ಬೀದರ್: ಮಹಾತ್ಮ ಗಾಂಧಿ ಹೆಸರಿನಲ್ಲಿ ಈ ದೇಶದ ಜನರಿಗೆ ಕಾಂಗ್ರೆಸ್ ಟೋಪಿ ಹಾಕಿ ಮೋಸ, ವಂಚನೆ ಮಾಡಿದೆ. ಎಂದು ಬೀದರ್ನಲ್ಲಿ ನಡೆದ ಜನ ಸ್ವರಾಜ್ ಯಾತ್ರೆ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನವರು ದೇಶದ ಜನರನ್ನು ಬಡವರನ್ನಾಗಿಸಿದ್ದಾರೆ. ಗ್ರಾಮ ಸ್ವರಾಜ್ ಕಲ್ಪನೆಗೆ ಕಾಂಗ್ರೆಸ್ ಶಕ್ತಿ ತುಂಬಿಲ್ಲ, ಶಕ್ತಿ ತುಂಬಿದ್ದು ಪ್ರಧಾನಿ ಮೋದಿ. ಕಾಂಗ್ರೆಸ್ ಆಡಳಿತದಲ್ಲಿ ಈ ರಾಷ್ಟ್ರವನ್ನು ಜನರು ಭಿಕ್ಷೆ ಬೇಡುವ ರಾಷ್ಟ್ರ ಎಂದು ಕರೆದಿದ್ದರು ಯಾಕೆಂದ್ರೆ ಕಾಂಗ್ರೆಸ್ ಈ ದೇಶಕ್ಕೆ ನೀಡಿದ ಕೊಡುಗೆ ಭ್ರಷ್ಟಾಚಾರ, ಭಯೋತ್ಪಾದನೆ, ಬಡತನ, ನಿರುದ್ಯೋಗ ಎಂದು ಕಿಡಿಕಾರಿದರು. ಇದನ್ನೂ ಓದಿ: ದೇಶದ ಮೊದಲ ಬಾಸ್ಕೆಟ್ಬಾಲ್ ಲೀಗ್ಗೆ ಅದ್ಧೂರಿ ಚಾಲನೆ
ಜವಾಹರಲಾಲ್ ನೆಹರು ಅವರಿಂದ ಹಿಡಿದು ಮನಮೋಹನ್ ಸಿಂಗ್ವರೆಗೆ ಕಳಂಕಿತರಾಗಿ ಜೈಲಿಗೆ ಹೋದವರೆ. ಲಾಲ್ ಬಹದ್ದೂರ್ ಶಾಸ್ತ್ರಿಯೊಬ್ಬರೆ ಕಳಂಕ ರಹಿತ ಪ್ರಧಾನಿ. ಕಾಂಗ್ರೆಸ್ನಿಂದ ಗರೀಬಿ ಹಠಾವೋ ಎಂಬ ಘೋಷಣೆ ಜೋರಾಗಿತ್ತು ಆದರೆ ಗರೀಬಿ ಹಠಾವೋ ಆಗಿದ್ದು ಈಶ್ವರ್ ಖಂಡ್ರೆ ಹಾಗೂ ಮಲ್ಲಿಕಾರ್ಜುನ ಖರ್ಗೆ ಮನೆಯ ಬಡತನದ ನಿರ್ಮೂಲನೆಯಾಗಿದೆ ಆದರೆ ಬಡವರದ್ದು ಗರೀಬಿ ಹಠಾವೋ ಮಾತ್ರ ಆಗಲಿಲ್ಲ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ವಿದರ್ಭ ವಿರುದ್ಧ ಕರ್ನಾಟಕಕ್ಕೆ ರೋಚಕ ಜಯ – ಫೈನಲ್ಗೆ ಲಗ್ಗೆ