Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಸೂರು ರಾಜರಿಗೆ ಪುತ್ರ ಸಂತಾನ: ಅಲಮೇಲಮ್ಮ ಶಾಪ ವಿಮೋಚನೆ ಆಯ್ತಾ? ಶಾಪ ನೀಡಿದ್ದು ಯಾಕೆ?
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಮೈಸೂರು ರಾಜರಿಗೆ ಪುತ್ರ ಸಂತಾನ: ಅಲಮೇಲಮ್ಮ ಶಾಪ ವಿಮೋಚನೆ ಆಯ್ತಾ? ಶಾಪ ನೀಡಿದ್ದು ಯಾಕೆ?

Public TV
Last updated: December 7, 2017 2:27 pm
Public TV
Share
2 Min Read
MYS YADUVEER
SHARE

ಮೈಸೂರು: ಬರೋಬ್ಬರಿ 64 ವರ್ಷಗಳ ಬಳಿಕ ಮೈಸೂರಿನ ಯದುವಂಶಕ್ಕೆ ಸಂತಾನ ಪ್ರಾಪ್ತಿಯಾಗಿದೆ. ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ರಾಣಿ ತ್ರಿಷಿಕಾ ಕುಮಾರಿಗೆ ಪುತ್ರ ಸಂತಾನ ಪ್ರಾಪ್ತಿಯಾಗಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರಾಣಿ ತ್ರಿಷಿಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಹೀಗಾಗಿ ಅರಮನೆಯಲ್ಲಿ ಎಲ್ಲಿಲ್ಲದ ಸಂಭ್ರಮ ಮನೆಮಾಡಿದೆ. ಮೈಸೂರು ಯದುವಂಶಕ್ಕೆ 1953ರಲ್ಲಿ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಜನನವಾದ ನಂತರ ಇಲ್ಲಿಯವರೆಗೆ ಯಾವುದೇ ಗಂಡು ಮಕ್ಕಳು ಜನಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಯದುವೀರ್ ಅವರನ್ನು 2013ರಲ್ಲಿ ಸಂಬಂಧಿಕರಲ್ಲೇ ದತ್ತು ತೆಗೆದುಕೊಳ್ಳಲಾಗಿತ್ತು. 2016 ಜೂನ್ 27ರಂದು ತ್ರಿಷಿಕಾ ಕುಮಾರಿ ಜೊತೆ ಮದುವೆ ಮಾಡಲಾಗಿತ್ತು.

YADUVEER SON 1 1

ಬುಧವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತ್ರಿಷಿಕಾ ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಮಗು ಸುಮಾರು 9.50ರ ಸಮಯದಲ್ಲಿ ಪುನರ್ವಸು ನಕ್ಷತ್ರ ಹಾಗೂ ಮಿಥುನ ರಾಶಿಯಲ್ಲಿ ಜನಿಸಿದೆ. ಇದು ಶ್ರೀರಾಮ ಚಂದ್ರ ಜನಿಸಿದ ನಕ್ಷತ್ರವಾಗಿದೆ ಎನ್ನುವುದು ವಿಶೇಷ.

ದೇವಸ್ಥಾನದಲ್ಲಿ ವಿಶೇಷ ಪೂಜೆ:
ಯದುವಂಶಕ್ಕೆ ನೂತನ ವಾರುಸುದಾರ ಜನನವಾದ ಹಿನ್ನೆಲೆಯಲ್ಲಿ ಶೃಂಗೇರಿಯ ಶಾರದಾ ಪೀಠದಲ್ಲಿ ಹಾಗೂ ಮನೆದೇವರಾದ ಪರಕಾಲ ಸ್ವತಂತ್ರ ಮಠದಲ್ಲಿ ವಿಶೇಷ ಪೂಜೆ ನೇರವೇರಿಸಲಾಗಿದೆ. ಅರಮನೆಯೊಳಗಿನ ದೇವಾಲಯಗಳಿಗೆ ವಿಶೇಷ ಪೂಜೆ ಸಲ್ಲಿಸಲಾಗಿದ್ದು, ಮನೆದೇವರಾದ ಚಾಮುಂಡಿ ಬೆಟ್ಟದಲ್ಲೂ ವಿಶಿಷ್ಟ ಪೂಜೆ ನಡೆಯುತ್ತಿದೆ. ನೂತನ ಅತಿಥಿಯ ಆಗಮನದಿಂದ ಅರಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದು, ಅರಸು ಮನೆತನದವರು ಅರಮನೆಗೆ ಆಗಮಿಸುವ ಜನರಿಗೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

TRISHIKA 2

ದಸರಾ ಸಂದರ್ಭದಲ್ಲಿ ತ್ರಿಷಿಕಾ ಗರ್ಭ ಧರಿಸಿದ ವಿಚಾರ ತಿಳಿದು ಯದುವಂಶಕ್ಕೆ ತಟ್ಟಿದ್ದ ಅಲಮೇಲಮ್ಮ ಶಾಪ ವಿಮೋಚನೆಯಾಗಿದೆ ಎನ್ನುವ ಸುದ್ದಿಗಳು ಕೇಳಿ ಬಂದಿತ್ತು. ಆದರೆ ಈ ಶಾಪಕ್ಕೂ ಗರ್ಭ ಧರಿಸಿದ್ದಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಇತಿಹಾಸಕಾರರು ಹೇಳುತ್ತಾರೆ. ಶಾಪದ ಪ್ರಕಾರ ದತ್ತು ಮಕ್ಕಳಿಗೆ ಮಕ್ಕಳಾಗುತ್ತದೆ. ಆದರೆ ದತ್ತು ಪುತ್ರರಿಗೆ ಆದ ಮಕ್ಕಳಿಗೆ ಸಂತಾನ ಯೋಗ ಇಲ್ಲದೇ ಇರುವ ವಿಚಾರ ಇತಿಹಾಸ ಪುಟದಲ್ಲಿ ಸಿಗುತ್ತದೆ.

ಅಲಮೇಲಮ್ಮ ಶಾಪ ಏನು?
ಹಿಂದೆ ಶ್ರೀರಂಗಪಟ್ಟಣವನ್ನು ವಿಜಯನಗರದ ಪ್ರತಿನಿಧಿಯಾಗಿ ಶ್ರೀರಂಗರಾಯ ರಾಜ್ಯಭಾರ ಮಾಡುತ್ತಿದ್ದ ವೇಳೆ ಆತನಿಗೆ ಬೆನ್ನುಪಣಿ ಎಂಬ ಕಾಯಿಲೆ ಬಂದಿತ್ತು. ಶ್ರೀರಂಗರಾಯ ತನ್ನ ಕಾಯಿಲೆ ನಿವಾರಣೆ ಮಾಡಿಕೊಳ್ಳಲು ತನ್ನ ಮಡದಿಯಾಗಿದ್ದ ಅಲಮೇಲಮ್ಮ ಜೊತೆ ತಲಕಾಡಿನ ವೈದ್ಯನಾಥೇಶ್ವರ ದೇವಾಲಯಕ್ಕೆ ತೆರಳಿದ್ದ. ರಾಜ ಶ್ರೀರಂಗರಾಯ ಪ್ರಾಂತ್ಯ ಬಿಟ್ಟು ಹೋಗಿರುವ ವಿಚಾರ ತಿಳಿದ ಮೈಸೂರು ಒಡೆಯರು, ಈ ಸಂದರ್ಭದಲ್ಲಿ ಶ್ರೀರಂಗಪಟ್ಟಣವನ್ನು ಗೆಲ್ಲಲು ಸುವರ್ಣ ಸಮಯ ಎಂದು ತಿಳಿದು ರಾಜನಿಲ್ಲದ ವೇಳೆಯಲ್ಲಿ ಏಕಾಏಕಿ ಆಕ್ರಮಣ ಮಾಡಿ ಕೊನೆಗೆ ಶ್ರೀರಂಗಪಟ್ಟಣವನ್ನು ವಶಪಡಿಸಿಕೊಂಡಿದ್ದರು.

MYS SIMATHAN PHOTOS AV 1

ತಲಕಾಡಿನಲ್ಲಿದ್ದ ರಾಜ ಶ್ರಿರಂಗರಾಯ ಈ ವಿಚಾರ ತಿಳಿದು ಅಲ್ಲಿಯೇ ಮೃತಪಡುತ್ತಾನೆ. ಇನ್ನು ಮಡದಿ ಅಲಮೇಲಮ್ಮ ರಾಜ್ಯ, ಪತಿ ಇಬ್ಬರನ್ನು ಕಳೆದುಕೊಂಡು ಮಾಲಂಗಿಯಲ್ಲಿಯೇ ಉಳಿದುಕೊಂಡಿರುತ್ತಾಳೆ. ಆದರೆ ರಾಜ ಮನೆತನದವರು ಅವರ ಮೇಲೂ ದಾಳಿ ಮಾಡಲು ನಿರ್ಧರಿಸುತ್ತಾರೆ. ಒಡೆಯರು ತನ್ನ ಮೇಲು ಆಕ್ರಮಣ ಮಾಡಲು ನಿರ್ಧಾರ ಮಾಡಿದ ವಿಚಾರವನ್ನು ತಿಳಿದ ಅಲಮೇಲಮ್ಮ “ತಲಕಾಡು ಮರಳಾಗಿ, ಮಾಲಂಗಿ ಮಡುವಾಗಿ, ಮೈಸೂರು ರಾಜರಿಗೆ ಮಕ್ಕಳಾಗದಿರಲಿ” ಎಂದು ಶಾಪ ಹಾಕಿ ತಲಕಾಡಿನಲ್ಲಿ ಹರಿಯುತ್ತಿದ್ದ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಾಳೆ.

ದಸಾರೆಯಲ್ಲಿ ಪೂಜೆ:
ಅಲಮೇಲಮ್ಮ ನೀಡಿದ ಶಾಪದ ವಿಮೋಚನೆಗೆ ಮೈಸೂರು ಅರಸರು ಅಂದಿನಿಂದ ಇಲ್ಲಿಯವರೆಗೂ ದಸರಾ ಉತ್ಸವದಲ್ಲಿ ಅಲಮೇಲಮ್ಮ ಮೂರ್ತಿಗೆ ಪೂಜೆ ಸಲ್ಲಿಸುತ್ತಾ ಬರುತ್ತಿದ್ದಾರೆ. ಆದರೆ ಸುಮಾರು ಯುಗಗಳೇ ಕಳೆದರೂ ಶಾಪದಿಂದ ಮಾತ್ರ ಮುಕ್ತಿ ಪಡೆಯಲು ಸಾಧ್ಯವಾಗಿಲ್ಲ. ಸಂತಾನ ಭಾಗ್ಯ ಇಲ್ಲದ ಕಾರಣ ರಾಜರು ದತ್ತು ಮಗುವನ್ನು ಪಡೆದುಕೊಂಡು ವಂಶವನ್ನು ಮುನ್ನಡೆಸಿಕೊಂಡು ಬರುತ್ತಿದ್ದಾರೆ.

MYS SIMATHAN PHOTOS AV

MYS SIMATHAN PHOTOS AV 4

MYS SIMATHAN PHOTOS AV 2

TRISHIKA 6

TRISHIKA 4

TRISHIKA 7

TRISHIKA 4

TRISHIKA 8

TRISHIKA 10

TRISHIKA 11

trishika 12

TRISHIKA

TRISHIKA 5

YADUVEER SON 2

YADUVEER SON 3

YADUVEER SON 1

YADUVEER SON 5

YADUVEER SON 1 6

YADUVEER SON 1 5

yaduveer wodeyar 3

yaduveer wodeyar

 

Share This Article
Facebook Whatsapp Whatsapp Telegram
Previous Article 204731 small ವಿಡಿಯೋ: ಟ್ರಕ್ ಡಿಕ್ಕಿಯಾಗಿ ಕೆಲವು ಅಡಿಗಳಷ್ಟು ದೂರ ಎಳೆದುಕೊಂಡು ಹೋದ್ರೂ ಜೀವಂತವಾಗಿ ಎದ್ದು ಬಂದ್ಳು!
Next Article MYS PARWATHAMMA BIRTHDAY 1 small ಮೈಸೂರಿನ ಅನಾಥಾಶ್ರಮದಲ್ಲಿ ಪಾರ್ವತಮ್ಮ ರಾಜ್‍ಕುಮಾರ್ ಹುಟ್ಟುಹಬ್ಬ- ಮಕ್ಕಳಿಗೆ ಸಿಹಿ, ಬಟ್ಟೆ ಹಂಚಿದ ಪುನೀತ್ ದಂಪತಿ

Latest Cinema News

Pawan Kalyan 3
800 ರೂ. ಸಿನಿಮಾ ಟಿಕೆಟನ್ನ 1,29,999 ರೂ.ಗೆ ಖರೀದಿಸಿದ ʻಪವನ್‌ ಕಲ್ಯಾಣ್‌ʼ ಅಭಿಮಾನಿ
Cinema Latest Sandalwood
Zubeen Garg Funeral 1
ಗಾಯಕ ಜುಬೀನ್ ಗಾರ್ಗ್ ಅಂತಿಮ ಯಾತ್ರೆ ಲಿಮ್ಕಾ ದಾಖಲೆಗೆ ಸೇರ್ಪಡೆ
Cinema Latest National Top Stories
karnataka High Court
ಕೇಂದ್ರದ ಅಧಿಕಾರವನ್ನು ರಾಜ್ಯ ಬಳಸುತ್ತಿದೆ, ಜಾತಿ ಸಮೀಕ್ಷೆಗೆ ತಡೆ ನೀಡಿ | ಲಿಂಗಾಯತ, ಒಕ್ಕಲಿಗ, ಕೇಂದ್ರ, ರಾಜ್ಯದ ವಾದ ಏನು?
Bengaluru City Court Latest Main Post Sandalwood
Dhruva Sarja
ಧ್ರುವ ಸರ್ಜಾ ಜೀವನದ ಜಂಬೂ ಸವಾರಿ – ಸೆ.27ಕ್ಕೆ ಉದಯ ಟಿವಿಯಲ್ಲಿ ಪ್ರಸಾರ
Bengaluru City Cinema Latest Sandalwood
Give Karnataka Ratna to Ambareesh Request from fans
ಅಂಬರೀಶ್‌ಗೆ ಕರ್ನಾಟಕ ರತ್ನ ನೀಡಿ- ಅಭಿಮಾನಿಗಳಿಂದ ಮನವಿ
Cinema Karnataka Latest Sandalwood

You Might Also Like

Haris Rauf
Cricket

ವಿಮಾನ ಕ್ರ್ಯಾಶ್‌ ರೀತಿ ಸನ್ನೆ ಮಾಡಿದ ರೌಫ್‌ಗೆ ರುಬ್ಬಿದ ನೆಟ್ಟಿಗರು – ಆಪರೇಷನ್‌ ಸಿಂಧೂರಕ್ಕೆ ಹೋಲಿಸಿ ಕಿಡಿ

1 minute ago
M.P Renukacharya
Districts

ಸೋನಿಯಾ ಗಾಂಧಿ ಮೆಚ್ಚಿಸಲು ಸಿದ್ದರಾಮಯ್ಯ ಜಾತಿಗಣತಿ ಮಾಡ್ತಿದ್ದಾರೆ: ರೇಣುಕಾಚಾರ್ಯ ವಾಗ್ದಾಳಿ

4 minutes ago
Ship Headed To Somalia Loaded With Rice Sugar Catches Fire At Gujarat Jetty
Crime

ಗುಜರಾತ್‌ ಕಡಲ ತೀರದಲ್ಲಿ ಸೊಮಾಲಿಯಕ್ಕೆ ಹೊರಡಬೇಕಿದ್ದ ಹಡಗಿಗೆ ಬೆಂಕಿ – ಭಯಾನಕ ದೃಶ್ಯ ಕ್ಯಾಮೆರಾದಲ್ಲಿ ಸೆರೆ

42 minutes ago
train
Dharwad

ದಸರಾ 2025 | ಹುಬ್ಬಳ್ಳಿ-ಕೊಲ್ಲಂ ನಡುವೆ ವಿಶೇಷ ರೈಲು

44 minutes ago
air india express
Bengaluru City

ಬೆಂಗಳೂರು – ವಾರಣಾಸಿ ವಿಮಾನದಲ್ಲಿ ಟಾಯ್ಲೆಟ್ ಹುಡುಕುತ್ತಾ ಕಾಕ್‌ಪಿಟ್‌ಗೆ ಪ್ರವೇಶಿಸಲು ಯತ್ನಿಸಿದ ಪ್ರಯಾಣಿಕ!

50 minutes ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?