Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾಖೆಗೆ ಬಂದು ಸಂಘದ ಶಿಕ್ಷಣ ಪಡೆಯಿರಿ, ನಿಮಗೂ ಒಳ್ಳೆಯದು – ಹೆಚ್‍ಡಿಕೆಗೆ ಕಟೀಲ್ ಸಲಹೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶಾಖೆಗೆ ಬಂದು ಸಂಘದ ಶಿಕ್ಷಣ ಪಡೆಯಿರಿ, ನಿಮಗೂ ಒಳ್ಳೆಯದು – ಹೆಚ್‍ಡಿಕೆಗೆ ಕಟೀಲ್ ಸಲಹೆ

Districts

ಶಾಖೆಗೆ ಬಂದು ಸಂಘದ ಶಿಕ್ಷಣ ಪಡೆಯಿರಿ, ನಿಮಗೂ ಒಳ್ಳೆಯದು – ಹೆಚ್‍ಡಿಕೆಗೆ ಕಟೀಲ್ ಸಲಹೆ

Public TV
Last updated: October 6, 2021 8:49 am
Public TV
Share
2 Min Read
nalin kumar bjp shivamogga 2
SHARE

– ಕಾಮಾಲೆ ರೋಗದವರಿಗೆ ಕಾಣೋದೆಲ್ಲಾ ಹಳದಿ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಶಾಖೆಗೆ ಬಂದು ಸಂಘದ ಶಿಕ್ಷಣ ಪಡೆಯಿರಿ, ನಿಮಗೂ ಒಳ್ಳೆಯದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಲಹೆ ನೀಡಿದರು.

Contents
  • – ಕಾಮಾಲೆ ರೋಗದವರಿಗೆ ಕಾಣೋದೆಲ್ಲಾ ಹಳದಿ
  • ಕುಟುಂಬದವರಿಗೆ ಎಲ್ಲ ಅಧಿಕಾರ ಕೊಟ್ಟವರು!
  • ಮತಗಟ್ಟೆ ಕಾರ್ಯಕ್ರಮ ಮುಗಿಸಿದೆ!
  • ಕಠಿಣವಾದ ಶಿಕ್ಷೆ ಆಗಬೇಕು!

ಆರ್‌ಎಸ್‌ಎಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ ನೀಡಿರುವ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಮಾಲೆ ರೋಗದವರಿಗೆ ಕಾಣೋದೆಲ್ಲಾ ಹಳದಿ. ಕುಮಾರಸ್ವಾಮಿ ಅವರು ಸಂಘದ ವಿರುದ್ಧ ಆರೋಪ ಮಾಡಿದ್ದಾರೆ. ಅವರಿಗೆ ಸಂಘದ ವಿಚಾರಧಾರೆ ಸರಿಯಾಗಿ ತಿಳಿದಿಲ್ಲ. ಅವರು ಶಾಖೆಗೆ ಭೇಟಿ ನೀಡಿ ಸಂಘದ ಚಟುವಟಿಕೆ ತಿಳಿದುಕೊಳ್ಳುವುದು ಒಳ್ಳೆಯದು. ಕುಮಾರಸ್ವಾಮಿ ಅವರೇ ಶಾಖೆಗೆ ಬಂದು ಸಂಘದ ಶಿಕ್ಷಣ ಪಡೆಯಿರಿ ನಿಮಗೂ ಒಳ್ಳೆಯದು ಆಗುತ್ತದೆ ಎಂದು ಸಲಹೆ ನೀಡಿದರು. ಇದನ್ನೂ ಓದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ- ಹವಾಮಾನ ಇಲಾಖೆ ಮುನ್ಸೂಚನೆ

nalin kumar bjp shivamogga 1

ಕುಟುಂಬದವರಿಗೆ ಎಲ್ಲ ಅಧಿಕಾರ ಕೊಟ್ಟವರು!

ಸಂಘ ಈ ದೇಶದಲ್ಲಿ ರಾಷ್ಟ್ರಭಕ್ತಿ ಉದ್ದೀಪನ ಮಾಡಿದೆ. ಪ್ರತಿಯೊಬ್ಬ ವ್ಯಕ್ತಿಯನ್ನು ರಾಷ್ಟ್ರದೃಷ್ಟಾನ ಮಾಡಬೇಕು ಎಂಬ ಚಿಂತನೆಯಿಂದ ಅವರಿಗೆ ಆರ್‌ಎಸ್‌ಎಸ್ ಶಿಕ್ಷಣ ಕೊಡುತ್ತೆ. ಅವರು ಅಧಿಕಾರದಲ್ಲಿ ಇದ್ದಾಗ ಜಾತಿವಾದದಲ್ಲಿ ಎಲ್ಲರನ್ನು ತೆಗೆದುಕೊಳ್ಳುತ್ತಿದ್ದರು. ಕುಟುಂಬ ರಾಜಕಾರಣ ಮಾಡಿದರು. ಕುಟುಂಬದವರಿಗೆ ಎಲ್ಲ ಅಧಿಕಾರ ಕೊಟ್ಟವರು. ಇಂತಹವರಿಂದ ಇದನ್ನು ಬಿಟ್ಟು ಬೇರೆ ನಿರೀಕ್ಷೆ ಮಾಡಲು ಸಾಧ್ಯವಾ? ಸಂಘದ ಶಿಕ್ಷಣ ಪಡೆದವರು ಐಎಎಸ್, ಐಪಿಎಸ್ ಅಧಿಕಾರಿ ಆದರೆ ನಾವು ಸಂತೋಷ ಪಡುತ್ತೇವೆ. ಅವರಿಂದಾಗಿ ದೇಶಕ್ಕೆ ಇನ್ನಷ್ಟು ಒಳ್ಳೆಯದು ಆಗುತ್ತದೆ ಎಂದರು.

rss

ಸಂಘದ ಶಿಕ್ಷಣ ಪಡೆದವರು ಸರ್ಕಾರದ ಯಾವ ಹುದ್ದೆಯಲ್ಲಿ ಇರಬಾರದು ಎಂದು ಹೇಗೆ ಹೇಳ್ತಾರೆ? ಈ ದೇಶದ ರಾಷ್ಟ್ರಪತಿ, ಈ ದೇಶದ ಪ್ರಧಾನ ಮಂತ್ರಿ ಸಂಘದ ಸ್ವಯಂ ಸೇವಕರು. ಸಂಘದ ಶಾಖೆಯಲ್ಲಿ ಸಂಸ್ಕಾರ ಕೊಡುವ ಕೆಲಸ ಮಾಡುತ್ತದೆ ಎಂದು ತಿಳಿಸಿದರು.

ಮತಗಟ್ಟೆ ಕಾರ್ಯಕ್ರಮ ಮುಗಿಸಿದೆ!

ಇದೇ ವೇಳೆ ಉಪ ಚುನಾವಣೆ ವಿಚಾರವಾಗಿ ಮಾತನಾಡಿದ ಕಟೀಲ್, ಸಿಂದಗಿ ಹಾಗೂ ಹಾನಗಲ್ ಕ್ಷೇತ್ರದಲ್ಲಿ ಉಪ ಚುನಾವಣೆ ಘೋಷಣೆ ಆಗಿದೆ. ಬಿಜೆಪಿ ಈಗಾಗಲೇ ಮತಗಟ್ಟೆ ಕಾರ್ಯಕ್ರಮ ಮುಗಿಸಿದೆ. ಎಲ್ಲ ಕಾರ್ಯಕರ್ತರು ಮನೆ ಮನೆ ಸಂಪರ್ಕ ಕಾರ್ಯಕ್ರಮ ಆರಂಭಿಸಿದ್ದಾರೆ. ಎರಡು ಕಡೆಯಲ್ಲಿ ಬಿಜೆಪಿ ಪರವಾದ ಅಲೆ ಇದೆ. ಎರಡು ಕಡೆ ಬಿಜೆಪಿ ಅಭೂತಪೂರ್ವವಾದ ಗೆಲುವು ಸಾಧಿಸುತ್ತದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳು, ಯೋಜನೆಗಳು ಹಾಗೂ ಸರ್ಕಾರದ ಸಾಧನೆ ಮುಂದಿಟ್ಟುಕೊಂಡು ಜನರ ಬಳಿ ಮತಯಾಚನೆ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ‘ಟೇಕ್ ಕೇರ್ ಕಿಂಗ್’ ಎಂದ ಶಾರೂಖ್ ಅಭಿಮಾನಿಗಳು

rss

ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಹೆಸರು ಸಿದ್ಧಪಡಿಸಿ ಕೇಂದ್ರಕ್ಕೆ ಕಳುಹಿಸಿದ್ದೇವೆ. ಇಂದು ಅಥವಾ ನಾಳೆ ಅಭ್ಯರ್ಥಿಗಳ ಹೆಸರನ್ನು ಕೇಂದ್ರದ ನಾಯಕರು ಅಂತಿಮಗೊಳಿಸಲಿದ್ದಾರೆ ಎಂದರು.

ಕಠಿಣವಾದ ಶಿಕ್ಷೆ ಆಗಬೇಕು!

ಮತಾಂತರ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಮತಾಂತರ ಜಾಸ್ತಿ ಆಗುತ್ತಿದೆ ಎಂಬ ಚರ್ಚೆ ನಡೆಯುತ್ತಿದೆ. ಖಂಡಿತವಾಗಿ ಇದಕ್ಕೆ ಕಠಿಣವಾದ ಕಾನೂನು ತರಬೇಕು. ಮತಾಂತರ ತಡೆಯ ಕಾಯ್ದೆ ಆಗಲೇಬೇಕು. ಯಾರು ಯಾರು ಮತಾಂತರ ಮಾಡ್ತಾರೆ ಅವರಿಗೆ ಕಠಿಣವಾದ ಶಿಕ್ಷೆ ಆಗಬೇಕು. ಇದರ ಬಗ್ಗೆ ಅವಕಾಶ ಸಿಕ್ಕಿದಾಗ ಸಿಎಂ ಬೊಮ್ಮಾಯಿ ಅವರ ಜೊತೆ ಮಾತನಾಡುತ್ತೇನೆ. ಈ ಕುರಿತು ಪೂರ್ಣವಾದ ತನಿಖೆ ಆಗಬೇಕು. ಎಲ್ಲೆಲ್ಲಿ ಮತಾಂತರ ಚಟುವಟಿಕೆ ಕೇಂದ್ರ ಇದ್ದಾವೆ, ಆ ಕೇಂದ್ರಗಳ ಬಗ್ಗೆ ತಕ್ಷಣವಾದ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಇದನ್ನೂ ಓದಿ: 5ನೇ ತರಗತಿ ವಿದ್ಯಾರ್ಥಿನಿಗೆ ಕಿರುಕುಳ- ಶಿಕ್ಷಕ ಅರೆಸ್ಟ್

TAGGED:BKPKumaraswamyNalin Kumar KateelPublic TVShimogaಕುಮಾರಸ್ವಾಮಿನಳಿನ್ ಕುಮಾರ್ ಕಟೀಲ್ಪಬ್ಲಿಕ್ ಟಿವಿಬಿಕೆಪಿಶಿವಮೊಗ್ಗ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

By Poll
Bagalkot

ಬೈ ಎಲೆಕ್ಷನ್ ಅಖಾಡದಲ್ಲಿ ಕುರುಡು ಕಾಂಚಾಣ – ಬಾಗಲಕೋಟೆಯಲ್ಲಿ 65.68%, ದಾವಣಗೆರೆಯಲ್ಲಿ 63.04% ಮತದಾನ

Public TV
By Public TV
19 minutes ago
Kota Srinivas Poojary
Latest

ಹಿಂದೂ ಸಮಾಜಕ್ಕೆ ನ್ಯಾಯ ಕೇಳುವ ಸಂಘಟನೆ RSS: ಕೋಟ ಶ್ರೀನಿವಾಸ ಪೂಜಾರಿ

Public TV
By Public TV
31 minutes ago
Sriramulu
Districts

ಮಸ್ಕಿಯಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ – ಭರ್ಜರಿ ಬ್ಯಾಟಿಂಗ್ ಮಾಡಿದ ಶ್ರೀರಾಮುಲು

Public TV
By Public TV
34 minutes ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
36 minutes ago
CRIME
Chamarajanagar

ಮಹಿಳೆಯರ ಒಳ ಉಡುಪು ಕಳ್ಳತನ – ಆರೋಪಿ ವಶಕ್ಕೆ

Public TV
By Public TV
56 minutes ago
2nd PUC exam result ballari jail inmate pass
Bellary

2nd PUC ಪರೀಕ್ಷೆಯಲ್ಲಿ ಫಸ್ಟ್‌ ಕ್ಲಾಸ್‌ನಲ್ಲಿ ಪಾಸಾದ ಬಳ್ಳಾರಿ ಸೆಂಟ್ರಲ್‌ ಜೈಲಿನ ಕೈದಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?