ಮೈಸೂರು: ಸಾಮೂಹಿಕ ಅತ್ಯಾಚಾರದ ಆರೋಪಿಗಳನ್ನು ಬಂಧಿಸಿದ್ದು, ಇಂತವರನ್ನು ಎನ್ ಕೌಂಟರ್ ಮಾಡಬೇಕು ಎಂದು ಶಾಸಕ ಸಾ.ರಾ ಮಹೇಶ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾಂಗ್ ರೇಪ್ ವಿಚಾರ ಇಡೀ ಮೈಸೂರು ತಲೆತಗ್ಗಿಸುವ ವಿಚಾರವಾಗಿದೆ. ಬೆಳಗ್ಗೆ ಐದು ಜನರನ್ನು ಬಂಧಿಸಿದ್ದಾರೆ ಎಂದು ಮಾಹಿತಿ ಬಂದಿದೆ. ಇವರ ವಿರುದ್ಧ ಪೊಲೀಸರು ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಅತ್ಯಾಚಾರಿಗಳನ್ನು ಎನ್ಕೌಂಟರ್ ಮಾಡಬೇಕು. ಸರ್ಕಾರ ಎನ್ಕೌಂಟರ್ ಮಾಡಲು ಪೊಲೀಸರಿಗೆ ಸೂಚನೆ ನೀಡಬೇಕು ಎಂದು ಇದೇ ವೇಳೆ ಸಾ.ರಾ ಮಹೇಶ್ ಸಲಹೆಯಿತ್ತರು. ಇತ್ತ ಆರೋಪಿಗಳ ಬಂಧನವಾದ ವಿಚಾರ ತಯಿಳಿಯುತ್ತಿದ್ದಂತೆಯೇ ಸಾರ್ವಜನಿಕರು ಕೂಡ ಆರೋಪಿಗಳನ್ನು ಗಲ್ಲಿಗೇರಿಸಬೇಕು, ಎನ್ ಕೌಂಟರ್ ಮಾಡಬೇಕು ಎಂಬುದಾಗಿ ಆಕ್ರೋಶ ಹೊರಹಾಕುತ್ತಿದ್ದಾರೆ. ಇದನ್ನೂ ಓದಿ: ದರೋಡೆ ಮಾಡಲು ಹೋಗಿ ಏನೂ ಸಿಗದಿದ್ದಾಗ ಯುವತಿಯ ಅತ್ಯಾಚಾರವೆಸಗಿದ ಕಾಮುಕರು!
ಆಗಸ್ಟ್ 24ರಂದು ನಡೆದಿದ್ದ ಗ್ಯಾಂಗ್ ರೇಪ್ ಸಂಬಂಧ 80 ಮಂದಿಯಿದ್ದ ಪೊಲೀಸರ 5 ತಂಡ ವಿವಿಧೆಡೆಗಳಲ್ಲಿ ಆರೋಪಿಗಳಿಗಾಗಿ ಹುಡುಕಾಟ ನಡೆಸಿತ್ತು. ಇಂದು ಬೆಳಗ್ಗೆ ಆರೋಪಿಗಳು ತಮಿಳುನಾಡಿನ ಸತ್ಯಮಂಗಲದಲ್ಲಿ ಲಾಕ್ ಆದರು. ಸದ್ಯ ಐವರು ಆರೋಪಿಗಳನ್ನ ಮೈಸೂರಿಗೆ ಕರೆತಂದಿರುವ ಪೊಲೀಸರು, ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ನಂತರ ನ್ಯಾಯಾಧೀಶರ ಎದುರು ಹಾಜರು ಪಡಿಸಲಿದ್ದಾರೆ. ಆರೋಪಿಗಳಲ್ಲಿ ನಾಲ್ವರು ತಮಿಳುನಾಡು ಮೂಲದವರಾದವರಾಗಿದ್ದು, ಓರ್ವನನ್ನು ಚಾಮರಾಜನಗರದವನು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಕ್ಯಾನ್ಸರ್ ರೋಗ 4ನೇ ಹಂತ ತಲುಪಿದಾಗ ಏನಾಗುತ್ತೋ ಹಾಗೆ ಅತ್ಯಾಚಾರಿಗಳಿಗೆ ಶಿಕ್ಷೆಯಾಗ್ಬೇಕು: ವಿನಯ್ ಗುರೂಜಿ
ಪ್ರಕರಣ ನಡೆದ ಸಂದರ್ಭದಲ್ಲಿ ಈ ಸ್ಥಳಕ್ಕೆ ಅಪರಿಚಿತರು ಬರಲು ಸಾಧ್ಯವಿಲ್ಲ ಯಾರು ಪರಿಚಿತರು ಮಾತ್ರ ಬರಲು ಸಾಧ್ಯ ಎಂಬ ಮಾಹಿತಿ ಮೇರೆಗೆ ತನಿಖೆಗೆ ಪೊಲೀಸರು ಮುಂದಾಗಿದ್ದರು. ಇತ್ತ ಯುವಕ ಹಾಗೂ ಯುವತಿ ಮೂರು ದಿನ ಅದೇ ಸ್ಥಳದಲ್ಲಿ ಕುಳಿತುಕೊಂಡು ಮಾತನಾಡುತ್ತಿರುವುದನ್ನು ಗಮನಿಸಿ, ನಾಲ್ಕನೇ ದಿನ ಕಾಮುಕರು ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಬಿಯರ್ ಬಾಟ್ಲಿ, ಬಸ್ ಟಿಕೆಟ್ ಆಧರಿಸಿ ಅತ್ಯಾಚಾರಿಗಳ ಬಂಧನ