯೋ ಪೊಲೀಸರಿಗೆ ಲಭ್ಯವಾಗಿದ್ದು, ನಾನೇನಾದರೂ ಸತ್ತರೆ ಅದಕ್ಕೆ ನಮ್ಮ ಅಪ್ಪ ಅಮ್ಮನೇ ಕಾರಣ. ನನ್ನನ್ನ ಕಿಡ್ನಾಪ್ ಮಾಡಿಸುವ ಪ್ಲ್ಯಾನ್ ಮಾಡಿದ್ದಾರೆ. ಬಾಲ ಮಂದಿರದಿಂದ ನೀನು ನಿನ್ನಷ್ಟದ ಹಾಗೇ ಇರು ಎಂದು ಕರೆದುಕೊಂಡು ಬಂದರು. ಆದರೆ ಪಾಂಡವಪುರದಲ್ಲಿ ಕೆಲಸಕ್ಕೆ ಕಳುಹಿಸುತ್ತಿದ್ದಾರೆ ಎಂದು ಈ ಕುರಿತಂತೆ ಪಿರಿಯಾಪಟ್ಟಣ ಪೊಲೀಸರಿಗೆ ಮೂರು ಪುಟಗಳ ಸುದೀರ್ಘ ಪತ್ರವನ್ನು ಯುವತಿ ಬರೆದಿದ್ದಾಳೆ. ಅಲ್ಲದೇ ತಾನು ಮಾತನಾಡಿರುವುದನ್ನು ರೆಕಾರ್ಡ್ ಮಾಡಿ ಪಿರಿಯಾಪಟ್ಟಣ ಪೊಲೀಸರಿಗೆ ಕೊಡುವಂತೆ ಪ್ರಿಯಕರ ಮಂಜುನಾಥ್ಗೂ ಕೂಡ ತಿಳಿಸಿದ್ದಾಳೆ. ಇದನ್ನೂ ಓದಿ: 105 ಗಂಟೆಯಲ್ಲಿ 75 ಕಿ.ಮೀ ಹೆದ್ದಾರಿ ನಿರ್ಮಿಸಿ ಗಿನ್ನಿಸ್ ದಾಖಲೆ ಬರೆದ NHAI