ನಾಡೋಜ ಪಾಪು ನಿಧನಕ್ಕೆ ಸಿಎಂ, ಸಚಿವ ಶೆಟ್ಟರ್ ಸಂತಾಪ

Public TV
1 Min Read
PAPU CM

ಹುಬ್ಬಳ್ಳಿ: ನಾಡಿನ ಧೀಮಂತ ಪತ್ರಕರ್ತ, ಶತಾಯುಷಿ ನಾಡೋಜ ಪಾಟೀಲ ಪುಟ್ಟಪ್ಪ ಅವರ ನಿಧನಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಸಿಎಂ ಯಡಿಯೂರಪ್ಪ ಅವರು ಟ್ವೀಟ್ ಮಾಡುವ ಮೂಲಕ ನಾಡೋಜ ಪಾಟೀಲ ಪುಟ್ಟಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ನಾಡೋಜ ಪಾಟೀಲ್ ಪುಟ್ಟಪ್ಪನವರು ಗುಣಮುಖರಾಗಿ ಬರಲಿ ಎಂಬ ನಮ್ಮೆಲ್ಲರ ಪ್ರಾರ್ಥನೆ ಫಲಿಸಲಿಲ್ಲ. ಕರ್ನಾಟಕದ ಏಕೀಕರಣ ಚಳುವಳಿಯಿಂದ ಹಿಡಿದು – ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅವರು ಮಾಡಿದ ಪ್ರತಿಯೊಂದು ಕಾರ್ಯವೂ ಅವಿಸ್ಮರಣೀಯ” ಎಂದು ಟ್ವಿಟ್ಟರಿನಲ್ಲಿ ಬರೆದುಕೊಂಡಿದ್ದಾರೆ.

PAPU1

ಮತ್ತೊಂದು ಟ್ವೀಟ್ ಮಾಡಿ, “ರಾಜ್ಯಸಭಾ ಸದಸ್ಯರಾಗಿ ದೆಹಲಿಯಲ್ಲಿ ಕನ್ನಡ ಡಿಂಡಿಮ ಬಾರಿಸಿದ್ದು ಮಾತ್ರವಲ್ಲ, ಪತ್ರಿಕೋದ್ಯಮಕ್ಕೆ ಅವರ ಕೊಡುಗೆ ಅಪಾರ. ನಿನ್ನೆಯಷ್ಟೇ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೆ. ಪಾಪು ಗುಣಮುಖರಾಗುತ್ತಾರೆ ಎಂಬ ಭರವಸೆ ಇತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ದುಃಖ ಭರಿಸುವ ಶಕ್ತಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದೊರೆಯಲಿ. ಓಂ ಶಾಂತಿ” ಎಂದು ಸಂತಾಪ ಸೂಚಿಸಿದ್ದಾರೆ.

ಇನ್ನೂ ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

“ಭಾರತದ ಸ್ವಾತಂತ್ರ್ಯ ಚಳವಳಿ, ಕರ್ನಾಟಕ ಏಕೀಕರಣ ಹೋರಾಟ ಸೇರಿದಂತೆ ಕಳೆದ ಒಂದು ನೂರು ವರ್ಷಗಳ ಇತಿಹಾಸಕ್ಕೆ ಸಾಕ್ಷಿಯಾಗಿದ್ದ, ಉತ್ತರ ಕರ್ನಾಟಕದ ಎತ್ತರದ ಧ್ವನಿಯಾಗಿದ್ದ ಪಾಪು ಅವರ ಅಗಲಿಕೆ ನಾಡಿಗೆ ಉಂಟಾದ ದೊಡ್ಡ ನಷ್ಟವಾಗಿದೆ. ಕನ್ನಡ ನಾಡಿನ ಸಮಗ್ರತೆ, ಅಭಿವೃದ್ಧಿ ಬಗ್ಗೆ ಅವರು ಹೊಂದಿದ್ದ ಬದ್ಧತೆ ನಮಗೆಲ್ಲ ಎಲ್ಲಾ ಕಾಲಕ್ಕೂ ಮಾದರಿಯಾದುದ್ದು” ಎಂದು ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *