ಮೈಸೂರು: ಜಿ20 ಶೃಂಗಸಭೆ ಗಣ್ಯರು ಮೈಸೂರು ಅರಮನೆಗೆ (Mysuru Palace) ಭೇಟಿ ನೀಡುತ್ತಿರುವ ಹಿನ್ನೆಲೆ ಎರಡು ದಿನಗಳ ಕಾಲ ಅರಮನೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಜಿ20 ಗಣ್ಯರು ಮತ್ತು ಅಧಿಕಾರಿಗಳು ಅರಮನೆಗೆ ಭೇಟಿ ನೀಡಲಿದ್ದು, ಆಗಸ್ಟ್ 1 ಮತ್ತು 2ರಂದು ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಆಗಸ್ಟ್ 1ರಂದು ಮಧ್ಯಾಹ್ನ 2:30ರಿಂದ ನಿರ್ಬಂಧ ಆದೇಶವನ್ನು ಹೊರಡಿಸಲಾಗಿದ್ದು, ಆಗಸ್ಟ್ 2ರಂದು ಮಧ್ಯಾಹ್ನ ಧ್ವನಿ ಬೆಳಕು ಕಾರ್ಯಕ್ರಮವನ್ನು ಕೂಡಾ ರದ್ದುಗೊಳಿಸಲಾಗಿದೆ. ಇದನ್ನೂ ಓದಿ: ಮತ್ತೆ ಟೊಮೆಟೋ ದರ ಭಾರೀ ಏರಿಕೆ – ಗ್ರಾಹಕರು ಕಂಗಾಲು
ಅಲ್ಲದೇ ಭದ್ರತಾ ದೃಷ್ಟಿಯಿಂದ ಅರಮನೆಯ ಸುತ್ತಮುತ್ತ ಡ್ರೋನ್ ಹಾರಾಟವನ್ನು ಸಹ ಪೊಲೀಸರು ನಿಷೇಧಿಸಿದ್ದಾರೆ. ಇದನ್ನೂ ಓದಿ: ತುಮಕೂರಿನ ಸಿದ್ದಗಂಗಾ ಮಠಕ್ಕೆ ಹೈಟೆಕ್ ಸ್ಪರ್ಶ – 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ ಥೀಮ್ ಪಾರ್ಕ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]