ಹುಬ್ಬಳ್ಳಿ: ಹಿರಿಯ ಸಾಹಿತಿ, ನಾಡೋಜ ಶತಾಯುಷಿ ಪಾಟೀಲ ಪುಟ್ಟಪ್ಪ ಅವರ ಆರೋಗ್ಯದಲ್ಲಿ ಏರುಪೇರು ಆಗಿದೆ. ವಯೋ ಸಹಜ ಸಮಸ್ಯೆಯಿಂದ ಬಳಲುತ್ತಿರುವ ಪಾಟೀಲ ಪುಟ್ಟಪ್ಪ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆಮ್ಮು ಹಾಗೂ ಕಫದ ಸಮಸ್ಯೆಯಿಂದಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ಸಾಹಿತಿಗೆ ಕಳೆದ ನಾಲ್ಕು ದಿನಗಳಿಂದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೆಮ್ಮು, ಕಫ ಹೆಚ್ಚಾದ ಕಾರಣ ಇನ್ಫೆಕ್ಷನ್ ಆಗಿರುವ ಸಾಧ್ಯತೆ ಹೆಚ್ಚಾಗಿದ್ದು, ಅವರಿಗೆ ಆಸ್ಪತ್ರೆಯ ವಿಶೇಷ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಪಾಪು ಆರೋಗ್ಯದ ಬಗ್ಗೆ ಸಾಕಷ್ಟು ನಿಗಾವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ.