Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಪದವಾಗಿ ಸತ್ತರೂ ಪದ್ಯವಾಗಿ ಬದುಕಬಹುದು- ಅಪರ್ಣಾರನ್ನು ನೆನೆದು ಕವನ ಬರೆದ ಪತಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪದವಾಗಿ ಸತ್ತರೂ ಪದ್ಯವಾಗಿ ಬದುಕಬಹುದು- ಅಪರ್ಣಾರನ್ನು ನೆನೆದು ಕವನ ಬರೆದ ಪತಿ

Cinema

ಪದವಾಗಿ ಸತ್ತರೂ ಪದ್ಯವಾಗಿ ಬದುಕಬಹುದು- ಅಪರ್ಣಾರನ್ನು ನೆನೆದು ಕವನ ಬರೆದ ಪತಿ

Public TV
Last updated: July 16, 2024 6:59 pm
Public TV
Share
2 Min Read
aparna 2
SHARE

ನಿರೂಪಕಿ ಅಪರ್ಣಾ (Aparna) ನಿಧನ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಆಘಾತವುಂಟು ಮಾಡಿದೆ. ಇದರ ನಡುವೆ  ಅಪರ್ಣಾ ನೆನೆದು ಪತಿ ಕವನ ಬರೆದಿದ್ದಾರೆ. ಪದವಾಗಿ ಸತ್ತರೂ ಪದ್ಯದ ಮೂಲಕ ಬದುಕಬಹುದು ಎಂದು ಅಪರ್ಣಾ ಕುರಿತು ಪತಿ ನಾಗರಾಜ್ ವಸ್ತಾರೆ (Nagaraj Vastarey) ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಪತ್ನಿಯನ್ನು ನೆನೆದು ಬರೆದ ಸಾಲುಗಳು ಹೀಗಿವೆ. ಇದನ್ನೂ ಓದಿ:ನಾನು ಬೆಂಕಿಯ ಹಾದಿಯಲ್ಲಿ ಸಾಗಿದ್ದೇನೆ: ವೈಯಕ್ತಿಕ ಜೀವನದ ಬಗ್ಗೆ ಮೌನ ಮುರಿದ ಸ್ಯಾಮ್

ಕಚ್ಚುವ ಹಾವಿನ ಹಲ್ಲಡಿಗೇ ಕಡಿತದ ನಂಜು ತೆಗೆಯುವ
ಮದ್ದುಂಟೆಂದು ಕೇಳಪಟ್ಟಿದ್ದೇನೆ
ಯಾವುದೋ ದೇಶದ ಎಂಥದೋ ಕೆಲಮಂದಿ
ಮೈನಂಜಾಗಿ ನರಳುವವರ ಮೇಲೆ ಹಾವು ಹರಿಯಿಸಿ ವಿಷ ತೆಗೆದಿದ್ದುಂಟಂತೆ
ಇದ್ದರೂ ಇರಬಹುದು
ಯಾಕೆಂದರೆ ಮದ್ದಿಗೆ ತಕ್ಕ ಮರುಮದ್ದು ಆ ಮದ್ದೊಳಗೇನೆ ಇದ್ದೀತು
ಉದಾಹರಣೆಗೆ ಕನ್ನಡದ ಮದ್ದನ್ನೇ ತೆಗೆದುಕೊಳ್ಳಿ
ಅದು ಕೇಡೆಸಗುವ ಮದ್ದೂ ಆಗಬಹುದು
ಹುಷಾರು ತಪ್ಪಿದರೆ ಮೈಸಂತಯಿಸಿ ಸಲಹುವ ಔಷಧವೂ ಆಗಬಹುದು
ಅಂದಮೇಲೆ ಮದ್ದು ಮಾಡುವುದೆಂದರೆ ಎರಡೂ ಹವುದು
ಹಾಗೇ ಹಾವಿನ ವಿಷದೊಳಗೆ ಇವೆರಡೂ ಇರಬಹುದು
ವಿಷದೊಳಗೇ ಪ್ರತಿವಿಷವುಂಟೆಂದು ಲೋಕರೂಢಿ
ಪದಕ್ಕೆ ತಕ್ಕ ಪ್ರತಿಪದವಾದರೂ ಪದದೊಳಗೇ ಇರುವುದು
ಕೆಲವೊಮ್ಮೆ ಪದವೇ ಪದ ಹುಟ್ಟಿಸುವುದು
ಅಂದರೆ ಪ್ರತಿ ಪದಕ್ಕೂ ಪ್ರತಿಪದವಿರುವುದು
ಹುಟ್ಟಿಗೆ ಸಾವು ಬಿಚ್ಚಿಗೆ ಕಟ್ಟಿರುವ ಹಾಗೆ ಪಟ್ಟುಪಟ್ಟಿಗೂ
ಮರುಪಟ್ಟಿರುವುದು ಹವುದು
ಮುಯಿಗೆ ಮುಯಿ ಅನ್ನುವರಲ್ಲ ಬಹುಶಃ ಹಾಗೇ
ಇನ್ನು ಪದಪದಕ್ಕು ದಪದಪಕ್ಕೂ ವ್ಯತ್ಯಾಸವೇನು
ಬರೇ ಪದಪದದಿಂದಲೇ ದಪದಪ ರಾಚಬಹುದು
ದಪದಪವೆನ್ನುತ್ತಲೇ ಪದಬರೆದು ಚಚ್ಚಬಹುದು
ಕೊಲ್ಲುವ ಖಡುಗವೇ ಕಾಯಲುಂಟೆಂಬುದು ಹಳೆಯ ಮಾತು
ಕಚ್ಚಿದ ಹಾವು ನಂಜೊಡನೆ ಮದ್ದೂ ಇಳಿಬಿಡುವುದೆಂದು
ಇನ್ನೊಂದು ಅಂಬೋಣ
ಅಂದರೆ ನಂಜೊಳಗಿನ ನಂಜಾಗಿ ಮದ್ದಿರುವುದು
ಅದನ್ನು ಆಯ್ದು ಸೋಸಿ ಮದ್ದಾಗಿಸಿಕೊಳ್ಳುವುದೂ ವಿದ್ಯೆಯೇ
ಇದೇ ನೇರಕ್ಕೆ ಸದ್ದೊಳಗಿನ ಸದ್ದಾಗಿ ತುಸು ಮೌನವಿದ್ದೀತು
ಮೌನವಾದರೂ ಸದ್ದಿಲ್ಲದ ಸದ್ದಿನದೇ ತುಸುತುಣುವು
ಈ ನಡುವೆ ಬದುಕನ್ನು ಹಾವಿಗೆ ಹೋಲಿಸಬಹುದು
ತನ್ನ ತಾನೇ ತಿನ್ನಹೊಂಚುವ ಹಾವಿಗೆ
ಬಾಯೊಳಕ್ಕೆ ಬಾಲವಿರಿಸಿ ಉಣ್ಣಹೊರಟ ಹಾವು
ಈ ಬದುಕಿನ ವರ್ತುಲವನ್ನೇ ಕುರಿತಾಡೀತು
ಹುಟ್ಟಿ ಸತ್ತು ಸತ್ತು ಹುಟ್ಟಿ ಹುಟ್ಟಿ ಸತ್ತು ಸತ್ತು ಹುಟ್ಟಿ
ಹೀಗೆ ಮತ್ತೆ ಮತ್ತೆ ತೆತ್ತು ಇತ್ತು ಇತ್ತು ತೆತ್ತು ತೆತ್ತು ಇತ್ತು ಇತ್ತು ತೆತ್ತು
ಜೀವ ತೆತ್ತಷ್ಟೇ ಜೀವವಿತ್ತು ಜೀವವಿತ್ತಷ್ಟೇ ಜೀವ ತೆತ್ತು
ಬದುಕಿನ ಬೇಸಾಯಕ್ಕೆ ಸಾವನ್ನೊತ್ತೆಯಿಟ್ಟು
ಸಾವಿನ ಸಾಗುವಳಿಗೆ ಬದುಕನ್ನೇ ಕತ್ತೆಯಾಗಿಸಿಬಿಟ್ಟು
ಕೆಲವೊಮ್ಮೆ ತನಗೂ ಮಿಕ್ಕು ದೊಡ್ಡ ಸಂಗತಿಯನ್ನೇ ನುಂಗಲೆಣಿಸುವ
ಹಾವು ಸಾವುಬದುಕಿನ ರೂಪಕವಲ್ಲವೇನು
ಕೆಲವೊಮ್ಮೆ ಪದ್ಯವೂ ತನಗೂ ದೊಡ್ಡದಾದ ರೂಪಕವನ್ನು
ನುಂಗಿ ತೇಗಬೇಕು
ಕ್ಯಾನ್ಸರಿರುವ ಮೈಯಿ ತನ್ನನ್ನು ತಾನೇ ನುಂಗಲೆಣಿಸುವುದಿಲ್ಲವೇ
ಥೇಟು ಹಾಗೆ
ಇದು ಅದನ್ನೂ ಅದು ಇದನ್ನೂ ಒಂದೇ ಸಮ ಕಬಳಿಸಲೆಣಿಸುವುದಲ್ಲವೇ
ಥೇಟು ಹಾಗೆ
ಅದೂ ಇದೂ ಒಂದೇ ಧಾತುವಿನ ಎರಡು ಮೊಹರಂತಲ್ಲವೇ
ಥೇಟು ಹಾಗೆ
ಖೀಮೋಥೆರಪಿಯೆಂದು ವಿಷವನ್ನೂಡಿ
ಮೈಯನ್ನು ಅದರ ಉಳಿಗಾಲಕ್ಕೆಂದು ಅಷ್ಟಿಷ್ಟೇ ಅಳಿಸುವುದಿಲ್ಲವೇ
ಥೇಟು ಹಾಗೆ
ಸತ್ತು ಸತ್ತು ಬದುಕುವ ಪರಿಯೇನೆಂದು ಕ್ಯಾನ್ಸರುಮದ್ದು
ತಿಳಿಹೇಳಬಹುದು
ಮದ್ದೇ ನಂಜೆಂದು ನಂಜೇ ಮದ್ದೆಂದು ಕಂಡವರಿಗಿಂತ
ಉಂಡವರು ಹೇಳಬಹುದು
ಇದ್ದೇನು ಗೆದ್ದೇನೆಂದು ಗೆದ್ದೇನು ಇದ್ದೇನೆಂದು
ಇದ್ದು ಗೆದ್ದ ಮೇಲೂ ಗೆದ್ದು ಇದ್ದ ಮೇಲೂ ಮಂತ್ರದಂತೆ ಸದಾ
ಪಿಟಿಪಿಟಿಸಬಹುದು
ಕೊಲ್ಲುವ ಖಡುಗವೇ ಕಾಯುವ ಸರಕೆಂದು ನಂಬಬಹುದು
ಪದವಾಗಿ ಸತ್ತರೂ ಪದ್ಯವಾಗಿ ಬದುಕಬಹುದು
(ಇದು 2023ರ ಜನವರಿಯಲ್ಲಿ ಬರೆದದ್ದು. ಅಪರ್ಣೆಯ ಚಿತ್ರ ಇದೇ 2024ರ ಏಪ್ರಿಲ್ 9ನೇ ತಾರೀಖಿನ ಯುಗಾದಿಯದ್ದು.)

TAGGED:Aparnanagaraj vastareysandalwoodಅಪರ್ಣಾ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

IPL MI LSG
Cricket

ಲಕ್ನೋ ವಿರುದ್ಧ ಮುಂಬೈಗೆ 6 ವಿಕೆಟ್‌ಗಳ ಜಯ

Public TV
ByPublic TV
23 minutes ago
Vijay 2
Latest

8 ಗ್ರಾಂ ಚಿನ್ನ, 6 ಸಿಲಿಂಡರ್‌ ಉಚಿತ, ಪದವೀಧರರಿಗೆ 4,000 ಭತ್ಯೆ – ʻವಿಜಯʼ ಭರವಸೆಯತ್ತ ಜನರ ಚಿತ್ತ!

Public TV
ByPublic TV
28 minutes ago
Himanta Sarmas BJP To Win 70 80 Of Assams 126 Seats NDA Sweep Exit Poll
Latest

WE ARE BACK, back with a BANG! – ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಜಯ – 3ನೇ ಅವಧಿಗೂ ಶರ್ಮಾ ಸಿಎಂ ಆಗೋದು ಫಿಕ್ಸ್‌

Public TV
ByPublic TV
50 minutes ago
SUVENDU ADHIKARI
Latest

ಬಂಗಾಳದಲ್ಲಿ ಬಿಜೆಪಿ ಗೆಲುವು, ಟಿಎಂಸಿ ಸೋಲಿಗೆ ಕಾರಣಗಳೇನು?

Public TV
ByPublic TV
56 minutes ago
Modi 3
Latest

Assembly Elections Results 2026 | ಪುದುಚೇರಿಯಲ್ಲಿ ಎನ್‌ಡಿಎಗೆ ಮತ್ತೆ ಅಧಿಕಾರ

Public TV
ByPublic TV
1 hour ago
Mamata Banerjee West Bengal Suvendu Adhikari
Latest

ಮಮತಾಗೆ 15,000ಕ್ಕೂ ಹೆಚ್ಚು ಮತಗಳಿಂದ ಹೀನಾಯ ಸೋಲು – ಸುವೆಂದು ಅಧಿಕಾರಿಗೆ ಜಯ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?