ಬೀದರ್: ಹುಬ್ಬಳ್ಳಿಯ ನೇಹಾ (Neha Hiremath) ಹತ್ಯೆ ಖಂಡಿಸಿ ಬೀದರ್ನಲ್ಲಿ ಪ್ರತಿಭಟನೆ ಮಾಡುವಾಗ ಗೃಹ ಸಚಿವ ಜಿ.ಪರಮೇಶ್ವರ್, ಪೌರಾಡಳಿತ ಸಚಿವ ರಹೀಂಖಾನ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ನಗರಸಭೆ ಸದಸ್ಯ ಶಶಿ ಹೊಸಳ್ಳಿ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ನಗರಸಭೆ ಸದಸ್ಯ ಶಶಿ ಹೊಸಳ್ಳಿ, ಹೋರಾಟಗಾರ ವಿರುಪಾಕ್ಷ ಗಾದಗಿ ವಿರುದ್ಧ ದೂರು ದಾಖಲಾಗಿದೆ. ದೂರು ದಾಖಲಾದ ಹಿನ್ನೆಲೆ ಇಂದು (ಭಾನುವಾರ) ನಗರಸಭೆ ಸದಸ್ಯ ಶಶಿ ಹೊಸಳ್ಳಿ ಅವರನ್ನು ನ್ಯೂಟೌನ್ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಇಂದು ಹುಬ್ಬಳ್ಳಿಗೆ ಜೆಪಿ ನಡ್ಡಾ – ನೇಹಾ ಕುಟುಂಬಸ್ಥರ ಭೇಟಿ ಸಾಧ್ಯತೆ
ಬೀದರ್ನಲ್ಲಿರುವ ಶಾಸಕ ಶೈಲೇಂದ್ರ ಬೆಲ್ದಾಳೆ ಅವರ ನಿವಾಸದಲ್ಲಿ ಶಶಿ ಹೊಸಳ್ಳಿಯನ್ನು ಬಂಧಿಸಿ, ಬೀದರ್ನ ನ್ಯೂಟೌನ್ ಸಿಪಿಐ ಸಂತೋಷ್ ಜೀಪ್ನಲ್ಲಿ ಕರೆದೊಯ್ದಿದ್ದಾರೆ. ಹಳ್ಳದಕೇರಿ (ಕೆ) ಗ್ರಾಮದ ಧನರಾಜ್ ಹಂಗರಗಿ ಎಂಬವರು ಮಾರ್ಕೆಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕಲಂ 153B, 504, 505(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಶನಿವಾರ ಬಸವೇಶ್ವರ ವೃತ್ತದಲ್ಲಿ ಹಿಂದೂಪರ ಹಾಗೂ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಈ ರೀತಿ ಹಿಂದೂ ಸಂಘಟನೆಗಳ ಮೇಲೆ ಅನ್ಯಾಯವಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಶಾಸಕ ಶೈಲೇಂದ್ರ ಬೆಲ್ದಾಳೆ ಕಿಡಿಕಾರಿದ್ದರು. ಇದನ್ನೂ ಓದಿ: ನೇಹಾ, ಫಯಾಜ್ ಫೋಟೋದೊಂದಿಗೆ ಜಸ್ಟಿಸ್ ಫಾರ್ ಲವ್ ಅಂದ ಯುವಕರು!