Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

Nagara Panchami : ವಾಸುಕಿಯನ್ನು ಹಿಡಿದು ಎಳೆದಾಡಿದ ದೇವತೆಗಳು, ರಾಕ್ಷಸರು!

Public TV
Last updated: August 20, 2023 9:41 pm
Public TV
Share
3 Min Read
Nagara Panchami Special What is the role of Vasuki in Samudra Manthan
SHARE

ಪುರಾಣ ಕಥೆಗಳಲ್ಲಿ ದೇವತೆಗಳಿಗೆ ಅಮೃತ ಸಿಕ್ಕಿದ್ದನ್ನು ನೀವು ಓದಿರಬಹುದು. ಈ ಅಮೃತ ಸಿಗುವಲ್ಲಿ ವಾಸುಕಿಯ (Vasuki) ಪಾತ್ರವೂ ದೊಡ್ಡದು. ಶಿವನ ಅಷ್ಟಸರ್ಪಗಳಾದ ಅನಂತ (ಶೇಷ), ವಾಸುಕಿ, ತಕ್ಷಕ, ಕುಲಿಕ, ಕಾರ್ಕೋಟಕ, ಪದ್ಮ, ಮಹಾಪದ್ಮ, ಶಂಖಪಾಲ ಇವುಗಳಲ್ಲಿ ಒಬ್ಬ. ಕಶ್ಯಪನಿಂದ ಕದ್ರುವಿನಲ್ಲಿ ಜನಿಸಿದ ವಾಸುಕಿಯು ಶಿವನ ಕುತ್ತಿಗೆಯ ಸುತ್ತ ಸುತ್ತಿಕೊಂಡಿರುವುದರಿಂದ ಪ್ರಸಿದ್ಧನಾಗಿದ್ದಾನೆ. ಶಿವನು ಇವನನ್ನು ಆಶೀರ್ವದಿಸಿ ಆಭರಣವಾಗಿ ಧರಿಸಿದ್ದಾನೆ. ನಾಗರ ಪಂಚಮಿಯ (Nagara Panchami) ಹಬ್ಬದ ಹಿನ್ನೆಲೆಯಲ್ಲಿ ಸಮುದ್ರ ಮಂಥನದ (Samudra Manthan) ಕಿರು ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ದುರ್ವಾಸ ಮುನಿ ಶಿಷ್ಯರೊಂದಿಗೆ ಶಿವನನ್ನು ಭೇಟಿಯಾಗಲು ಕೈಲಾಸದತ್ತ ಪ್ರಯಾಣ ಬೆಳೆಸುತ್ತಿದ್ದಾಗ ದಾರಿ ಮಧ್ಯೆ ದೇವೇಂದ್ರ ಸಿಗುತ್ತಾನೆ. ದೇವೇಂದ್ರ ದುರ್ವಾಸ ಮುನಿಗಳಿಗೆ ನಮಸ್ಕರಿಸಿ ಗೌರವದಿಂದ ಕಾಣುತ್ತಾನೆ. ದೇವೇಂದ್ರನ ಗುರು ಭಕ್ತಿಗೆ ಮೆಚ್ಚಿದ ದುರ್ವಾಸರು ಆತನಿಗೆ ವಿಶೇಷ ಹೂವಿನ ಹಾರವನ್ನು ಕೊಡುತ್ತಾರೆ. ಇಂದ್ರನು ಹೂವಿನ ಹಾರವನ್ನು ತನ್ನ ವಾಹನವಾದ ʼಐರಾವತʼದ ಸೊಂಡಿಲಿನ ಮೇಲಿಡುತ್ತಾನೆ.

ಹೂವಿನ ಹಾರದ ಸುವಾಸನೆ ಐರಾವತಕ್ಕೆ ಕಿರಿಕಿರಿ ಉಂಟುಮಾಡುತ್ತದೆ. ಕೊನೆಗೆ ಸೊಂಡಿಲಿನಿಂದ ಹಾರವನ್ನು ನೆಲಕ್ಕೆ ಎಸೆಯುತ್ತದೆ. ಇದನ್ನು ನೋಡಿದ ದುರ್ವಾಸರು, ಈ ಹಾರವು ಸಿರಿ ಮತ್ತು ಭಾಗ್ಯದ ಸಂಕೇತವಾಗಿದ್ದು, ಅದನ್ನು ಪ್ರಸಾದವಾಗಿ ನೀನು ನೋಡಬೇಕಿತ್ತು. ಆದರೆ ಅದನ್ನು ಆನೆಯ ಮೇಲೆ ಹಾಕಿದ್ದು ಸರಿಯಲ್ಲ. ಇದು ನೀನು ನನಗೆ ಮಾಡಿದ ಅವಮಾನ ಎಂದು ಹೇಳಿ ದೇವಲೋಕದಲ್ಲಿನ ಎಲ್ಲಾ ದೇವತೆಗಳ ಶಕ್ತಿ, ಸಾಮರ್ಥ್ಯ ಹಾಗೂ ವರಗಳು ನಾಶವಾಗಲಿ ಎಂದು ಶಾಪ ನೀಡುತ್ತಾರೆ. ದುರ್ವಾಸರ ಶಾಪದಿಂದ ಲಕ್ಷ್ಮಿ ಸ್ವರ್ಗ ಲೋಕವನ್ನು ತೊರೆಯುತ್ತಾಳೆ. ಇದನ್ನೂ ಓದಿ: Naga Panchami 2023: ಬಾಯಲ್ಲಿ ನೀರೂರಿಸುವ ಅಳ್ಳಿಟ್ಟು, ಅರಿಶಿನ ಎಲೆ ಕಡುಬು ಮಾಡಿ ನೋಡಿ

ದುರ್ವಾಸರ ಶಾಪದ ವಿಚಾರವನ್ನು ತಿಳಿದ ರಾಕ್ಷಸರು ದೇವಲೋಕದ ಮೇಲೆ ದಾಳಿ ಮಾಡುತ್ತಾರೆ. ದೇವರನ್ನು ಸೋಲಿಸಿ ಆಡಳಿತ ಮಾಡಲು ಆರಂಭಿಸುತ್ತಾರೆ. ದೇವಲೋಕವನ್ನು ಕಳೆದ ದು:ಖದಲ್ಲಿ ದೇವೇಂದ್ರ ಮತ್ತು ದೇವತೆಗಳು ಬ್ರಹ್ಮನ ಬಳಿ ಹೋಗಿ ಸಹಾಯ ಮಾಡುವಂತೆ ಕೇಳಿಕೊಳ್ಳುತ್ತಾರೆ. ಇದಕ್ಕೆ ಬ್ರಹ್ಮ ಲಕ್ಷ್ಮಿಯನ್ನು ಕಳೆದುಕೊಂಡಿದ್ದರಿಂದ ವಿಷ್ಣುವಿನ ಬಳಿ ಹೋಗಿ ನೀವು ಪ್ರಾರ್ಥಿಸಿ. ಆತ ನಿಮಗೆ ಸಹಾಯ ಮಾಡುತ್ತಾನೆ ಎಂದು ಹೇಳುತ್ತಾನೆ.

Nagara Panchami 7

ವೈಕುಂಠಕ್ಕೆ ದೇವತೆಗಳು ಬಂದಾಗ ಎಲ್ಲಾ ವಿಚಾರಗಳನ್ನು ತಿಳಿದಿದ್ದ ವಿಷ್ಣು ಸದ್ಯ ಈಗ ಏನು ಮಾಡಲು ಸಾಧ್ಯವಿಲ್ಲ. ಮುಂದೆ ರಾಕ್ಷಸರ ಅಧಿಕಾರದ ಸಮಯ ಅಂತ್ಯವಾಗಲಿದೆ. ಸಮಯ ಅಂತ್ಯವಾಗುವ ಮೊದಲು ಅವರ ಜೊತೆ ಸ್ನೇಹ ಬೆಳೆಸಬೇಕು. ರಾಕ್ಷಸರಿಂದ ಮುಕ್ತಿ ಪಡೆಯಬೇಕೆಂದರೆ ಸಮುದ್ರ ಮಂಥನವಾಗಬೇಕು. ಸಮುದ್ರ ಮಂಥನ ನಿಮ್ಮ ಒಬ್ಬರಿಂದ ಸಾಧ್ಯವಿಲ್ಲ. ರಾಕ್ಷಸರ ಸಹಾಯವೂ ಬೇಕು. ಸಮುದ್ರ ಮಂಥನವಾದಾಗ ಅಮೃತ ಬರುತ್ತದೆ. ಈ ಅಮೃತವನ್ನು ನೀವು ಸೇವಿಸಿದರೆ ಮುಂದೆ ರಾಕ್ಷಸರಿಗೆ ಏನು ಮಾಡಲು ಸಾಧ್ಯವಿಲ್ಲ. ಈ ಅಮೃತವನ್ನು ಹಂಚುವ ಕೆಲಸ ನಾನು ಮಾಡುತ್ತೇನೆ ಎಂದು ಅಭಯ ನೀಡುತ್ತಾನೆ. ಇದನ್ನೂ ಓದಿ: ‘ನಾಗರಪಂಚಮಿ’ ವಿಶೇಷತೆ ಏನು?

ದೇವತೆಗಳು ಸಮುದ್ರ ಮಥನದ ಬಗ್ಗೆ ರಾಕ್ಷಸರಲ್ಲಿ ತಿಳಿಸಿದಾಗ ಅವರು ಒಪ್ಪಿಗೆ ನೀಡುತ್ತಾರೆ. ಸಮದ್ರವನ್ನು ಕಡೆಯಲು ಮಂದಾರ ಪರ್ವತವನ್ನು ಕಡೆಗೋಲಾಗಿ ಬಳಸಲಾಯಿತು. ಮಹಾದೇವನ ಸರ್ಪವಾದ ವಾಸುಕಿಯು ಹಗ್ಗವಾಗಿ ನಾನು ಬರುತ್ತೇನೆ ಎಂದು ಹೇಳಿದ. ರಾಕ್ಷಸರು ಮಂದಾರ ಪರ್ವತವನ್ನು ಸುತ್ತಿದ ವಾಸುಕಿಯ ಹೆಡೆಯನ್ನು ಹಿಡಿದರೆ ದೇವತೆಗಳು ಬಾಲವನ್ನು ಹಿಡಿದು ಕಡೆಯಲು ಆರಂಭಿಸಿದರು.

ದೇವತೆಗಳು, ರಾಕ್ಷಸರು ಕಡೆಯುವ ರಭಸಕ್ಕೆ ಮಂದಾರ ಪರ್ವತ ಕುಸಿಯಲು ಆರಂಭವಾದಾಗ ವಿಷ್ಣು ಕೂರ್ಮಾ (ಆಮೆ) ಅವತಾರವನ್ನು ತಾಳಿ ತನ್ನ ಬೆನ್ನಿನ ಮೇಲೆ ಬೆಟ್ಟವನ್ನು ಹೊತ್ತುಕೊಂಡನು.

 

ಸಮುದ್ರ ಮಂಥನ ಮಾಡುವಾಗ ಕೇವಲ ಅಮೃತ ಮಾತ್ರವಲ್ಲ, ವಿಷವು ಸಮುದ್ರದಿಂದ ಹೊರಬಂತು. ಈ ವಿಷವು ವಿಶ್ವವನ್ನೇ ನಾಶ ಮಾಡುವ ಶಕ್ತಿಯನ್ನು ಹೊಂದಿತ್ತು. ಕ್ಷೀರ ಸಮುದ್ರದಿಂದ ಹಾಲಾಹಲದ ಪರಿಣಾಮ ಗೋಚರಿಸುತ್ತಿದ್ದಂತೆ ದೇವತೆಗಳು ಶಿವನ ಬಳಿ ಹೋಗಿ ಪೃಥ್ವಿಯನ್ನು ರಕ್ಷಿಸು ಎಂದು ಮೊರೆಯಿಟ್ಟರು. ಶಿವನು ವಿಷವನ್ನು ಸೇವಿಸಿ, ತನ್ನ ಗಂಟಲಲ್ಲೇ ಹಿಡಿದಿಟ್ಟುಕೊಳ್ಳುತ್ತಾನೆ. ಜೀವಕೋಟಿಯ ಮೇಲಿನ ಅನುಕಂಪದಿಂದ ವಿಷವನ್ನು ನುಂಗಿ ತನ್ನ ಕಂಠದಲ್ಲಿ ಹಿಡಿದಿಟ್ಟ ಪರಿಣಾಮ ಶಿವನ ಕಂಠವು ನೀಲಿ ಬಣ್ಣಕ್ಕೆ ತಿರುಗುತ್ತದೆ. ಆದ್ದರಿಂದ ಶಿವನನ್ನು ನೀಲಕಂಠನೆಂದು ಕರೆಯುತ್ತಾರೆ. ಕ್ಷೀರಸಾಗರದಿಂದ ಅಮೃತವು ಹೊರಬಂದಾಗ ವಿಷ್ಣು ಮೋಹಿನಿ ಅವತಾರವನ್ನು ಧರಿಸಿ ದೇವರುಗಳು ಅಮೃತವನ್ನು ಸೇವಿಸುವಂತೆ ಮಾಡುತ್ತಾನೆ.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:nagara panchamiSamudra ManthanVasukiಅಮೃತನಾಗರ ಪಂಚಮಿವಾಸುಕಿಸಮುದ್ರ ಮಂಥನ
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

School Building Collapses
Latest

ಶಾಲಾ ಕಟ್ಟಡ ಕುಸಿದು 4 ಮಕ್ಕಳ ದಾರುಣ ಸಾವು – ಅವಶೇಷಗಳ ಅಡಿ ಸಿಲುಕಿದ 60 ಮಕ್ಕಳು

Public TV
By Public TV
27 minutes ago
Prahlad Joshi 3
Latest

ನವೀಕರಿಸಬಹುದಾದ ಇಂಧನದಿಂದ 4 ಲಕ್ಷ ಕೋಟಿ ರೂ. ಉಳಿತಾಯ: ಪ್ರಹ್ಲಾದ್ ಜೋಶಿ

Public TV
By Public TV
42 minutes ago
Ramanagara Suicide Case
Crime

ವಿಷ ಕುಡಿದು ಪತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್; ಗಂಡನನ್ನೇ ಕೊಲೆ ಮಾಡಿಸಿದ ಗ್ರಾಪಂ ಸದಸ್ಯೆ!

Public TV
By Public TV
1 hour ago
Tigers Death Case 3
Chamarajanagar

ಚಾ.ನಗರದಲ್ಲಿ 5 ಹುಲಿಗಳ ಸಾವು ಕೇಸ್‌ – ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ

Public TV
By Public TV
1 hour ago
Chikkamagaluru Suicide
Chikkamagaluru

ಮಗನ ಸಾವಿನಿಂದ ಮನನೊಂದ ತಾಯಿ – ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆ

Public TV
By Public TV
2 hours ago
Biklu Shiva
Bengaluru City

ಬಿಕ್ಲು ಶಿವ ಕೊಲೆ ಕೇಸ್‌ – ಮತ್ತೊಂದು ರಹಸ್ಯ ಸ್ಫೋಟ, ಕೊಲೆಯಾದ 15 ನಿಮಿಷಕ್ಕೆ ಎ1 ಜಗ್ಗ ಎಸ್ಕೇಪ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?