Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಸೂರು ಕ್ಷೇತ್ರದಲ್ಲಿ 13 ಬಾರಿ ‘ಕೈ’, ನಾಲ್ಕು ಬಾರಿ ಕಮಲಕ್ಕೆ ಜೈ – ಒಂದೂ ಬಾರಿಯೂ ಗೆದ್ದಿಲ್ಲ ಜೆಡಿಎಸ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Election News | ಮೈಸೂರು ಕ್ಷೇತ್ರದಲ್ಲಿ 13 ಬಾರಿ ‘ಕೈ’, ನಾಲ್ಕು ಬಾರಿ ಕಮಲಕ್ಕೆ ಜೈ – ಒಂದೂ ಬಾರಿಯೂ ಗೆದ್ದಿಲ್ಲ ಜೆಡಿಎಸ್!

Election News

ಮೈಸೂರು ಕ್ಷೇತ್ರದಲ್ಲಿ 13 ಬಾರಿ ‘ಕೈ’, ನಾಲ್ಕು ಬಾರಿ ಕಮಲಕ್ಕೆ ಜೈ – ಒಂದೂ ಬಾರಿಯೂ ಗೆದ್ದಿಲ್ಲ ಜೆಡಿಎಸ್!

Public TV
Last updated: March 30, 2024 8:26 am
Public TV
Share
3 Min Read
Mysuru Lok Sabha
SHARE

ಮೈಸೂರು: ಲೋಕಸಭಾ ಕ್ಷೇತ್ರ (Lok Sabha Election 2024) ಮೊದಲ ಸಾರ್ವತ್ರಿಕ ಚುನಾವಣೆಯಿಂದಲೂ ಅಸ್ತಿತ್ವದಲ್ಲಿದೆ. ಈವರೆಗೆ ನಡೆದಿರುವ 17 ಚುನಾವಣೆಗಳ ಪೈಕಿ 13 ರಲ್ಲಿ ಕಾಂಗ್ರೆಸ್ ಹಾಗೂ ನಾಲ್ಕು ಬಾರಿ ಬಿಜೆಪಿ ಜಯಭೇರಿ ಬಾರಿಸಿವೆ. ಆದರೆ ಹಳೆಯ ಮೈಸೂರು (Mysuru) ಸೀಮೆಯಲ್ಲಿ ಕಾಂಗ್ರೆಸ್‌ನ ಸಾಂಪ್ರದಾಯಿಕ ಎದುರಾಳಿ ಎನಿಸಿಕೊಂಡಿರುವ ಜನತಾ ಪರಿವಾರ ಈವರೆಗೆ ಈ ಕ್ಷೇತ್ರದಲ್ಲಿ ಖಾತೆ ತೆರೆಯಲು ಸಾಧ್ಯವಾಗಿಲ್ಲ ಎಂಬುದು ಗಮನಾರ್ಹ.

mysuru lok sabha28 ವರ್ಷಗಳಿಂದ ಈ ಕ್ಷೇತ್ರದಲ್ಲಿ ತ್ರಿಕೋನ ಹೋರಾಟ ನಡೆಯುತ್ತಿತ್ತು. 2019 ರಲ್ಲಿ ಪ್ರಥಮ ಬಾರಿಗೆ ಕಾಂಗ್ರೆಸ್ (Congress) ಹಾಗೂ ಬಿಜೆಪಿ (BJP) ನಡುವೆ ನೇರ ಹೋರಾಟ. ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಜೆಡಿಎಸ್ (JDS) ಹಾಗೂ ಕಾಂಗ್ರೆಸ್ ಮೈತ್ರಿಕೂಟ ಹೊಂದಾಣಿಕೆ ಮಾಡಿಕೊಂಡು ಏಕ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು ಇದಕ್ಕೆ ಕಾರಣ. 1962 ರಿಂದ ಮೈಸೂರು ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಾದ ಕೃಷ್ಣರಾಜ, ಚಾಮರಾಜ, ನರಸಿಂಹರಾಜ, ಚಾಮುಂಡೇಶ್ವರಿ, ಹೆಚ್.ಡಿ. ಕೋಟೆ, ಹುಣಸೂರು, ಪಿರಿಯಾಪಟ್ಟಣ ಹಾಗೂ ಕೆ.ಆರ್. ನಗರಕ್ಕೆ ಸೀಮಿತವಾಗಿದ್ದ ಕ್ಷೇತ್ರ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆಗೆ ಕೊಲೆ ಬೆದರಿಕೆ ಪ್ರಕರಣ; ಇದು ಯಾರಾದ್ರೂ ನಂಬುವ ಮಾತಾ?: ಉಮೇಶ್ ಜಾಧವ್ ವಾಗ್ದಾಳಿ

2009 ರಿಂದ ಮೈಸೂರಿನ ಆರು ಹಾಗೂ ಕೊಡಗಿನ ಎರಡು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಕೊಡಗು ಜಿಲ್ಲೆ ಮುಂಚೆ ಮಂಗಳೂರು ಕ್ಷೇತ್ರಕ್ಕೆ ಸೇರಿತ್ತು. 1952 ರಲ್ಲಿ ಕಿಸಾನ್ ಮಜೂರ್ ಪ್ರಜಾಪಾರ್ಟಿಯ (ಕೆಎಂಪಿಪಿ) ಎಂ.ಎಸ್. ಗುರುಪಾದಸ್ವಾಮಿ ಗೆದ್ದಿದ್ದನ್ನು ಹೊರತುಪಡಿಸಿದರೆ 1996 ರವರೆಗೆ ಮೈಸೂರು ಕಾಂಗ್ರೆಸ್ಸಿನ ಭದ್ರಕೋಟೆ. 1998, 2004, 2014, 2019 ರಲ್ಲಿ ಕಾಂಗ್ರೆಸ್ ಭದ್ರಕೋಟೆಯನ್ನು ಬಿಜೆಪಿ ಛಿದ್ರ ಮಾಡಿ, ‘ಕಮಲ’ ಅರಳಿಸಿದೆ. 1998 ರಿಂದ 2014 ರವರೆಗೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಕಣ್ಣಾಮುಚ್ಚಾಲೆ ನಡೆದಿದೆ. ಒಂದು ಬಾರಿ ಬಿಜೆಪಿ, ಮತ್ತೊಂದು ಬಾರಿ ಕಾಂಗ್ರೆಸ್ ಎಂಬಂತೆ ಈ ನಾಲ್ಕು ಅವಧಿಯಲ್ಲಿ ಫಲಿತಾಂಶ ಬಂದಿತ್ತು. ಆದರೆ 2019 ರಲ್ಲಿ ಬಿಜೆಪಿ ಸತತ ಎರಡನೇ ಗೆಲವು ದಾಖಲಿಸಿತು.

congress bjp jds

ರಾಜಮನೆತನದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ 1984 ರಲ್ಲಿ ರಾಜಕಾರಣ ಪ್ರವೇಶ ಮಾಡಿದ ನಂತರ ರಾಜರ ಕೋಟೆಯಾಗಿತ್ತು. ಕಾಂಗ್ರೆಸ್ ಹಾಗೂ ರಾಜರ ಕೋಟೆಗೆ ಲಗ್ಗೆ ಹಾಕುವುದರಲ್ಲಿ ಬಿಜೆಪಿ ನಾಲ್ಕು ಬಾರಿ ಯಶಸ್ವಿಯಾಗಿದೆ. 1998 ರವರೆಗೆ ಆ ಪಕ್ಷಕ್ಕೆ ಈ ಕ್ಷೇತ್ರದಲ್ಲಿ ಠೇವಣಿಯೂ ಸಿಗುತ್ತಿರಲಿಲ್ಲ ಎಂಬುದು ಗಮನಾರ್ಹ. ತೋಂಟದಾರ್ಯ ಕಾಯಂ ಅಭ್ಯರ್ಥಿ ಎಂಬಂತೆ ಆಗಿದ್ದರು. ಸಿದ್ದರಾಮಯ್ಯ, ಶ್ರೀನಿವಾಸಪ್ರಸಾದ್ ಅವರಂಥ ಘಟಾನುಘಟಿ ನಾಯಕರಿದ್ದಾಗಲೂ ಜನತಾ ಪರಿವಾರ ಈ ಕ್ಷೇತ್ರದಲ್ಲಿ ಈವರೆಗೆ ಖಾತೆ ತೆರೆದಿಲ್ಲ. 1996 ರವರೆಗೆ ಆ ಪಕ್ಷಕ್ಕೆ ಎರಡನೇ ಸ್ಥಾನ ಕಾಯಂ. 1998, 1999, 2009 ಹಾಗೂ 2014 ರಲ್ಲಿ ತೃತೀಯ ಸ್ಥಾನಕ್ಕೆ ಕುಸಿಯಿತು. 1984 ರಲ್ಲಿ ಪ್ರಬಲ ಪೈಪೋಟಿ ನೀಡಿತ್ತು. 1996, 2004 ರಲ್ಲಿ ಕ್ರಮವಾಗಿ ಜನತಾ ಪರಿವಾರದ ಜಿ.ಟಿ. ದೇವೇಗೌಡ, ಎ.ಎಸ್, ಗುರುಸ್ವಾಮಿ ಜಯದ ಹೊಸ್ತಿಲಿಗೆ ಬಂದು, ಸೋತರು. ಇದನ್ನೂ ಓದಿ: ‘ಲೋಕ’ಸಮರಕ್ಕೆ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ – ಮಂಡ್ಯದಲ್ಲಿ ಕುಮಾರಸ್ವಾಮಿ, ಕೋಲಾರದಿಂದ ಮಲ್ಲೇಶ್‌ ಬಾಬು

ಈವರೆಗೆ ಗೆದ್ದಿರುವವರು
1952- ದ್ವಿಸದಸ್ಯ ಕ್ಷೇತ್ರ- ಎಂ.ಎಸ್. ಗುರುಪಾದಸ್ವಾಮಿ (ಕೆಎಂಪಿಪಿ), ಎನ್. ರಾಚಯ್ಯ ( ಕಾಂಗ್ರೆಸ್)
1957- ದ್ವಿಸದಸ್ಯ ಕ್ಷೇತ್ರ- ಎಂ. ಶಂಕರಯ್ಯ, ಎಸ್.ಎಂ. ಸಿದ್ದಯ್ಯ (ಇಬ್ಬರೂ ಕಾಂಗ್ರೆಸ್)
1962- ಎಂ. ಶಂಕರಯ್ಯ ( ಕಾಂಗ್ರೆಸ್)
1967- ಎಚ್.ಡಿ. ತುಳಸಿದಾಸ್ (ಕಾಂಗ್ರೆಸ್)
1971- ಎಚ್.ಡಿ. ತುಳಸಿದಾಸ್ ( ಕಾಂಗ್ರೆಸ್)
1977- ಎಚ್.ಡಿ. ತುಳಸಿದಾಸ್ (ಕಾಂಗ್ರೆಸ್)
1980- ಎಂ. ರಾಜಶೇಖರಮೂರ್ತಿ (ಕಾಂಗ್ರೆಸ್-ಐ)
1984- ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ( ಕಾಂಗ್ರೆಸ್)
1989- ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ (ಕಾಂಗ್ರೆಸ್)
1991- ಚಂದ್ರಪ್ರಭ ಅರಸು ( ಕಾಂಗ್ರೆಸ್)
1996- ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ (ಕಾಂಗ್ರೆಸ್)
1998- ಸಿ.ಎಚ್. ವಿಜಯಶಂಕರ್ (ಬಿಜೆಪಿ)
1999- ಶ್ರೀಕಂಠದತ್ತನರಸಿಂಹರಾಜ ಒಡೆಯರ್ ( ಕಾಂಗ್ರೆಸ್)
2004- ಸಿ.ಎಚ್. ವಿಜಯಶಂಕರ್ (ಬಿಜೆಪಿ)
2009- ಎಚ್. ವಿಶ್ವನಾಥ್ (ಕಾಂಗ್ರೆಸ್)
2014- ಪ್ರತಾಪ್‌ ಸಿಂಹ (ಬಿಜೆಪಿ)
2019 – ಪ್ರತಾಪ್ ಸಿಂಹ (ಬಿಜೆಪಿ)

TAGGED:bjpcongressjdsLok Sabha Election 2024Mysuru Lok Sabha
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Banashankari temple Bengaluru
Bengaluru City

ಬನಶಂಕರಿ ಅಮ್ಮನವರ ಪ್ರಸಾದಕ್ಕೂ ತಟ್ಟಿತು ಯುದ್ಧದ ಬಿಸಿ

Public TV
By Public TV
29 minutes ago
Vijayapura Fire Accident
Districts

ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ – ಹೊತ್ತಿಯುರಿದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು

Public TV
By Public TV
50 minutes ago
Mukesh Ambani Reliance Donald Trump
Latest

ಅಮೆರಿಕದಲ್ಲಿ ರಿಲಯನ್ಸ್‌ನಿಂದ ಹೊಸ ತೈಲ ಸಂಸ್ಕರಣಾ ಘಟಕ: ಟ್ರಂಪ್‌ ಘೋಷಣೆ

Public TV
By Public TV
1 hour ago
Mandya Crime
Crime

ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ – ಪತ್ನಿಯ ಪ್ಲ್ಯಾನ್‌ನಂತೆ ಪ್ರಿಯಕರನಿಂದ ಕೊಲೆ, ಲವ್ವರ್ಸ್‌ ಅರೆಸ್ಟ್

Public TV
By Public TV
1 hour ago
ಸಾಂದರ್ಭಿಕ ಚಿತ್ರ
Latest

ಇರಾನ್‌ನಿಂದ ಖಡಕ್‌ ಪ್ರತಿಕ್ರಿಯೆ – ತೈಲ ಟ್ಯಾಂಕರ್‌ ಕುರಿತ ಅಮೆರಿಕದ ಪೋಸ್ಟ್‌ ಡಿಲೀಟ್‌

Public TV
By Public TV
2 hours ago
Punjab Accident Foreign Womem
Latest

ರಸ್ತೆ ದಾಟುವಾಗ ಕಾರು ಡಿಕ್ಕಿ – 14 ಅಡಿ ಎತ್ತರದಿಂದ ಹಾರಿ ಬಿದ್ದ ವಿದೇಶಿ ಯುವತಿ, ಸ್ಥಳದಲ್ಲೇ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?