Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಗರ ಪಂಚಮಿಯಂದು ಹೀಗೆ ಮಾಡಿ – ಕಾಳ ಸರ್ಪದೋಷಕ್ಕೆ ಸಿಗುತ್ತೆ ಪರಿಹಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾಗರ ಪಂಚಮಿಯಂದು ಹೀಗೆ ಮಾಡಿ – ಕಾಳ ಸರ್ಪದೋಷಕ್ಕೆ ಸಿಗುತ್ತೆ ಪರಿಹಾರ

Bengaluru City

ನಾಗರ ಪಂಚಮಿಯಂದು ಹೀಗೆ ಮಾಡಿ – ಕಾಳ ಸರ್ಪದೋಷಕ್ಕೆ ಸಿಗುತ್ತೆ ಪರಿಹಾರ

Public TV
Last updated: July 31, 2025 7:12 am
Public TV
Share
3 Min Read
naga panchami
SHARE

ಹಿಂದೂ ಧರ್ಮದಲ್ಲಿ ನಾಗಪಂಚಮಿ (Naga Panchami) ಹಬ್ಬವು ವಿಶೇಷ ಮಹತ್ವವನ್ನು ಹೊಂದಿದೆ. ಪಂಚಾಂಗದ ಪ್ರಕಾರ, ಪ್ರತಿ ವರ್ಷ ಈ ಹಬ್ಬವನ್ನು ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುತ್ತದೆ. ನಾಗಪಂಚಮಿಯಂದು ಶಿವನನ್ನು ಸರ್ಪ ದೇವತೆಯೊಂದಿಗೆ ಪೂಜಿಸಲಾಗುತ್ತದೆ. ಜೀವನದ ಅಡೆತಡೆಗಳು ನಿವಾರಣೆಯಾಗಲೆಂದು ಶಿವನಲ್ಲಿ ಪಾರ್ಥಿಸಲಾಗುತ್ತದೆ. ಹಿಂದೂಗಳು ಹಾವಿನ ದೇವನಾದ ನಾಗ ದೇವರನ್ನು ಪೂಜಿಸುತ್ತಾರೆ. ನಾಗದೇವರಿಗೆ ಹಾಲು ಮತ್ತು ಬೆಳ್ಳಿಯನ್ನು ಅರ್ಪಿಸಿ ಪೂಜಿಸುತ್ತಾರೆ. ಹುತ್ತಗಳಿಗೆ ತನಿ ಎರೆದು (ಹಾಲು ಎರೆದು) ಪ್ರಾರ್ಥಿಸುತ್ತಾರೆ.

ಈ ವಿಶೇಷ ದಿನದಂದು ಶಿವಲಿಂಗದ ಮೇಲೆ ಕೆಲವು ವಿಶೇಷ ವಸ್ತುಗಳನ್ನು ಅರ್ಪಿಸಿ ಪೂಜಿಸುವುದರಿಂದ ಕಾಳ ಸರ್ಪದೋಷದಂತಹ ಸಮಸ್ಯೆಗಳು ನಿವಾರಣೆಯಾಗುತ್ತದೆ. ಕಾಲಸರ್ಪ ದೋಷ ಇರುವವರು ಏನು ಮಾಡಬೇಕು? ನಾಗಪಂಚಮಿಯ ದಿನದಂದು ಶಿವಲಿಂಗದ ಮೇಲೆ ಏನು ಅರ್ಪಿಸಬೇಕೆಂದು ಎಂಬುದನ್ನು ಇಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮಳೆಯಾರ್ಭಟ – ಕೃಷ್ಣಾ ನದಿಗೆ ಹೆಚ್ಚಿದ ಒಳಹರಿವು, 8 ಸೇತುವೆಗಳು ಜಲಾವೃತ

Naga Panchami

ಏನಿದು ಕಾಳ ಸರ್ಪದೋಷ?
ಗ್ರಹಗಳಿಂದ ಉಂಟಾಗುವ ದೋಷಗಳಲ್ಲಿ ಕಾಳ ಸರ್ಪದೋಷವೂ ಒಂದು. ಜ್ಯೋತಿಷ್ಯ ಶಾಸ್ತçದಲ್ಲಿ, ರಾಹುವಿನ ಅಧಿದೇವತೆ ‘ಕಾಳ’ ಮತ್ತು ಕೇತುವಿನ ಅಧಿದೇವತೆ ‘ಸರ್ಪ’. ಜಾತಕದ ಗ್ರಹಗಳು ಈ ಎರಡು ಗ್ರಹಗಳ ನಡುವೆ ಬಂದಾಗ, ‘ಕಾಳ ಸರ್ಪ’ ದೋಷವು ಉಂಟಾಗುತ್ತದೆ. ಜಾತಕದಲ್ಲಿ ರಾಹು ಮತ್ತು ಕೇತುವಿನ ಅಶುಭ ಸ್ಥಾನವು ಕಾಳ ಸರ್ಪದೋಷವನ್ನು ಸೃಷ್ಟಿಸುತ್ತದೆ. ಎಲ್ಲ ಗ್ರಹಗಳು ರಾಹು ಮತ್ತು ಕೇತುವಿನ ನಡುವೆ ಕಂಡುಬಂದರೆ ದೋಷ ಉಂಟಾಗುತ್ತದೆ. ರಾಹು ಸೂರ್ಯ, ಚಂದ್ರ ಮತ್ತು ಗುರುಗಳೊಂದಿಗೆ ಬಂದಾಗ ದೋಷವಿದೆ. ರಾಹು-ಕೇತುಗಳು ಯಾವಾಗಲೂ ಹಿಮ್ಮುಖವಾಗಿ ಚಲಿಸುತ್ತವೆ. ಹೀಗಾಗಿ, ಅವು ಕ್ರೂರ ಗ್ರಹಗಳೆಂದು ಬಿಂಬಿತವಾಗಿವೆ.

ಕಾಳ ಸರ್ಪದೋಷದಿಂದ ಏನಾಗುತ್ತೆ?
ಜೀವನದಲ್ಲಿ ಅಡೆತಡೆಗಳು, ಶಾಂತಿ ಭಂಗ, ಆತ್ಮವಿಶ್ವಾಸದ ಕೊರತೆ, ಆರೋಗ್ಯ ಸಮಸ್ಯೆಗಳು, ಬಡತನ, ನಿರುದ್ಯೋಗ, ವ್ಯಾಪಾರದ ನಷ್ಟ, ಆತಂಕ, ಸ್ನೇಹಿತರಿಂದ ದ್ರೋಹ, ಸಂಬಂಧಿಕರಿಂದ ಬೆಂಬಲ ಸಿಗದಿರುವುದು ಮೊದಲಾದ ಸಮಸ್ಯೆಗಳು ಎದುರಾಗುತ್ತವೆ.

Honey

ಜೇನುತುಪ್ಪ
ನಾಗಪಂಚಮಿಯ ದಿನದಂದು ಶಿವಲಿಂಗದ ಮೇಲೆ ಜೇನುತುಪ್ಪವನ್ನು ಅರ್ಪಿಸುವುದರಿಂದ ಕೌಟುಂಬಿಕ ಕಲಹ ದೂರವಾಗುತ್ತದೆ. ವೃತ್ತಿಜೀವನದಲ್ಲಿ ಯಶಸ್ಸು ಸಿಗುತ್ತದೆ. ಅಲ್ಲದೆ, ಇದು ವ್ಯಕ್ತಿಗೆ ಅದೃಷ್ಟವನ್ನು ತರುತ್ತದೆ. ಆರ್ಥಿಕ ಸ್ಥಿತಿಯನ್ನು ಸುಧಾರಿಸುತ್ತದೆ. ಶ್ರದ್ಧಾಭಕ್ತಿಯಿಂದ ಅಂದು ಶಿವಲಿಂಗದ ಮೇಲೆ ಜೇನುತುಪ್ಪವನ್ನು ಅರ್ಪಿಸಿ. ಇದನ್ನೂ ಓದಿ: Mann ki Baat: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಮೋದಿ ಪ್ರಶಂಸೆ

nagara panchami

ಹಸಿ ಹಾಲು
ನಿಮ್ಮ ಜಾತಕದಲ್ಲಿ ಕಾಳ ಸರ್ಪದೋಷವಿದ್ದರೆ, ನಾಗಪಂಚಮಿಯ ಹಬ್ಬದಂದು ಶಿವಲಿಂಗದ ಮೇಲೆ ಹಸಿ ಹಾಲನ್ನು ಅರ್ಪಿಸುವುದು ಅತ್ಯಂತ ಶುಭವೆಂದು ಪರಿಗಣಿಸಲಾಗುತ್ತದೆ. ಈ ದಿನ, ನೀವು ಬ್ರಾಹ್ಮಿ ಮುಹೂರ್ತದಲ್ಲಿ ಶಿವಲಿಂಗದ ಮೇಲೆ ಹಾಲು ಅರ್ಪಿಸಬೇಕು. ಇದರಿಂದ ನಿಮಗೆ ಶಿವನ ವಿಶೇಷ ಆಶೀರ್ವಾದ ಸಿಗುತ್ತದೆ. ಜೀವನದಲ್ಲಿನ ಅಡೆತಡೆಗಳನ್ನು ನಿವಾರಣೆಯಾಗುತ್ತವೆ.

ಧಾತುರ
ಧಾತುರವನ್ನು ಅರ್ಪಿಸುವುದರಿಂದ ಶಿವನು ಸಂತುಷ್ಟನಾಗುತ್ತಾನೆ. ನಿಮ್ಮ ಆರ್ಥಿಕ ಸಮಸ್ಯೆಗಳು ದೂರವಾಗುತ್ತವೆ. ನಾಗಪಂಚಮಿಯ ದಿನದಂದು ಶಿವಲಿಂಗದ ಮೇಲೆ ಧಾತುರವನ್ನು ಅರ್ಪಿಸುವುದರಿಂದ ನಿಮ್ಮೆಲ್ಲ ಆಸೆಗಳು ಈಡೇರುತ್ತವೆ.

Bilwapatre Maha Shivratri Shiva 1

ಬಿಲ್ವಪತ್ರೆ
ಬಿಲ್ವಪತ್ರೆಯು ಶಿವನಿಗೆ ತುಂಬಾ ಪ್ರಿಯವಾದದ್ದು. ವಿಶೇಷ ದಿನ, ಶಿವಲಿಂಗದ ಮೇಲೆ ಭಕ್ತಿಯಿಂದ ಬಿಲ್ಪತ್ರೆಯನ್ನು ಅರ್ಪಿಸಿ. ಶಿವನು ಇದರಿಂದ ಪ್ರಸನ್ನನಾಗುತ್ತಾನೆ. ಭಕ್ತನ ಎಲ್ಲಾ ಆಸೆಗಳು ಈಡೇರುತ್ತವೆ. ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಬರುತ್ತದೆ.

ಅಕ್ಷತೆ-ಚಂದನ
ನಾಗಪಂಚಮಿಯ ಹಬ್ಬದಂದು ಶಿವಲಿಂಗದ ಮೇಲೆ ಅಕ್ಷತೆ ಮತ್ತು ಚಂದನವನ್ನು ಅರ್ಪಿಸುವುದನ್ನು ಶುಭವೆಂದು ಪರಿಗಣಿಸಲಾಗಿದೆ. ಶಿವನಿಗೆ ಅಕ್ಷತೆ-ಚಂದನವನ್ನು ಅರ್ಪಿಸುವುದರಿಂದ ಪಾಪಗಳು ನಾಶವಾಗುತ್ತವೆ. ಜೀವನದಲ್ಲಿ ಸಂತೋಷ ಮತ್ತು ಶಾಂತಿ ನೆಲೆಸುತ್ತದೆ. ಇದನ್ನೂ ಓದಿ: ರಾಜ್ಯದಲ್ಲಿ ರಸಗೊಬ್ಬರ ಕೊರತೆಗೆ ಕಳ್ಳದಂಧೆ ಕಾರಣ – ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

nagara panchami 2

ಕಪ್ಪು ಎಳ್ಳು
ನಾಗಪಂಚಮಿಯಂದು, ಕಪ್ಪು ಎಳ್ಳು ಬೆರೆಸಿದ ನೀರಿನಿಂದ ಶಿವಲಿಂಗಕ್ಕೆ ಅಭಿಷೇಕ ಮಾಡುವುದು ಅತ್ಯಂತ ಶುಭವೆಂದು ಪರಿಗಣಿಸಲಾಗಿದೆ. ಹೀಗೆ ಮಾಡುವುದರಿಂದ ಕಾಲಸರ್ಪ ದೋಷದಿಂದ ಪರಿಹಾರ ದೊರೆಯುವುದಲ್ಲದೆ, ಕುಟುಂಬದಲ್ಲಿ ಸಕಾರಾತ್ಮಕ ಶಕ್ತಿ ನೆಲೆಸುತ್ತದೆ. ಸಂತೋಷ ಮತ್ತು ಶಾಂತಿ ಸಿಗುತ್ತದೆ.

TAGGED:Kaal Sarp DoshLord ShivaNaga Panchaminagara panchamiಕಾಳ ಸರ್ಪ ದೋಷನಾಗ ಪಂಚಮಿನಾಗರ ಪಂಚಮಿಶಿವ
Share This Article
Facebook Whatsapp Whatsapp Telegram

Cinema news

vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema
Samhita Vinya
ಸಾಲು ಸಾಲು ಚಿತ್ರಗಳಲ್ಲಿ ಸಂಹಿತಾ ವಿನ್ಯಾ ಬ್ಯುಸಿ – ‘ಮಿಕ್ಸಿಂಗ್ ಪ್ರೀತಿ’ ಫೆ.20 ರಂದು ತೆರೆಗೆ
Crime Latest Sandalwood

You Might Also Like

Krishna Byre Gowda
Districts

ಹೊಳೆನರಸೀಪುರ | ಶಾಲೆಗೆ ತೆರಳಿ ಬಿಸಿಯೂಟ ಸವಿದ ಸಚಿವ ಕೃಷ್ಣಭೈರೇಗೌಡ

Public TV
By Public TV
35 minutes ago
Rajasthan Bhiwadi Blast
Crime

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ – 7 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ

Public TV
By Public TV
39 minutes ago
Three guilty in murder case and Israeli Tourist Rape case
Court

ಇಸ್ರೇಲ್‌ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ, ಓರ್ವನ ಹತ್ಯೆ ಕೇಸ್‌ – ಮೂವರ ಅಪರಾಧ ಸಾಬೀತು

Public TV
By Public TV
42 minutes ago
mahadevappa
Bengaluru City

ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ? – ನಾಯಕತ್ವ ಚರ್ಚೆಯನ್ನು ನಾಯಿಗೆ ಹೋಲಿಸಿದ ಮಹದೇವಪ್ಪ

Public TV
By Public TV
1 hour ago
SUBBAREDDY
Bengaluru City

ಬಾಗೇಪಲ್ಲಿ `ಕೈ’ ಶಾಸಕ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು: ಹೈಕೋರ್ಟ್‌ ಆದೇಶ

Public TV
By Public TV
1 hour ago
M.K. Faizy
Court

PFI ಅಕ್ರಮ ಹಣ ವರ್ಗಾವಣೆ ಕೇಸ್ – ದೆಹಲಿ ಹೈಕೋರ್ಟ್‌ನಿಂದ ಎಸ್‌ಡಿಪಿಐ ಅಧ್ಯಕ್ಷ ಫೈಜಿಗೆ ಜಾಮೀನು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?