– ಅನಾರೋಗ್ಯದ ನಡುವೆಯೂ ಪಾದಯಾತ್ರೆ
ಮೈಸೂರು: ದಲಿತರ ಮೇಲಿನ ಶೋಷಣೆ ಕುಗ್ಗಿಸಲು ಪಾದಯಾತ್ರೆ ಮಾಡುತ್ತಿರುವ ಪೇಜಾವರ ಶ್ರೀಗಳು ದಲಿತ ಕೇರಿಯಲ್ಲಿ ಸಾಮರಸ್ಯದ ಪಾದಯಾತ್ರೆ ಮಾಡಿ ದಲಿತರ ಕುಟುಂಬಗಳಿಗೆ ಆಶೀರ್ವಾದ ಮಾಡಿದ್ದಾರೆ.
ಇಂದು ಪೇಜಾವರ ಶ್ರೀಗಳು ಮೈಸೂರಿನ ಮಂಜುನಾಥಪುರ ಬಡಾವಣೆಯ ದಲಿತರ ಮನೆಗೆ ಭೇಟಿ ನೀಡಿದರು. ದಲಿತ ದಂಪತಿ ಚೌಡಪ್ಪ, ರಾಜಮ್ಮ ಅವರ ಮನೆಗೆ ಬಂದು ಆಶೀರ್ವಾದ ಮಾಡಿದರು. ಅನಾರೋಗ್ಯದ ಹಿನ್ನೆಲೆಯಲ್ಲಿ ವೀಲ್ ಚೇರ್ ನಲ್ಲಿ ಕುಳಿತು ಪಾದಯಾತ್ರೆ ಮಾಡುತ್ತಾ ಮನೆಗೆ ಬಂದ ಶ್ರೀಗಳನ್ನು ಗೌರವಿಸಿದ ದಂಪತಿ ಶ್ರೀಗಳ ಕೃಪೆಗೆ ಪಾತ್ರರಾದರು.
ಈ ವೇಳೆ ಡಿಕೆಶಿ ಪರ ಮಠಾಧೀಶರ ಪ್ರತಿಭಟನೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿ ಶ್ರೀಗಳು, ನಾನು ಈ ವಿಚಾರದ ಬಗ್ಗೆ ಮಾತನಾಡುವುದಿಲ್ಲ, ತಟಸ್ಥವಾಗಿರುತ್ತೇನೆ. ಅವರಿಗೆ ಡಿಕೆಶಿ ನಿರಪರಾಧಿ ಎಂದು ತೋರಿದೆ. ಆ ಕಾರಣದಿಂದ ಅವರು ಬೆಂಬಲಿಸುತ್ತಿರಬಹುದು. ಈ ವಿಚಾರದಲ್ಲಿ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ನಿರಾಕಾರಿಸಿದರು.