– ಗ್ಯಾರಂಟಿ ಸರ್ಕಾರದಿಂದ ಜನಕ್ಕೆ ಶಾಕ್; ಯಾವ್ಯಾವ ಬಸ್ ಟಿಕೆಟ್ ದರ ಎಷ್ಟಿದೆ?
ಬೆಂಗಳೂರು: ಗ್ಯಾರಂಟಿ ಸರ್ಕಾರ ರಾಜ್ಯದ ಜನರಿಗೆ ಮತ್ತೆ ದರ ಏರಿಕೆ ಬರೆ ಎಳೆದಿದೆ. ದಸರಾ ಪ್ರಯುಕ್ತ ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡಿದೆ. ಬರೋಬ್ಬರಿ 20 ರೂ. ಏರಿಕೆ ಮಾಡಿದ್ದು ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದಾರೆ.
ದಸರಾ ಹಬ್ಬದ ಪ್ರಯುಕ್ತ ಟಿಕೆಟ್ ದರ ಇಳಿಕೆ ಮಾಡಿ ದಸರಾ ವೀಕ್ಷಣೆಗೆ ಅವಕಾಶ ಮಾಡಿಕೊಡಬೇಕಾಗಿತ್ತು ಸರ್ಕಾರ. ಆದರೆ ಸಾರಿಗೆ ಇಲಾಖೆ ಮೈಸೂರು ಮಾರ್ಗದ ಕೆಎಸ್ ಆರ್ಟಿಸಿ ಬಸ್ ದರವನ್ನ ಏರಿಕೆ ಮಾಡಿದೆ. ಎಲ್ಲಾ ಕೆಎಸ್ ಆರ್ಟಿಸಿ ಬಸ್ ದರ ಬರೋಬ್ಬರಿ ೨೦ ರೂಪಾಯಿ ಏರಿಕೆ ಮಾಡಿದೆ. ಪ್ರಯಾಣಿಕರು ಟಿಕೆಟ್ ದರ ಏರಿಕೆ ಮಾಡಿರೋದಕ್ಕೆ ಆಕ್ರೋಶ ಹೊರ ಹಾಕ್ತಾ ಇದ್ದಾರೆ.
ಇನ್ನೂ ಕೆಎಸ್ಆರ್ಟಿಸಿ ವೇಗದೂತ, ತಡೆರಹಿತ, ರಾಜಹಂಸ, ಐರಾವತ ಸೇರಿದಂತೆ ಎಲ್ಲಾ ಬಸ್ಗಳ ದರ ಏರಿಕೆ ಆಗಿದೆ. ದಸರಾ ಮುಗಿಯುವವರೆಗೂ ದರ ಏರಿಕೆ ಇರಲಿದೆ.
ಯಾವ್ಯಾವ ಬಸ್ ಟಿಕೆಟ್ ದರ ಎಷ್ಟಿದೆ?
ಕರ್ನಾಟಕ ಸಾರಿಗೆ ವೇಗದೂತ – 170 ರೂ. ನಿಂದ 190 ರೂ.ಗೆ
ತಡೆ ರಹಿತ ಸಾರಿಗೆ – 210 ರಿಂದ 240 ರೂ.
ರಾಜಾಹಂಸ – 270 ರಿಂದ 290 ರೂ.
ಐರಾವತ – 430 ರಿಂದ 450 ರೂ.
ಐರಾವತ ಕ್ಲಬ್ ಕ್ಲಾಸ್ – 440 ರಿಂದ 460 ರೂ.
ದಸರಾ ಪ್ರಯುಕ್ತ ಟಿಕೆಟ್ ದರ ಇಳಿಕೆ ಮಾಡಿ ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಡಬೇಕು. ಆದ್ರೆ ಟಿಕೆಟ್ ದರ ಏರಿಕೆ ಮಾಡಿ ಪ್ರಯಾಣಿಕರಿಗೆ ಶಾಕ್ ನೀಡಿರೋದು ಸರಿಯಲ್ಲ.