Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಗರ ಪಂಚಮಿ ವಿಶೇಷ: ಜನಮೇಜಯ ಸರ್ಪಯಾಗಕ್ಕೆ ಮುಂದಾಗಿದ್ದು ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಾಗರ ಪಂಚಮಿ ವಿಶೇಷ: ಜನಮೇಜಯ ಸರ್ಪಯಾಗಕ್ಕೆ ಮುಂದಾಗಿದ್ದು ಯಾಕೆ?

Latest

ನಾಗರ ಪಂಚಮಿ ವಿಶೇಷ: ಜನಮೇಜಯ ಸರ್ಪಯಾಗಕ್ಕೆ ಮುಂದಾಗಿದ್ದು ಯಾಕೆ?

Public TV
Last updated: August 8, 2024 6:03 pm
Public TV
Share
3 Min Read
Nagara Panchami Special Why did Janameya perform Sarpayaga 2
SHARE

ನಾಗರ ಪಂಚಮಿ ಶ್ರಾವಣ ಮಾಸದಲ್ಲಿ ಬರುವ ಮೊದಲ ಹಬ್ಬ. ನಾಗರ ಪಂಚಮಿಯ (Nagara Panchami) ನಂತರ ಸಾಲು ಸಾಲು ಹಬ್ಬಗಳು ಬರತೊಡಗುತ್ತದೆ. ವರ ಮಹಾಲಕ್ಷ್ಮಿ ಹಬ್ಬ, ಗಣೇಶ ಚತುರ್ಥಿ, ರಕ್ಷಾ ಬಂಧನ… ಹೀಗೆ ಒಂದರ ಹಿಂದೆ ಒಂದು ಬರತೊಡಗುತ್ತದೆ.

ಪುರಾಣದಲ್ಲಿ ಹಾವಿನ ಕುರಿತಾಗಿ ಹಲವು ಕಥೆಗಳು ಇದೆ. ಅದರಲ್ಲಿ ಪ್ರಮುಖವಾಗಿ ಜನಮೇಜಯ ನಡೆಸಿದ್ದ ಸರ್ಪಯಾಗ ಬಹಳ ವಿಶೇಷ. ಜನಮೇಜಯ ಯಾರು? ಆತ ಸರ್ಪಯಾಗ ನಡೆಸಿದ್ದು ಯಾಕೆ? ನಾಗರ ಪಂಚಮಿಗೆ ಏನು ಸಂಬಂಧ ಎಲ್ಲಾ ಕಥೆಗಳನ್ನು ಇಲ್ಲಿ ತಿಳಿಸಲಾಗಿದೆ.

Nagara Panchami Special Why did Janameya perform Sarpayaga 3

ಏನಿದು ಸರ್ಪಯಾಗ?
ಅಭಿಮನ್ಯುವಿನ ಪುತ್ರ ಪರೀಕ್ಷಿತನ ಮಗನಾದ ಜನಮೇಜಯ (Janamejaya) ವೈಶಂಪಾಯ ಮಹರ್ಷಿಯಿಂದ ಮಹಾಭಾರತದ (Mahabharata) ಕಥೆಯನ್ನು ಕೇಳುತ್ತಾನೆ. ತನ್ನ ತಂದೆ ಪರೀಕ್ಷಿತನು ಸರ್ಪ ರಾಜ ತಕ್ಷಕನಿಂದ ಕಚ್ಚಿ ಮೃತಪಟ್ಟಿದ್ದನ್ನು ತಿಳಿದು ಸರ್ಪಗಳ ಮೇಲೆ ಸೇಡು ತೀರಿಸಲು ಮುಂದಾಗುತ್ತಾನೆ. ನನ್ನ ತಂದೆಯನ್ನು ಕಚ್ಚಿದ ಸರ್ಪಗಳು ಲೋಕದಲ್ಲೇ ಇರಬಾರದು ಎಂದು ಸಂಕಲ್ಪ ಮಾಡಿ ದೊಡ್ಡ ಸರ್ಪಯಾಗಕ್ಕೆ ಮುಂದಾಗುತ್ತಾನೆ. ಇದನ್ನೂ ಓದಿ: ನಾಗರ ಪಂಚಮಿ | ಭಾರತದಲ್ಲಿ ಎಲ್ಲೆಲ್ಲಿ, ಆಚರಣೆ ಹೇಗೆ?

ಪರೀಕ್ಷಿತನು ತಕ್ಷಕನಿಂದ ಸಾವನ್ನಪ್ಪಲು ಕಾರಣವಿದೆ. ಕುರುಕ್ಷೇತ್ರ ಯುದ್ಧ ಮುಗಿದು ಕೆಲ ವರ್ಷ ಆಡಳಿತ ನಡೆಸಿದ ಪಾಂಡವರು ಸಶರೀರ ಸ್ವರ್ಗಾರೋಹಣಕ್ಕೆ ತೆರಳಿದರು. ಪಾಂಡವರ ನಂತರ ಅಭಿಮನ್ಯು – ಉತ್ತರೆಯ ಮಗ ಪರೀಕ್ಷಿತ ಹಸ್ತಿನಾವತಿಯ ಅರಸನಾದ. ಪರೀಕ್ಷಿತ ಒಮ್ಮೆ ಕಾಡಿಗೆ ಬೇಟೆಗೆಂದು ಹೋದಾಗ ಬಾಯಾರಿಕೆ ಆಗುತ್ತದೆ. ಈ ವೇಳೆ ಆತ ಶಮಿಕ ಮುನಿಯ ಆಶ್ರಮವನ್ನು ಪ್ರವೇಶಿಸುತ್ತಾನೆ. ಮುನಿ ಧ್ಯಾನಸ್ಥನಾಗಿದ್ದ ಕಾರಣ ಪರೀಕ್ಷಿತನನ್ನು ಸರಿಯಾಗಿ ಸತ್ಕರ ಮಾಡಿರಲಿಲ್ಲ. ಇದರಿಂದ ಕೋಪಗೊಂಡ ಪರೀಕ್ಷಿತ ಅಲ್ಲೇ ಸತ್ತು ಬಿದ್ದಿದ್ದ ಒಂದು ಹಾವನ್ನು ಮುನಿಯ ಕೊರಳಿಗೆ ಹಾಕಿ ಹೊರಟುಹೋಗುತ್ತಾನೆ. ನಂತರ ಮುನಿಪುತ್ರ ಶೃಂಗಿ ಆಶ್ರಮಕ್ಕೆ ಬಂದು ತಂದೆಯ ಕೊರಳಿನಲ್ಲಿ ಹಾವು ಇರುವುದನ್ನು ಕಂಡು ಸಿಟ್ಟಾಗುತ್ತಾನೆ. ಅಷ್ಟೇ ಅಲ್ಲದೇ ನನ್ನ ತಂದೆಯ ಕೊರಳಿಗೆ ಸತ್ತ ಹಾವನ್ನು ಹಾಕಿ ಅವಮಾನ ಮಾಡಿದವನು 7 ದಿನದ ಒಳಗಡೆ ಸರ್ಪ ಕಡಿದು ಸಾವನ್ನಪ್ಪಲಿ ಎಂದು ಶಪಿಸುತ್ತಾನೆ. ಈ ಶಾಪಕ್ಕೆ ತುತ್ತಾಗಿದ್ದ ಪರೀಕ್ಷಿತ ತಕ್ಷಕನಿಂದ ಸಾವನ್ನಪ್ಪುತ್ತಾನೆ.

Nagara Panchami Special Why did Janameya perform Sarpayaga 1

ತಂದೆಯ ಸಾವಿಗೆ ತಕ್ಷಕ ಕಾರಣ ಎಂದು ತಿಳಿದ ಜನಮೇಜ ದೊಡ್ಡ ಸರ್ಪಯಾಗ ಮಾಡುವಂತೆ ಋತ್ವಿಜರಿಗೆ ಸೂಚಿಸುತ್ತಾನೆ. ಸರ್ಪ ಯಾಗದಲ್ಲಿ ಋತ್ವಿಜರು ಒಂದೊಂದೇ ಸರ್ಪದ ಹೆಸರು ಹೇಳಿ ಆವಾಹನೆ ಮಾಡುತ್ತಿದ್ದರು. ಸರ್ಪವು ಪ್ರಜ್ವಲಿಸಿ ಉರಿಯುತಿದ್ದ ಯಾಗ ಕುಂಡದೊಳಗೆ ಬಿದ್ದು ಒದ್ದಾಡಿ ಬೆಂದುಹೋಗುತ್ತಿದ್ದವು.

ಎಲ್ಲಾ ಹಾವುಗಳ ದಹನವಾಗಬೇಕೆಂಬ ಪ್ರತಿಜ್ಞೆ ಈಡೇರಬೇಕೆಂದು ಜನಮೇಜಯ ಪಣ ತೊಟ್ಟಿದ್ದ. ತನ್ನ ಸಂತತಿಯವರು ಎಲ್ಲರೂ ಬಲಿಯಾಗುತ್ತಿರುವುದನ್ನು ಕಂಡು ತಕ್ಷಕ ದೇವೇಂದ್ರನ ಮೊರೆ ಹೋಗಿ ರಕ್ಷಿಸುವಂತೆ ಕೇಳಿಕೊಳ್ಳುತ್ತಾನೆ. ಆಗ ದೇವೇಂದ್ರ ನನ್ನನ್ನು ಗಟ್ಟಿಯಾಗಿ ಹಿಡಿದಿಕೋ ಯಾವುದೇ ಯಾಗಗಳು ನಿನ್ನನ್ನು ಸೆಳೆಯಲು ಸಾಧ್ಯವಾಗುವುದಿಲ್ಲ ಎಂದು ಅಭಯ ನೀಡುತ್ತಾನೆ. ಇಂದ್ರನ ಮಾತಿನಂತೆ ತಕ್ಷಕ ಆತನನ್ನು ಗಟ್ಟಿ ಹಿಡಿದುಕೊಳ್ಳುತ್ತಾನೆ.

ಸರ್ಪಯಾಗದ ತೀವ್ರತೆಗೆ ಬೆದರಿದ ಸರ್ಪಗಳು ತಮ್ಮ ಜರತ್ಕಾರುವಿನ ಮೊರೆ ಹೋಗುತ್ತವೆ. ಸರ್ಪಗಳ ಪ್ರಾರ್ಥನೆಗೆ ಒಗೊಟ್ಟ ಜರತ್ಕಾರು ತನ್ನ ಪುತ್ರನಾದ ಆಸ್ತಿಕ ಋಷಿಯನ್ನು ಜನಮೇಜಯನಲ್ಲಿಗೆ ಕಳುಹಿಸುತ್ತಾಳೆ. ಬ್ರಹ್ಮಚಾರಿಯಾದ ಆಸ್ತಿಕ ಜನಮೇಜಯ ನಡೆಸುತ್ತಿದ್ದ ಯಾಗಶಾಲೆಗೆ ಬರುತ್ತಾನೆ. ಇಂದ್ರ ಸಹಿತವಾಗಿ ತಕ್ಷಕ ಯಾಗಕ್ಕೆ ಬೀಳುವ ಸಮಯದಲ್ಲಿ ಯಾಗ ಶಾಲೆ ಪ್ರವೇಶಿಸಿದ ತಕ್ಷಕ ಬ್ರಹ್ಮಚಾರಿಗೆ ದಕ್ಷಿಣೆ ನೀಡದೇ ಯಾಗ ಹೇಗೆ ನಡೆಸುತ್ತೀರಿ ಎಂದು ಪ್ರಶ್ನಿಸುತ್ತಾನೆ.

nagara panchami 1 1

ಈ ವೇಳೆ ಇಕ್ಕಟ್ಟಿಗೆ ಸಿಲುಕಿದ ಜನಮೇಜಯ, ನಿನಗೆ ಏನು ಬೇಕೋ ಕೇಳು. ಅದನ್ನು ನಾನು ನೀಡುತ್ತೇನೆ ಎಂದು ಹೇಳುತ್ತಾನೆ. ತಕ್ಷನಿಂದ ಈ ಮಾತು ಬಂದ ಕೂಡಲೇ ಈಗಲೇ ಸರ್ಪಯಾಗ ನಿಲ್ಲಿಸು. ಇದೇ ನೀನು ನನಗೆ ನೀಡುವ ದಕ್ಷಿಣೆ ಎಂದು ಆಸ್ತಿಕ ಹೇಳುತ್ತಾನೆ. ಆಸ್ತಿಕ ಕೇಳಿದ ಈ ದಕ್ಷಿಣೆಯಿಂದ ಏನು ಮಾಡಬೇಕು ಎಂದು ತೋಚದೇ ಕೊನೆಗೆ ಕೊಟ್ಟ ಮಾತಿನಂತೆ ಯಾಗವನ್ನು ನಿಲ್ಲಿಸಿದ. ತನ್ನ ತಂದೆಯ ಸಾವಿಗೆ ಕಾರಣನಾದ ತಕ್ಷಕ ಕಣ್ಣೆದುರೇ ಇದ್ದರೂ ಜನಮೇಜಯ ಏನು ಮಾಡುವಂತಿರಲಿಲ್ಲ.

ಯಾಗ ನಿಂತ ಬಳಿಕ ಆಸ್ತಿಕ, ಪ್ರಾಣಿ ಹಿಂಸೆ ಮಾಡಬಾರದು ಜನಮೇಜಯನಿಗೆ ಎಂದು ಬುದ್ಧಿ ಹೇಳುತ್ತಾನೆ. ನಂತರ ಇಂದ್ರ ಶೃಂಗಿಯ ಶಾಪದಿಂದ ನಿನ್ನ ತಂದೆ ಪರೀಕ್ಷಿತ ಮೃತಪಡುತ್ತಾನೆ. ಇದರಲ್ಲಿ ತಕ್ಷಕನ ಪಾತ್ರ ಏನಿಲ್ಲ ಎಂದು ತಿಳಿಹೇಳುತ್ತಾನೆ. ಇಂದ್ರನ ಹೇಳಿದ ಕಥೆಯಿಂದ ಜನಮೇಜಯನಿಗೆ ಸರ್ಪಗಳ ಮೇಲಿದ್ದ ಸಿಟ್ಟು ಕಡಿಮೆಯಾಗುತ್ತದೆ.

ನಾಗಕುಲವೇ ನಾಶವಾಗುವ ಸಂದರ್ಭದಲ್ಲಿ ಆಸ್ತಿಕ ಬಂದು ಈ ಸರ್ಪ ಯಜ್ಞವನ್ನು ತಡೆದದ್ದು ಶ್ರಾವಣ ಮಾಸದ ಐದನೇ ದಿನ. ಆಸ್ತಿಕ ನಾಗಯಜ್ಞ ನಿಲ್ಲಿಸಿ ನಾಗಗಳ ಕುಲವನ್ನು ಉಳಿಸಿದ ದಿನವನ್ನೇ ನಾಗರ ಪಂಚಮಿಯಾಗಿ ಆಚರಿಸಲಾಗುತ್ತದೆ.

TAGGED:JanamejayaMahabharatanagara panchamiಆಸ್ತಿಕನಾಗರ ಪಂಚಮಿಪುರಾಣಮಹಾಭಾರತ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

2nd PUC Exam
Bagalkot

ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟ

Public TV
By Public TV
11 minutes ago
DK Suresh
Bengaluru City

ಡಿಕೆಶಿ ಸಿಎಂ ಆಗಬೇಕೆಂಬ ಆಸೆಯಿದೆ, ಇವತ್ತೇ ಆಗ್ತಾರೆ ಅಂತ ಹೇಳಿದ್ನಾ?: ಡಿಕೆಸು ತಿರುಗೇಟು

Public TV
By Public TV
19 minutes ago
Chikkamagaluru Suicide 2
Chikkamagaluru

ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

Public TV
By Public TV
24 minutes ago
northrop b 2 spirit stealth bomber 1
Latest

ಇರಾನ್‌ನ ಹಿಟ್‌ ಲಿಸ್ಟ್‌ ಸಿದ್ಧಪಡಿಸಿದ ಅಮೆರಿಕ – ಮಧ್ಯಪ್ರಾಚ್ಯದಲ್ಲಿ ಇಂದು ರಾತ್ರಿಯೇ ರಣಭೀಕರ ಕಾಳಗ?

Public TV
By Public TV
2 hours ago
Siddaramaiah 15
Bengaluru City

ಕರ್ನಾಟಕದಲ್ಲಿ ಹೆಚ್ಚಾದ ಗ್ಯಾಸ್ ಟ್ರಬಲ್; ರಾಜ್ಯ V/S ಕೇಂದ್ರದ ನಡುವೆ ತಾರತಮ್ಯ ವಾರ್ – ಸಿದ್ದರಾಮಯ್ಯ ಕಿಡಿ

Public TV
By Public TV
2 hours ago
siddaramaiah narendramodi delhi 2
Bengaluru City

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಸರ್ವನಾಶ – ಸಿಎಂ, ಡಿಕೆಶಿ, ಸುರ್ಜೇವಾಲಾ ಖಂಡನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?