Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾಖೆಗೆ ಬಂದು ಸಂಘದ ಶಿಕ್ಷಣ ಪಡೆಯಿರಿ, ನಿಮಗೂ ಒಳ್ಳೆಯದು – ಹೆಚ್‍ಡಿಕೆಗೆ ಕಟೀಲ್ ಸಲಹೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶಾಖೆಗೆ ಬಂದು ಸಂಘದ ಶಿಕ್ಷಣ ಪಡೆಯಿರಿ, ನಿಮಗೂ ಒಳ್ಳೆಯದು – ಹೆಚ್‍ಡಿಕೆಗೆ ಕಟೀಲ್ ಸಲಹೆ

Districts

ಶಾಖೆಗೆ ಬಂದು ಸಂಘದ ಶಿಕ್ಷಣ ಪಡೆಯಿರಿ, ನಿಮಗೂ ಒಳ್ಳೆಯದು – ಹೆಚ್‍ಡಿಕೆಗೆ ಕಟೀಲ್ ಸಲಹೆ

Public TV
Last updated: October 6, 2021 8:49 am
Public TV
Share
2 Min Read
nalin kumar bjp shivamogga 2
SHARE

– ಕಾಮಾಲೆ ರೋಗದವರಿಗೆ ಕಾಣೋದೆಲ್ಲಾ ಹಳದಿ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಶಾಖೆಗೆ ಬಂದು ಸಂಘದ ಶಿಕ್ಷಣ ಪಡೆಯಿರಿ, ನಿಮಗೂ ಒಳ್ಳೆಯದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಲಹೆ ನೀಡಿದರು.

Contents
  • – ಕಾಮಾಲೆ ರೋಗದವರಿಗೆ ಕಾಣೋದೆಲ್ಲಾ ಹಳದಿ
  • ಕುಟುಂಬದವರಿಗೆ ಎಲ್ಲ ಅಧಿಕಾರ ಕೊಟ್ಟವರು!
  • ಮತಗಟ್ಟೆ ಕಾರ್ಯಕ್ರಮ ಮುಗಿಸಿದೆ!
  • ಕಠಿಣವಾದ ಶಿಕ್ಷೆ ಆಗಬೇಕು!

ಆರ್‌ಎಸ್‌ಎಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ ನೀಡಿರುವ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಮಾಲೆ ರೋಗದವರಿಗೆ ಕಾಣೋದೆಲ್ಲಾ ಹಳದಿ. ಕುಮಾರಸ್ವಾಮಿ ಅವರು ಸಂಘದ ವಿರುದ್ಧ ಆರೋಪ ಮಾಡಿದ್ದಾರೆ. ಅವರಿಗೆ ಸಂಘದ ವಿಚಾರಧಾರೆ ಸರಿಯಾಗಿ ತಿಳಿದಿಲ್ಲ. ಅವರು ಶಾಖೆಗೆ ಭೇಟಿ ನೀಡಿ ಸಂಘದ ಚಟುವಟಿಕೆ ತಿಳಿದುಕೊಳ್ಳುವುದು ಒಳ್ಳೆಯದು. ಕುಮಾರಸ್ವಾಮಿ ಅವರೇ ಶಾಖೆಗೆ ಬಂದು ಸಂಘದ ಶಿಕ್ಷಣ ಪಡೆಯಿರಿ ನಿಮಗೂ ಒಳ್ಳೆಯದು ಆಗುತ್ತದೆ ಎಂದು ಸಲಹೆ ನೀಡಿದರು. ಇದನ್ನೂ ಓದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ- ಹವಾಮಾನ ಇಲಾಖೆ ಮುನ್ಸೂಚನೆ

nalin kumar bjp shivamogga 1

ಕುಟುಂಬದವರಿಗೆ ಎಲ್ಲ ಅಧಿಕಾರ ಕೊಟ್ಟವರು!

ಸಂಘ ಈ ದೇಶದಲ್ಲಿ ರಾಷ್ಟ್ರಭಕ್ತಿ ಉದ್ದೀಪನ ಮಾಡಿದೆ. ಪ್ರತಿಯೊಬ್ಬ ವ್ಯಕ್ತಿಯನ್ನು ರಾಷ್ಟ್ರದೃಷ್ಟಾನ ಮಾಡಬೇಕು ಎಂಬ ಚಿಂತನೆಯಿಂದ ಅವರಿಗೆ ಆರ್‌ಎಸ್‌ಎಸ್ ಶಿಕ್ಷಣ ಕೊಡುತ್ತೆ. ಅವರು ಅಧಿಕಾರದಲ್ಲಿ ಇದ್ದಾಗ ಜಾತಿವಾದದಲ್ಲಿ ಎಲ್ಲರನ್ನು ತೆಗೆದುಕೊಳ್ಳುತ್ತಿದ್ದರು. ಕುಟುಂಬ ರಾಜಕಾರಣ ಮಾಡಿದರು. ಕುಟುಂಬದವರಿಗೆ ಎಲ್ಲ ಅಧಿಕಾರ ಕೊಟ್ಟವರು. ಇಂತಹವರಿಂದ ಇದನ್ನು ಬಿಟ್ಟು ಬೇರೆ ನಿರೀಕ್ಷೆ ಮಾಡಲು ಸಾಧ್ಯವಾ? ಸಂಘದ ಶಿಕ್ಷಣ ಪಡೆದವರು ಐಎಎಸ್, ಐಪಿಎಸ್ ಅಧಿಕಾರಿ ಆದರೆ ನಾವು ಸಂತೋಷ ಪಡುತ್ತೇವೆ. ಅವರಿಂದಾಗಿ ದೇಶಕ್ಕೆ ಇನ್ನಷ್ಟು ಒಳ್ಳೆಯದು ಆಗುತ್ತದೆ ಎಂದರು.

rss

ಸಂಘದ ಶಿಕ್ಷಣ ಪಡೆದವರು ಸರ್ಕಾರದ ಯಾವ ಹುದ್ದೆಯಲ್ಲಿ ಇರಬಾರದು ಎಂದು ಹೇಗೆ ಹೇಳ್ತಾರೆ? ಈ ದೇಶದ ರಾಷ್ಟ್ರಪತಿ, ಈ ದೇಶದ ಪ್ರಧಾನ ಮಂತ್ರಿ ಸಂಘದ ಸ್ವಯಂ ಸೇವಕರು. ಸಂಘದ ಶಾಖೆಯಲ್ಲಿ ಸಂಸ್ಕಾರ ಕೊಡುವ ಕೆಲಸ ಮಾಡುತ್ತದೆ ಎಂದು ತಿಳಿಸಿದರು.

ಮತಗಟ್ಟೆ ಕಾರ್ಯಕ್ರಮ ಮುಗಿಸಿದೆ!

ಇದೇ ವೇಳೆ ಉಪ ಚುನಾವಣೆ ವಿಚಾರವಾಗಿ ಮಾತನಾಡಿದ ಕಟೀಲ್, ಸಿಂದಗಿ ಹಾಗೂ ಹಾನಗಲ್ ಕ್ಷೇತ್ರದಲ್ಲಿ ಉಪ ಚುನಾವಣೆ ಘೋಷಣೆ ಆಗಿದೆ. ಬಿಜೆಪಿ ಈಗಾಗಲೇ ಮತಗಟ್ಟೆ ಕಾರ್ಯಕ್ರಮ ಮುಗಿಸಿದೆ. ಎಲ್ಲ ಕಾರ್ಯಕರ್ತರು ಮನೆ ಮನೆ ಸಂಪರ್ಕ ಕಾರ್ಯಕ್ರಮ ಆರಂಭಿಸಿದ್ದಾರೆ. ಎರಡು ಕಡೆಯಲ್ಲಿ ಬಿಜೆಪಿ ಪರವಾದ ಅಲೆ ಇದೆ. ಎರಡು ಕಡೆ ಬಿಜೆಪಿ ಅಭೂತಪೂರ್ವವಾದ ಗೆಲುವು ಸಾಧಿಸುತ್ತದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳು, ಯೋಜನೆಗಳು ಹಾಗೂ ಸರ್ಕಾರದ ಸಾಧನೆ ಮುಂದಿಟ್ಟುಕೊಂಡು ಜನರ ಬಳಿ ಮತಯಾಚನೆ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ‘ಟೇಕ್ ಕೇರ್ ಕಿಂಗ್’ ಎಂದ ಶಾರೂಖ್ ಅಭಿಮಾನಿಗಳು

rss

ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಹೆಸರು ಸಿದ್ಧಪಡಿಸಿ ಕೇಂದ್ರಕ್ಕೆ ಕಳುಹಿಸಿದ್ದೇವೆ. ಇಂದು ಅಥವಾ ನಾಳೆ ಅಭ್ಯರ್ಥಿಗಳ ಹೆಸರನ್ನು ಕೇಂದ್ರದ ನಾಯಕರು ಅಂತಿಮಗೊಳಿಸಲಿದ್ದಾರೆ ಎಂದರು.

ಕಠಿಣವಾದ ಶಿಕ್ಷೆ ಆಗಬೇಕು!

ಮತಾಂತರ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಮತಾಂತರ ಜಾಸ್ತಿ ಆಗುತ್ತಿದೆ ಎಂಬ ಚರ್ಚೆ ನಡೆಯುತ್ತಿದೆ. ಖಂಡಿತವಾಗಿ ಇದಕ್ಕೆ ಕಠಿಣವಾದ ಕಾನೂನು ತರಬೇಕು. ಮತಾಂತರ ತಡೆಯ ಕಾಯ್ದೆ ಆಗಲೇಬೇಕು. ಯಾರು ಯಾರು ಮತಾಂತರ ಮಾಡ್ತಾರೆ ಅವರಿಗೆ ಕಠಿಣವಾದ ಶಿಕ್ಷೆ ಆಗಬೇಕು. ಇದರ ಬಗ್ಗೆ ಅವಕಾಶ ಸಿಕ್ಕಿದಾಗ ಸಿಎಂ ಬೊಮ್ಮಾಯಿ ಅವರ ಜೊತೆ ಮಾತನಾಡುತ್ತೇನೆ. ಈ ಕುರಿತು ಪೂರ್ಣವಾದ ತನಿಖೆ ಆಗಬೇಕು. ಎಲ್ಲೆಲ್ಲಿ ಮತಾಂತರ ಚಟುವಟಿಕೆ ಕೇಂದ್ರ ಇದ್ದಾವೆ, ಆ ಕೇಂದ್ರಗಳ ಬಗ್ಗೆ ತಕ್ಷಣವಾದ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಇದನ್ನೂ ಓದಿ: 5ನೇ ತರಗತಿ ವಿದ್ಯಾರ್ಥಿನಿಗೆ ಕಿರುಕುಳ- ಶಿಕ್ಷಕ ಅರೆಸ್ಟ್

TAGGED:BKPKumaraswamyNalin Kumar KateelPublic TVShimogaಕುಮಾರಸ್ವಾಮಿನಳಿನ್ ಕುಮಾರ್ ಕಟೀಲ್ಪಬ್ಲಿಕ್ ಟಿವಿಬಿಕೆಪಿಶಿವಮೊಗ್ಗ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
4 hours ago
big bulletin 09 March 2026 part 1
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-1

Public TV
By Public TV
4 hours ago
big bulletin 09 March 2026 part 2
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-2

Public TV
By Public TV
4 hours ago
big bulletin 09 March 2026 part 3
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-3

Public TV
By Public TV
4 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
5 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?