Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪದವಾಗಿ ಸತ್ತರೂ ಪದ್ಯವಾಗಿ ಬದುಕಬಹುದು- ಅಪರ್ಣಾರನ್ನು ನೆನೆದು ಕವನ ಬರೆದ ಪತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪದವಾಗಿ ಸತ್ತರೂ ಪದ್ಯವಾಗಿ ಬದುಕಬಹುದು- ಅಪರ್ಣಾರನ್ನು ನೆನೆದು ಕವನ ಬರೆದ ಪತಿ

Cinema

ಪದವಾಗಿ ಸತ್ತರೂ ಪದ್ಯವಾಗಿ ಬದುಕಬಹುದು- ಅಪರ್ಣಾರನ್ನು ನೆನೆದು ಕವನ ಬರೆದ ಪತಿ

Public TV
Last updated: July 16, 2024 6:59 pm
Public TV
Share
2 Min Read
aparna 2
SHARE

ನಿರೂಪಕಿ ಅಪರ್ಣಾ (Aparna) ನಿಧನ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಆಘಾತವುಂಟು ಮಾಡಿದೆ. ಇದರ ನಡುವೆ  ಅಪರ್ಣಾ ನೆನೆದು ಪತಿ ಕವನ ಬರೆದಿದ್ದಾರೆ. ಪದವಾಗಿ ಸತ್ತರೂ ಪದ್ಯದ ಮೂಲಕ ಬದುಕಬಹುದು ಎಂದು ಅಪರ್ಣಾ ಕುರಿತು ಪತಿ ನಾಗರಾಜ್ ವಸ್ತಾರೆ (Nagaraj Vastarey) ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಪತ್ನಿಯನ್ನು ನೆನೆದು ಬರೆದ ಸಾಲುಗಳು ಹೀಗಿವೆ. ಇದನ್ನೂ ಓದಿ:ನಾನು ಬೆಂಕಿಯ ಹಾದಿಯಲ್ಲಿ ಸಾಗಿದ್ದೇನೆ: ವೈಯಕ್ತಿಕ ಜೀವನದ ಬಗ್ಗೆ ಮೌನ ಮುರಿದ ಸ್ಯಾಮ್

ಕಚ್ಚುವ ಹಾವಿನ ಹಲ್ಲಡಿಗೇ ಕಡಿತದ ನಂಜು ತೆಗೆಯುವ
ಮದ್ದುಂಟೆಂದು ಕೇಳಪಟ್ಟಿದ್ದೇನೆ
ಯಾವುದೋ ದೇಶದ ಎಂಥದೋ ಕೆಲಮಂದಿ
ಮೈನಂಜಾಗಿ ನರಳುವವರ ಮೇಲೆ ಹಾವು ಹರಿಯಿಸಿ ವಿಷ ತೆಗೆದಿದ್ದುಂಟಂತೆ
ಇದ್ದರೂ ಇರಬಹುದು
ಯಾಕೆಂದರೆ ಮದ್ದಿಗೆ ತಕ್ಕ ಮರುಮದ್ದು ಆ ಮದ್ದೊಳಗೇನೆ ಇದ್ದೀತು
ಉದಾಹರಣೆಗೆ ಕನ್ನಡದ ಮದ್ದನ್ನೇ ತೆಗೆದುಕೊಳ್ಳಿ
ಅದು ಕೇಡೆಸಗುವ ಮದ್ದೂ ಆಗಬಹುದು
ಹುಷಾರು ತಪ್ಪಿದರೆ ಮೈಸಂತಯಿಸಿ ಸಲಹುವ ಔಷಧವೂ ಆಗಬಹುದು
ಅಂದಮೇಲೆ ಮದ್ದು ಮಾಡುವುದೆಂದರೆ ಎರಡೂ ಹವುದು
ಹಾಗೇ ಹಾವಿನ ವಿಷದೊಳಗೆ ಇವೆರಡೂ ಇರಬಹುದು
ವಿಷದೊಳಗೇ ಪ್ರತಿವಿಷವುಂಟೆಂದು ಲೋಕರೂಢಿ
ಪದಕ್ಕೆ ತಕ್ಕ ಪ್ರತಿಪದವಾದರೂ ಪದದೊಳಗೇ ಇರುವುದು
ಕೆಲವೊಮ್ಮೆ ಪದವೇ ಪದ ಹುಟ್ಟಿಸುವುದು
ಅಂದರೆ ಪ್ರತಿ ಪದಕ್ಕೂ ಪ್ರತಿಪದವಿರುವುದು
ಹುಟ್ಟಿಗೆ ಸಾವು ಬಿಚ್ಚಿಗೆ ಕಟ್ಟಿರುವ ಹಾಗೆ ಪಟ್ಟುಪಟ್ಟಿಗೂ
ಮರುಪಟ್ಟಿರುವುದು ಹವುದು
ಮುಯಿಗೆ ಮುಯಿ ಅನ್ನುವರಲ್ಲ ಬಹುಶಃ ಹಾಗೇ
ಇನ್ನು ಪದಪದಕ್ಕು ದಪದಪಕ್ಕೂ ವ್ಯತ್ಯಾಸವೇನು
ಬರೇ ಪದಪದದಿಂದಲೇ ದಪದಪ ರಾಚಬಹುದು
ದಪದಪವೆನ್ನುತ್ತಲೇ ಪದಬರೆದು ಚಚ್ಚಬಹುದು
ಕೊಲ್ಲುವ ಖಡುಗವೇ ಕಾಯಲುಂಟೆಂಬುದು ಹಳೆಯ ಮಾತು
ಕಚ್ಚಿದ ಹಾವು ನಂಜೊಡನೆ ಮದ್ದೂ ಇಳಿಬಿಡುವುದೆಂದು
ಇನ್ನೊಂದು ಅಂಬೋಣ
ಅಂದರೆ ನಂಜೊಳಗಿನ ನಂಜಾಗಿ ಮದ್ದಿರುವುದು
ಅದನ್ನು ಆಯ್ದು ಸೋಸಿ ಮದ್ದಾಗಿಸಿಕೊಳ್ಳುವುದೂ ವಿದ್ಯೆಯೇ
ಇದೇ ನೇರಕ್ಕೆ ಸದ್ದೊಳಗಿನ ಸದ್ದಾಗಿ ತುಸು ಮೌನವಿದ್ದೀತು
ಮೌನವಾದರೂ ಸದ್ದಿಲ್ಲದ ಸದ್ದಿನದೇ ತುಸುತುಣುವು
ಈ ನಡುವೆ ಬದುಕನ್ನು ಹಾವಿಗೆ ಹೋಲಿಸಬಹುದು
ತನ್ನ ತಾನೇ ತಿನ್ನಹೊಂಚುವ ಹಾವಿಗೆ
ಬಾಯೊಳಕ್ಕೆ ಬಾಲವಿರಿಸಿ ಉಣ್ಣಹೊರಟ ಹಾವು
ಈ ಬದುಕಿನ ವರ್ತುಲವನ್ನೇ ಕುರಿತಾಡೀತು
ಹುಟ್ಟಿ ಸತ್ತು ಸತ್ತು ಹುಟ್ಟಿ ಹುಟ್ಟಿ ಸತ್ತು ಸತ್ತು ಹುಟ್ಟಿ
ಹೀಗೆ ಮತ್ತೆ ಮತ್ತೆ ತೆತ್ತು ಇತ್ತು ಇತ್ತು ತೆತ್ತು ತೆತ್ತು ಇತ್ತು ಇತ್ತು ತೆತ್ತು
ಜೀವ ತೆತ್ತಷ್ಟೇ ಜೀವವಿತ್ತು ಜೀವವಿತ್ತಷ್ಟೇ ಜೀವ ತೆತ್ತು
ಬದುಕಿನ ಬೇಸಾಯಕ್ಕೆ ಸಾವನ್ನೊತ್ತೆಯಿಟ್ಟು
ಸಾವಿನ ಸಾಗುವಳಿಗೆ ಬದುಕನ್ನೇ ಕತ್ತೆಯಾಗಿಸಿಬಿಟ್ಟು
ಕೆಲವೊಮ್ಮೆ ತನಗೂ ಮಿಕ್ಕು ದೊಡ್ಡ ಸಂಗತಿಯನ್ನೇ ನುಂಗಲೆಣಿಸುವ
ಹಾವು ಸಾವುಬದುಕಿನ ರೂಪಕವಲ್ಲವೇನು
ಕೆಲವೊಮ್ಮೆ ಪದ್ಯವೂ ತನಗೂ ದೊಡ್ಡದಾದ ರೂಪಕವನ್ನು
ನುಂಗಿ ತೇಗಬೇಕು
ಕ್ಯಾನ್ಸರಿರುವ ಮೈಯಿ ತನ್ನನ್ನು ತಾನೇ ನುಂಗಲೆಣಿಸುವುದಿಲ್ಲವೇ
ಥೇಟು ಹಾಗೆ
ಇದು ಅದನ್ನೂ ಅದು ಇದನ್ನೂ ಒಂದೇ ಸಮ ಕಬಳಿಸಲೆಣಿಸುವುದಲ್ಲವೇ
ಥೇಟು ಹಾಗೆ
ಅದೂ ಇದೂ ಒಂದೇ ಧಾತುವಿನ ಎರಡು ಮೊಹರಂತಲ್ಲವೇ
ಥೇಟು ಹಾಗೆ
ಖೀಮೋಥೆರಪಿಯೆಂದು ವಿಷವನ್ನೂಡಿ
ಮೈಯನ್ನು ಅದರ ಉಳಿಗಾಲಕ್ಕೆಂದು ಅಷ್ಟಿಷ್ಟೇ ಅಳಿಸುವುದಿಲ್ಲವೇ
ಥೇಟು ಹಾಗೆ
ಸತ್ತು ಸತ್ತು ಬದುಕುವ ಪರಿಯೇನೆಂದು ಕ್ಯಾನ್ಸರುಮದ್ದು
ತಿಳಿಹೇಳಬಹುದು
ಮದ್ದೇ ನಂಜೆಂದು ನಂಜೇ ಮದ್ದೆಂದು ಕಂಡವರಿಗಿಂತ
ಉಂಡವರು ಹೇಳಬಹುದು
ಇದ್ದೇನು ಗೆದ್ದೇನೆಂದು ಗೆದ್ದೇನು ಇದ್ದೇನೆಂದು
ಇದ್ದು ಗೆದ್ದ ಮೇಲೂ ಗೆದ್ದು ಇದ್ದ ಮೇಲೂ ಮಂತ್ರದಂತೆ ಸದಾ
ಪಿಟಿಪಿಟಿಸಬಹುದು
ಕೊಲ್ಲುವ ಖಡುಗವೇ ಕಾಯುವ ಸರಕೆಂದು ನಂಬಬಹುದು
ಪದವಾಗಿ ಸತ್ತರೂ ಪದ್ಯವಾಗಿ ಬದುಕಬಹುದು
(ಇದು 2023ರ ಜನವರಿಯಲ್ಲಿ ಬರೆದದ್ದು. ಅಪರ್ಣೆಯ ಚಿತ್ರ ಇದೇ 2024ರ ಏಪ್ರಿಲ್ 9ನೇ ತಾರೀಖಿನ ಯುಗಾದಿಯದ್ದು.)

TAGGED:Aparnanagaraj vastareysandalwoodಅಪರ್ಣಾ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Ramesh Bandisiddegowda
Bengaluru City

ಮಿನಿಸ್ಟರ್ Vs MLA ವಾರ್ – ಸ್ವಪಕ್ಷೀಯ ಸಚಿವರ ವಿರುದ್ಧವೇ ಸರ್ಕಾರಿ ಜಮೀನು ನುಂಗಿದ ಆರೋಪ: ರಮೇಶ್ ಬಂಡಿಸಿದ್ದೇಗೌಡ

Public TV
By Public TV
1 minute ago
gold silver 1
Latest

ಇರಾನ್‌ ಯುದ್ಧ – ಚಿನ್ನ, ಬೆಳ್ಳಿ ದರ ಭಾರೀ ಇಳಿಕೆ

Public TV
By Public TV
23 minutes ago
ಸಾಂದರ್ಭಿಕ ಚಿತ್ರ
Bengaluru City

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಮೇ ತಿಂಗಳಲ್ಲಿ ಪಿಂಕ್ ಲೈನ್ ಸಂಚಾರಕ್ಕೆ ಮುಕ್ತ

Public TV
By Public TV
29 minutes ago
trump crude oil
Latest

ಟ್ರಂಪ್‌ ಹೇಳಿಕೆಯಿಂದ ಕಚ್ಚಾ ತೈಲದ ಬೆಲೆ ದಿಢೀರ್‌ ಭಾರೀ ಇಳಿಕೆ – ಈಗ ಮತ್ತೆ ಏರಿಕೆ

Public TV
By Public TV
31 minutes ago
Sriramulu 1
Districts

ರಾಜ್ಯದ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಖಚಿತ – ಶ್ರೀರಾಮುಲು

Public TV
By Public TV
51 minutes ago
donald trump 1 1
Latest

ನಾವು ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ – ಇರಾನ್‌ ತಿರುಗೇಟು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?