ಪ್ರತಾಪ್ ಸಿಂಹ ಆರೋಪಕ್ಕೆ ತಿರುಗೇಟು ಕೊಟ್ಟ ಮೈಸೂರು ಎಸ್‍ಪಿ ರವಿ ಡಿ.ಚನ್ನಣ್ಣವರ್

Public TV
3 Min Read
mys sp ravi ff

ಮೈಸೂರು: ಹುಣಸೂರು ಹನುಮ ಜಯಂತಿ ಮೆರವಣಿಗೆ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಪೊಲೀಸ್ ಅಧಿಕಾರಿಗಳ ಮೇಲೆ ಮಾಡಿರುವ ಆರೋಪವನ್ನು ಎಸ್‍ಪಿ ರವಿ ಚೆನ್ನಣ್ಣನವರ್ ತಿರಸ್ಕರಿಸಿ, ನಾನು ಯಾರ ಆಳು ಅಲ್ಲ. ಕಾನೂನು ಮತ್ತು ಕರ್ತವ್ಯಕ್ಕೆ ಆಳು ಎಂದು ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿರುವ ಎಸ್‍ಪಿ ರವಿ ಚೆನ್ನಣ್ಣನವರ್, ಮಾನ್ಯ ಸಂಸದರ ಬಗ್ಗೆ ಅಪಾರ ಗೌರವವಿದೆ, ಅವರ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಯಾರ ಪರ ಅಥವಾ ವಿರೋಧವಾಗಿ ಕಾರ್ಯನಿರ್ವಹಿಸುತ್ತಿಲ್ಲ. ನಾವು ಸತ್ಯ ಹಾಗೂ ನ್ಯಾಯದ ಪರ ನಿಷ್ಪಕ್ಷಪಾತ ಹಾಗೂ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ತಿಳಿಸಿದರು.

mys sp

ಒಂದು ವೇಳೆ ನನ್ನ ವಿರುದ್ಧ ಅಂತಹ ಅನುಮಾನ ಶಂಕೆ ಇದ್ದರೆ ನನ್ನ ಮೇಲೆ ಒಂದು ವ್ಯವಸ್ಥೆ ಇದೆ. ಹಿರಿಯ ಅಧಿಕಾರಿಗಳು, ಜಿಲ್ಲಾಡಳಿತ ವ್ಯವಸ್ಥೆ ಇದ್ದು ಅಲ್ಲಿ ದೂರು ನೀಡಬಹುದು. ನಾನೇ ಅಂತಿಮನಲ್ಲ. ಯಾವ ಘಟನೆಯಲ್ಲಿ ಈ ರೀತಿ ಪಕ್ಷಪಾತವಾಗಿದೆ ಎಂಬುವುದನ್ನು ಸಂಸದರು ಸ್ಪಷ್ಟಪಡಿಸಬೇಕು. ಯಾರಿಗೆ ಅನ್ಯಾಯವಾಗಿದ್ದರೂ ಪರಿಹಾರ ಸಿಗುತ್ತದೆ. ಸಂಸದರ ಆರೋಪಗಳು ಅವರ ನನ್ನ ನಡುವಿನ ಸಣ್ಣ ಸಂವಹನ ಕೊರತೆಯಿಂದ ಉಂಟಾಗಿದೆ. ಈ ಕುರಿತು ಸ್ವತಃ ನಾನೇ ಕರೆಮಾಡಿ ಮಾತನಾಡುತ್ತೇನೆ ಎಂದರು.

ಇನ್ನೂ ಭಾಷಣ ಮಾಡುವ ಕುರಿತ ಟೀಕೆಗೆ ಉತ್ತರಿಸಿದ ಅವರು, ನಾನು ಭಾಷಣ ಮಾಡುವುದು ಕಾನೂನು, ಕೋರ್ಟ್, ಅಧಿಕಾರಿಗಳು, ಪ್ರಜಾಪ್ರಭುತ್ವ, ಪೊಲೀಸ್ ಪೇದೆ ಕರ್ತವ್ಯಗಳ ಅರಿವು ಯಾರಿಗೆ ಇರುವುದಿಲ್ಲವೋ ಅವರ ತಿಳುವಳಿಕೆ ನೀಡಲು ನಾನು ಮಾತನಾಡುತ್ತೇನೆ. ಇದು ನನ್ನ ರಾಷ್ಟ್ರೀಯ ಕರ್ತವ್ಯವಾಗಿದೆ ಎಂದು ತಿಳಿಸಿದರು.

mys

ಇದುವರೆಗೂ ಹಿರಿಯ ಅಧಿಕಾರಿಗಳ ನಿರ್ದೇಶನ ಹಾಗೂ ಮಾರ್ಗದರ್ಶನದ ಮೂಲಕ ಕಾರ್ಯನಿರ್ವಹಿಸಿದ್ದೇವೆ, ಆದರೆ ಸಂಸದರು ಹೇಳಿರುವ ಒಂದು ಸತ್ಯವನ್ನು ನಾನು ಒಪ್ಪಿಕೊಳ್ಳುತ್ತೇನೆ. ನಾನು ಕಲಿಯುವುದು ಇನ್ನು ಇದೆ. ಅವರಿಂದಲೂ ನಾನು ಸಾಕಷ್ಟು ಕಲಿಯುವುದು ಇದೆ. ನನ್ನ ಪೊಲೀಸ್ ವೃತ್ತಿ ಜೀವನದ ಉದ್ದಕ್ಕೂ ಕಲಿಯುತ್ತೇನೆ. ನಾನು ಪರಿಪೂರ್ಣನಲ್ಲ, ಪೊಲೀಸ್ ಇಲಾಖೆಯಲ್ಲಿ 20 ರಿಂದ 30 ವರ್ಷ ಪೇದೆಯಾಗಿ, ಎಎಸ್‍ಐ ಆಗಿ ಕಾರ್ಯನಿರ್ವಹಿಸಿದ ವ್ಯಕ್ತಿಯಿಂದಲೂ ಕಲಿಯುತ್ತೇನೆ. ಗುಲ್ಬರ್ಗ, ಮೈಸೂರು, ಬೆಳಗಾವಿ, ಶಿವಮೊಗ್ಗ ಪ್ರತಿ ಸ್ಥಳದಲ್ಲಿ ಕೆಲಸ ಮಾಡುವ ವೇಳೆಯೂ ಹಲವರು ಒಳ್ಳೆ ವ್ಯಕ್ತಿಗಳಿಂದ ಉತ್ತಮ ಅಂಶಗಳನ್ನು ಕಲಿಯುತ್ತಿದ್ದೇನೆ ಎಂದು ಹೇಳಿದರು. ( ಇದನ್ನೂ ಓದಿ: ಎಸ್‍ಪಿ ರವಿ ಚೆನ್ನಣ್ಣನವರ್ ಗೆ ಸಂಸದ ಪ್ರತಾಪ್ ಸಿಂಹ ಪರೋಕ್ಷ ಟಾಂಗ್ )

ಸಂಸದರನ್ನು ಕೂಡಲೇ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿಲ್ಲ ಯಾಕೆ ಎಂದು ಪ್ರಶ್ನಿಸಿದ್ದಕ್ಕೆ, ಪ್ರಕರಣದ ಕುರಿತು ತನಿಖೆ ನಡೆಸಲು ತನಿಖಾಧಿಕಾರಿಗಳಿದ್ದಾರೆ. ಯಾವುದೇ ವ್ಯಕ್ತಿಯನ್ನು ಬಂಧಿಸಿದ ನಂತರ ಆರೋಗ್ಯ ತಪಾಸಣೆ ಸೇರಿದಂತೆ ಹಲವು ಕಾನೂನು ಕ್ರಮಗಳಿರುತ್ತವೆ. ಅವುಗಳನ್ನು ಪೂರ್ಣಗೊಳಿಸಲು ಸಾಕಷ್ಟು ಸಮಯ ಬೇಕಾಗುತ್ತದೆ ಎಂದರು.

ಹುಣಸೂರು ಹನುಮ ಜಯಂತಿ ಮೆರವಣಿಗೆ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಎಸ್‍ಪಿ ರವಿ ಚೆನ್ನಣ್ಣನವರ್ ಗೆ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದರು. ಆಳುವವರ ಅಣತಿ ಮೀರುವ ಹಾಗಿಲ್ಲ ಅಲ್ವಾ ಸಾರ್ ಅಂತ ಟ್ವಿಟರ್‍ನಲ್ಲಿ ಎಸ್‍ಪಿ ಗೆ ಪರೋಕ್ಷವಾಗಿ ಪ್ರಶ್ನೆ ಮಾಡಿದ್ದರು. ಅಲ್ಲದೇ ಕನಿಷ್ಠ ಖಡಕ್ ಅಧಿಕಾರಿಗಳೆಂಬ ಸೋಗು ಬಿಟ್ಟು ಅಳುವ ಪಕ್ಷದ ಆಳುಗಳು ಎನ್ನುವುದನ್ನು ಒಪ್ಪಿಕೊಳ್ಳಿ. ದತ್ತ ಜಯಂತಿಗೆ ಸಕಲ ವ್ಯವಸ್ಥೆ ಮಾಡಿದ ಎಸ್.ಪಿ ಅಣ್ಣಾಮಲೈ, ಸರ್ಕಾರವನ್ನು ಎದುರು ಹಾಕಿಕೊಂಡ ಡಿಐಜಿ ರೂಪಾ, ಮೆಡಿಕಲ್ ಸೀಟ್ ಬ್ಲಾಕಿಂಗ್ ಹಗರಣ ತಡೆದ ಐಎಎಸ್ ರಶ್ಮಿ ನೋಡಿ ಕಲಿಯಿರಿ. ಭಾಷಣ ನಿಲ್ಲಿಸಿ ಅಂತ ಟ್ವೀಟ್ ಮಾಡಿದ್ದಾರೆ. ನನ್ನ ರಾಜಕೀಯ ಭವಿಷ್ಯಕ್ಕಿಂತ ನನ್ನ ಧರ್ಮ, ಸಂಪ್ರದಾಯ ರಕ್ಷಣೆ ನನಗೆ ಮುಖ್ಯ ಅಂತ ಪ್ರತಾಪ್ ಸಿಂಹ ಹೇಳಿದ್ದರು.  ( ಇದನ್ನೂ ಓದಿ: ನಾನು ಕಾನೂನು ಉಲ್ಲಂಘಿಸಿಲ್ಲ, ಜಿಲ್ಲಾಡಳಿತ, ಪೊಲೀಸರಿಂದಲೇ ತಪ್ಪಾಗಿದೆ: ಪ್ರತಾಪ್ ಸಿಂಹ )

https://www.youtube.com/watch?v=26wWJftihNg

https://www.youtube.com/watch?v=yzTzIO0gaXM

PRATHAP SIMHA 2

PRATHAP SIMHA 3

PRATHAP SIMHA 5

PRATHAP SIMHA 6

PRATHAP SIMHA 7

PRATHAP SIMHA 8

PRATHAP SIMHA 9

PRATHAP SIMHA 10

PRATHAP SIMHA 11

PRATHAP SIMHA 12

Share This Article
2 Comments

Leave a Reply

Your email address will not be published. Required fields are marked *