ಮೈಸೂರು: ತನಿಖಾಧಿಕಾರಿಗಳ ತಪ್ಪಿನಿಂದ ಮುರುಘಾ ಶ್ರೀಗೆ (Murugha shree) ಜಾಮೀನು ಸಿಕ್ಕಿದೆ ಎಂದು ಒಡನಾಡಿ (Odanadi) ಸಂಸ್ಥೆಯ ಮುಖ್ಯಸ್ಥ ಪರಶು ಅವರು ಆರೋಪಿಸಿದ್ದಾರೆ.
ಮೈಸೂರಿನಲ್ಲಿ `ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಉನ್ನತ ಮಟ್ಟದ ತನಿಖಾ ಸಂಸ್ಥೆಯಿಂದ ತನಿಖೆ ಆಗಿದ್ದರೆ ಇಷ್ಟು ಬೇಗ ಜಾಮೀನು ಸಿಗುತ್ತಿರಲಿಲ್ಲ. ಇವತ್ತು ಸ್ವಾಮೀಜಿ ಪರ ಅವರ ಭಕ್ತರು ಜಯ ಘೋಷ ಮೊಳಗಿಸಿರುವುದು ಸಂತ್ರಸ್ತ ಮಕ್ಕಳಲ್ಲಿ ಭಯ ಹುಟ್ಟಿಸುವಂತಿದೆ ಎಂದಿದ್ದಾರೆ. ಇದನ್ನೂ ಓದಿ: ಪೋಕ್ಸೋ ಕೇಸ್ – ಜೈಲಿನಿಂದ ಮುರುಘಾ ಶ್ರೀ ಬಿಡುಗಡೆ
ಸಂಸ್ಥೆಯ ಸ್ಟ್ಯಾನ್ಲಿಯವರು ಮಾತನಾಡಿ, ಮುರುಘಾ ಶ್ರೀ ಜಾಮೀನು ರದ್ದಿಗೆ ಕಾನೂನು ಹೋರಾಟ ಮಾಡುತ್ತೇವೆ. ಸ್ವಾಮೀಜಿ ಬಿಡುಗಡೆ ವಿಚಾರ ಕೇಳಿ ಸಂತ್ರಸ್ತ ಮಕ್ಕಳು ಭಯಕ್ಕೆ ಒಳಗಾಗಿದ್ದಾರೆ. ಅವರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.
ಕಳೆದ 13 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾ ಮಠದ ಶಿವಮೂರ್ತಿ ಶರಣರು ಚಿತ್ರದುರ್ಗ ಜೈಲಿನಿಂದ ಇಂದು ಬಿಡುಗಡೆಯಾಗಿದ್ದಾರೆ. ಪೋಕ್ಸೋ (Pocso Case) ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮುರುಘಾ ಶ್ರೀಗಳಿಗೆ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಹೋಟೆಲಿನಲ್ಲಿ ಸ್ಕ್ರೂಡ್ರೈವರ್ನಿಂದ 41 ಬಾರಿ ಇರಿದು ಪತ್ನಿಯ ಹತ್ಯೆಗೈದ ಪತಿ